ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪರಶುರಾಮನ ಹಾರಾಟ!

ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪರಶುರಾಮನ ಹಾರಾಟ!

Published : Jan 24, 2021, 09:43 PM ISTUpdated : Jan 25, 2021, 09:00 AM IST

ಈ ಬಾರಿಯ ಗಣ ರಾಜ್ಯೋತ್ಸವದಲ್ಲಿ ಹಲವು ವಿಶೇಷತೆಗಳಿವೆ. 1947-48ರಲ್ಲಿ ನಡೆದ ಪಾಕಿಸ್ತಾನ ನಡುವಿನ ಘರ್ಷಣೆ ವೇಳೆ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿದೆ. ಡಕೋಟಾ ಏರ್‌ಕ್ರಾಫ್ಟ್ ಇದೀಗ ಪರಶುರಾಮ ಎಂಬ  ಹೆಸರಿನೊಂದಿಗೆ  ರಾಜಪಥದಲ್ಲಿ ಹಾರಾಟ ನಡೆಸಲಿದೆ
 

ಈ ಬಾರಿಯ ಗಣ ರಾಜ್ಯೋತ್ಸವದಲ್ಲಿ ಹಲವು ವಿಶೇಷತೆಗಳಿವೆ. 1947-48ರಲ್ಲಿ ನಡೆದ ಪಾಕಿಸ್ತಾನ ನಡುವಿನ ಘರ್ಷಣೆ ವೇಳೆ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿದೆ. ಡಕೋಟಾ ಏರ್‌ಕ್ರಾಫ್ಟ್ ಇದೀಗ ಪರಶುರಾಮ ಎಂಬ  ಹೆಸರಿನೊಂದಿಗೆ  ರಾಜಪಥದಲ್ಲಿ ಹಾರಾಟ ನಡೆಸಲಿದೆ.

ಹಿಂದೂ ಪುರಾಣದಲ್ಲಿನ ವಿಷ್ಣುವಿನ ಆರನೇ ಆವತಾರವಾಗಿರುವ ಪರಶುರಾಮನ ಹೆಸರನ್ನು ಈ ಡಕೋಟಾ ಏರ್‌ಕ್ರಾಫ್ಟ್‌ಗೆ ಇಡಲಾಗಿದೆ. 2018ರಲ್ಲಿ ಪರಶುರಾಮ ಏರ್‌ಕ್ರಾಪಫ್ಟ್ ಭಾರತೀಯ ವಾಯುಸೇನೆಯ 86ನೇ ವರ್ಷಾಚರಣೆಯಲ್ಲಿ ಮೊದಲ ಬಾರಿಗೆ ಪಾಲ್ಗೊಂಡಿತ್ತು.

ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್‌ನ್ನು ರಾಜ್ಯಸಭಾ ಸದಸ್ಯ, ಬಿಜೆಪಿ ವಕ್ತಾರ ರಾಜೀವ್ ಚಂದ್ರಶೇಖರ್ ಖರೀದಿಸಿ ವಾಯುಸೇನೆಗೆ ಉಡುಗೊರೆಯಾಗಿ ನೀಡಿದ್ದಾರೆ. ಚಂದ್ರಶೇಖರ್ ತಂದೆ MK ಚಂದ್ರಶೇಕರ್ ಇದೇ ಡಕೋಟಾ ಏರ್‌ಕ್ರಾಫ್ಟ್ ಪೈಲೆಟ್ ಆಗಿ ಸೇವೆ ಸಲ್ಲಿಸಿದ್ದರು.

ಅಕ್ಟೋಬರ್ 26, 1947ರಲ್ಲಿ ಬುಡಕಟ್ಟು ಉಗ್ರರಿಂದ ಶ್ರೀನಗರ ರಕ್ಷಿಸಿದ ಹೆಗ್ಗಳಿಕೆ ಇದೇ ಡಕೋಟ ಏರ್‌ಕ್ರಾಫ್ಟ್‌ಗಿದೆ. ಡಕೋಟಾ ಏರ್‌ಕ್ರಾಫ್ಟ್ ಮೂಲಕ ಸೈನಿಕರನ್ನು ಏರ್‌ಲಿಫ್ಟ್ ಮಾಡಿ, ಶ್ರೀನಗರ ಉಳಿಸುವಲ್ಲಿ ಯಶಸ್ವಿಯಾಗಿತ್ತು. ಇನ್ನು ಬಾಂಗ್ಲಾಗೆ ಸ್ವಾತಂತ್ರ್ಯ ಕೊಡುವಲ್ಲಿ ಇದೇ ಡಕೋಟಾ ಏರ್‌ಕ್ರಾಫ್ಟ್ ಪ್ರಮುಖ ಪಾತ್ರ ನಿರ್ವಹಿಸಿತ್ತು.
 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು