Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!

Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!

Published : Dec 01, 2025, 07:37 PM ISTUpdated : Dec 01, 2025, 07:38 PM IST

ಹೈದರಾಬಾದ್‌ನ ಪೂರ್ಣಿಮಾ ಶಾಲೆಯಲ್ಲಿ, ಬಟ್ಟೆಯಲ್ಲಿ ಮೂತ್ರ ಮಾಡಿದ್ದಕ್ಕೆ ನರ್ಸರಿ ಬಾಲಕಿಯನ್ನು ಶಾಲೆಯ ಆಯಾ ಕ್ರೂರವಾಗಿ ಥಳಿಸಿದ್ದಾಳೆ. ಸ್ಥಳೀಯರು ಚಿತ್ರೀಕರಿಸಿದ ಈ ಹಲ್ಲೆಯ ವಿಡಿಯೋ ವೈರಲ್ ಆಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೈದರಾಬಾದ್‌ (ಡಿ.1):ಆಘಾತಕಾರಿ ಮತ್ತು ಹೃದಯವಿದ್ರಾವಕ ಘಟನೆಯೊಂದರಲ್ಲಿ, ಹೈದರಾಬಾದ್‌ನ ಶಾಪುರ್ ನಗರದ ಪೂರ್ಣಿಮಾ ಶಾಲೆಯ ನರ್ಸರಿ ಬಾಲಕಿಯನ್ನು ಶಾಲೆಯ ಆಯಾ, ಕ್ರೂರವಾಗಿ ಥಳಿಸಿ ನೆಲಕ್ಕೆ ತಳ್ಳಿದ ಘಟನೆ ನವೆಂಬರ್ 29 ರ ಶನಿವಾರ ನಡೆದಿದೆ. ನಂತರ ಮಗುವಿಗೆ ತೀವ್ರ ಜ್ವರ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರೊಬ್ಬರು ಹಲ್ಲೆಯ ದೃಶ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಒಂದು ಹೆಣ್ಣಾಗ್ಲಿ ಅಂತ ಪ್ರೆಗ್ನೆಂಟ್ ಆದ 3 ಗಂಡ್ಮಕ್ಕಳ ತಾಯಿಗೆ ಅಲ್ಟ್ರಾಸೌಂಡ್ ನಲ್ಲಿ ಶಾಕ್, ಈಗ ಹುಟ್ಟೋದು ಒಂದಲ್ಲ ಎರಡಲ್ಲ..!

ವರದಿಗಳ ಪ್ರಕಾರ, ಬಾಲಕಿ ಕ್ಲಾಸ್‌ನಲ್ಲಿ ತನ್ನ ಬಟ್ಟೆಯಲ್ಲಿಯೇ ಮೂತ್ರ ಮಾಡಿದ್ದಳು. ಈ ವೇಳೆ ಶಿಕ್ಷಕಿ ಶಾಲೆಯ ಆಯಾಳನ್ನು ಕರೆದು ಆಕೆಯ ಬಟ್ಟೆಯನ್ನು ಬದಲಾಯಿಸುವಂತೆ ಹೇಳಿದ್ದರು. ಆದರೆ, ಬಾಲಕಿಗೆ ಡ್ರೆಸ್‌ ಬದಲಾಯಿಸಲು ಸಹಾಯ ಮಾಡುವ ಬದಲು, ಮುಕ್ತ ಆವರಣದಲ್ಲಿ ಆಕೆಯನ್ನು ಹೊಡೆಯಲು ಆರಂಭಿಸಿದ್ದಳು.

ಅಂದಾಜು 4 ನಿಮಿಷದ ವಿಡಿಯೋ ಇದಾಗಿದ್ದು, ಶಾಲೆಯ ಆಯಾ ಅತ್ಯಂತ ಕ್ರೂರವಾಗಿ ಬಾಲಕಿಯ ಜೊತೆ ವರ್ತಿಸಿದ್ದಾರೆ. ಆಕೆಯನ್ನು ನೆಲಕ್ಕೆ ಬಡಿದಿದ್ದು ಮಾತ್ರವಲ್ಲದೆ, ನಿರಂತರವಾಗಿ ಆಕೆಯ ಕೆನ್ನೆಗೆ ಹೊಡೆದಿದ್ದಾಳೆ. ಆಕೆಯ ಕೂದಲನ್ನು ಎಳೆದು ಹಿಂಸೆ ಮಾಡಿದ್ದಲ್ಲದೆ, ಆಕೆಯ ತಲೆಯನ್ನು ನೆಲಕ್ಕೆ ಬಡಿದಿದ್ದಾಳೆ. ಆಕೆಯ ಮೇಲೆ ಹಿಂಸೆ ಅತಿಯಾಗುತ್ತಿದ್ದಂತೆ ಮಗು ನಿರಂತರವಾಗಿ ಅಳುವುದು ಕೂಡ ವಿಡಿಯೋದಲ್ಲಿ ದಾಖಲಾಗಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more