Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!

Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!

Published : Dec 01, 2025, 07:37 PM ISTUpdated : Dec 01, 2025, 07:38 PM IST

ಹೈದರಾಬಾದ್‌ನ ಪೂರ್ಣಿಮಾ ಶಾಲೆಯಲ್ಲಿ, ಬಟ್ಟೆಯಲ್ಲಿ ಮೂತ್ರ ಮಾಡಿದ್ದಕ್ಕೆ ನರ್ಸರಿ ಬಾಲಕಿಯನ್ನು ಶಾಲೆಯ ಆಯಾ ಕ್ರೂರವಾಗಿ ಥಳಿಸಿದ್ದಾಳೆ. ಸ್ಥಳೀಯರು ಚಿತ್ರೀಕರಿಸಿದ ಈ ಹಲ್ಲೆಯ ವಿಡಿಯೋ ವೈರಲ್ ಆಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೈದರಾಬಾದ್‌ (ಡಿ.1):ಆಘಾತಕಾರಿ ಮತ್ತು ಹೃದಯವಿದ್ರಾವಕ ಘಟನೆಯೊಂದರಲ್ಲಿ, ಹೈದರಾಬಾದ್‌ನ ಶಾಪುರ್ ನಗರದ ಪೂರ್ಣಿಮಾ ಶಾಲೆಯ ನರ್ಸರಿ ಬಾಲಕಿಯನ್ನು ಶಾಲೆಯ ಆಯಾ, ಕ್ರೂರವಾಗಿ ಥಳಿಸಿ ನೆಲಕ್ಕೆ ತಳ್ಳಿದ ಘಟನೆ ನವೆಂಬರ್ 29 ರ ಶನಿವಾರ ನಡೆದಿದೆ. ನಂತರ ಮಗುವಿಗೆ ತೀವ್ರ ಜ್ವರ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರೊಬ್ಬರು ಹಲ್ಲೆಯ ದೃಶ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಒಂದು ಹೆಣ್ಣಾಗ್ಲಿ ಅಂತ ಪ್ರೆಗ್ನೆಂಟ್ ಆದ 3 ಗಂಡ್ಮಕ್ಕಳ ತಾಯಿಗೆ ಅಲ್ಟ್ರಾಸೌಂಡ್ ನಲ್ಲಿ ಶಾಕ್, ಈಗ ಹುಟ್ಟೋದು ಒಂದಲ್ಲ ಎರಡಲ್ಲ..!

ವರದಿಗಳ ಪ್ರಕಾರ, ಬಾಲಕಿ ಕ್ಲಾಸ್‌ನಲ್ಲಿ ತನ್ನ ಬಟ್ಟೆಯಲ್ಲಿಯೇ ಮೂತ್ರ ಮಾಡಿದ್ದಳು. ಈ ವೇಳೆ ಶಿಕ್ಷಕಿ ಶಾಲೆಯ ಆಯಾಳನ್ನು ಕರೆದು ಆಕೆಯ ಬಟ್ಟೆಯನ್ನು ಬದಲಾಯಿಸುವಂತೆ ಹೇಳಿದ್ದರು. ಆದರೆ, ಬಾಲಕಿಗೆ ಡ್ರೆಸ್‌ ಬದಲಾಯಿಸಲು ಸಹಾಯ ಮಾಡುವ ಬದಲು, ಮುಕ್ತ ಆವರಣದಲ್ಲಿ ಆಕೆಯನ್ನು ಹೊಡೆಯಲು ಆರಂಭಿಸಿದ್ದಳು.

ಅಂದಾಜು 4 ನಿಮಿಷದ ವಿಡಿಯೋ ಇದಾಗಿದ್ದು, ಶಾಲೆಯ ಆಯಾ ಅತ್ಯಂತ ಕ್ರೂರವಾಗಿ ಬಾಲಕಿಯ ಜೊತೆ ವರ್ತಿಸಿದ್ದಾರೆ. ಆಕೆಯನ್ನು ನೆಲಕ್ಕೆ ಬಡಿದಿದ್ದು ಮಾತ್ರವಲ್ಲದೆ, ನಿರಂತರವಾಗಿ ಆಕೆಯ ಕೆನ್ನೆಗೆ ಹೊಡೆದಿದ್ದಾಳೆ. ಆಕೆಯ ಕೂದಲನ್ನು ಎಳೆದು ಹಿಂಸೆ ಮಾಡಿದ್ದಲ್ಲದೆ, ಆಕೆಯ ತಲೆಯನ್ನು ನೆಲಕ್ಕೆ ಬಡಿದಿದ್ದಾಳೆ. ಆಕೆಯ ಮೇಲೆ ಹಿಂಸೆ ಅತಿಯಾಗುತ್ತಿದ್ದಂತೆ ಮಗು ನಿರಂತರವಾಗಿ ಅಳುವುದು ಕೂಡ ವಿಡಿಯೋದಲ್ಲಿ ದಾಖಲಾಗಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more