Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!

Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!

Published : Dec 01, 2025, 07:37 PM ISTUpdated : Dec 01, 2025, 07:38 PM IST

ಹೈದರಾಬಾದ್‌ನ ಪೂರ್ಣಿಮಾ ಶಾಲೆಯಲ್ಲಿ, ಬಟ್ಟೆಯಲ್ಲಿ ಮೂತ್ರ ಮಾಡಿದ್ದಕ್ಕೆ ನರ್ಸರಿ ಬಾಲಕಿಯನ್ನು ಶಾಲೆಯ ಆಯಾ ಕ್ರೂರವಾಗಿ ಥಳಿಸಿದ್ದಾಳೆ. ಸ್ಥಳೀಯರು ಚಿತ್ರೀಕರಿಸಿದ ಈ ಹಲ್ಲೆಯ ವಿಡಿಯೋ ವೈರಲ್ ಆಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೈದರಾಬಾದ್‌ (ಡಿ.1):ಆಘಾತಕಾರಿ ಮತ್ತು ಹೃದಯವಿದ್ರಾವಕ ಘಟನೆಯೊಂದರಲ್ಲಿ, ಹೈದರಾಬಾದ್‌ನ ಶಾಪುರ್ ನಗರದ ಪೂರ್ಣಿಮಾ ಶಾಲೆಯ ನರ್ಸರಿ ಬಾಲಕಿಯನ್ನು ಶಾಲೆಯ ಆಯಾ, ಕ್ರೂರವಾಗಿ ಥಳಿಸಿ ನೆಲಕ್ಕೆ ತಳ್ಳಿದ ಘಟನೆ ನವೆಂಬರ್ 29 ರ ಶನಿವಾರ ನಡೆದಿದೆ. ನಂತರ ಮಗುವಿಗೆ ತೀವ್ರ ಜ್ವರ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರೊಬ್ಬರು ಹಲ್ಲೆಯ ದೃಶ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಒಂದು ಹೆಣ್ಣಾಗ್ಲಿ ಅಂತ ಪ್ರೆಗ್ನೆಂಟ್ ಆದ 3 ಗಂಡ್ಮಕ್ಕಳ ತಾಯಿಗೆ ಅಲ್ಟ್ರಾಸೌಂಡ್ ನಲ್ಲಿ ಶಾಕ್, ಈಗ ಹುಟ್ಟೋದು ಒಂದಲ್ಲ ಎರಡಲ್ಲ..!

ವರದಿಗಳ ಪ್ರಕಾರ, ಬಾಲಕಿ ಕ್ಲಾಸ್‌ನಲ್ಲಿ ತನ್ನ ಬಟ್ಟೆಯಲ್ಲಿಯೇ ಮೂತ್ರ ಮಾಡಿದ್ದಳು. ಈ ವೇಳೆ ಶಿಕ್ಷಕಿ ಶಾಲೆಯ ಆಯಾಳನ್ನು ಕರೆದು ಆಕೆಯ ಬಟ್ಟೆಯನ್ನು ಬದಲಾಯಿಸುವಂತೆ ಹೇಳಿದ್ದರು. ಆದರೆ, ಬಾಲಕಿಗೆ ಡ್ರೆಸ್‌ ಬದಲಾಯಿಸಲು ಸಹಾಯ ಮಾಡುವ ಬದಲು, ಮುಕ್ತ ಆವರಣದಲ್ಲಿ ಆಕೆಯನ್ನು ಹೊಡೆಯಲು ಆರಂಭಿಸಿದ್ದಳು.

ಅಂದಾಜು 4 ನಿಮಿಷದ ವಿಡಿಯೋ ಇದಾಗಿದ್ದು, ಶಾಲೆಯ ಆಯಾ ಅತ್ಯಂತ ಕ್ರೂರವಾಗಿ ಬಾಲಕಿಯ ಜೊತೆ ವರ್ತಿಸಿದ್ದಾರೆ. ಆಕೆಯನ್ನು ನೆಲಕ್ಕೆ ಬಡಿದಿದ್ದು ಮಾತ್ರವಲ್ಲದೆ, ನಿರಂತರವಾಗಿ ಆಕೆಯ ಕೆನ್ನೆಗೆ ಹೊಡೆದಿದ್ದಾಳೆ. ಆಕೆಯ ಕೂದಲನ್ನು ಎಳೆದು ಹಿಂಸೆ ಮಾಡಿದ್ದಲ್ಲದೆ, ಆಕೆಯ ತಲೆಯನ್ನು ನೆಲಕ್ಕೆ ಬಡಿದಿದ್ದಾಳೆ. ಆಕೆಯ ಮೇಲೆ ಹಿಂಸೆ ಅತಿಯಾಗುತ್ತಿದ್ದಂತೆ ಮಗು ನಿರಂತರವಾಗಿ ಅಳುವುದು ಕೂಡ ವಿಡಿಯೋದಲ್ಲಿ ದಾಖಲಾಗಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more