ಬಿಜೆಪಿ ಲೀಡರ್ ಮನೆಗೂ ನುಗ್ಗಿತು ಯೋಗಿ ಬುಲ್ಡೋಜರ್..!

ಬಿಜೆಪಿ ಲೀಡರ್ ಮನೆಗೂ ನುಗ್ಗಿತು ಯೋಗಿ ಬುಲ್ಡೋಜರ್..!

Published : Aug 09, 2022, 10:01 PM IST

ಮಹಿಳೆಯೊಬ್ಬಳನ್ನು ಹಲ್ಲೆ ಮಾಡಿ ನಿಂದನೆ ನಡೆಸಿದ ಆರೋಪದ ಮೇಲೆ ಸ್ವಯಂ ಘೋಷಿತ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಮನೆ ಮೇಲೆ ಬುಲ್ಡೋಜರ್ ದಾಳಿ ನಡೆಸಲಾಗಿದೆ.

ಲಕ್ನೋ: ಉತ್ತರಪ್ರದೇಶದಲ್ಲಿ ಯಾರಾದರೂ ಬಾಲ ಬಿಚ್ಚಿದ್ರೆ, ಕಲ್ಲು ತೂರಾಟ, ಗೂಂಡಾಗರಿ ನಡೆಸಿದರೆ ಯೋಗಿ ಸರ್ಕಾರ ಅವರ ಮನೆ ಮೇಲೆ ಬುಲ್ಡೋಜರ್‌ ಹತ್ತಿಸುತ್ತೆ. ಅದು ಎಂತಹ ನಾಯಕನೇ ಆಗಿರಬಹುದು ಹಿಂದೂ ಮುಂದೆ ನೋಡದೇ ಅಕ್ರಮವೆಸಗುವವರ ವಿರುದ್ಧ ಕ್ರಮ ಕೈಗೊಳ್ಳುವ ಯೋಗಿ ಸರ್ಕಾರ ಭ್ರಷ್ಟರ ಪಾಲಿಗೆ ಸಿಂಹಸ್ವಪ್ನವಾಗಿದ್ದಾರೆ. ಯೋಗಿ ಸರ್ಕಾರದ ಹೊಸ ಕಾನೂನು ಆ ರೀತಿ ಇದೆ. ಹಾಗೆಯೇ ಈಗ ನೋಯ್ಡಾ ಸೆಕ್ಟರ್ 93 ಬಿಯಲ್ಲಿ ಗ್ರಾಂಡ್‌ ಒಮೆಕ್ಸ್‌ ಸೊಸೈಟಿಯ ನಿವಾಸಿಯ ಮಹಿಳೆಯೊಬ್ಬಳನ್ನು ಹಲ್ಲೆ ಮಾಡಿ ನಿಂದನೆ ನಡೆಸಿದ ಆರೋಪದ ಮೇಲೆ ಸ್ವಯಂ ಘೋಷಿತ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಮನೆ ಮೇಲೆ ಬುಲ್ಡೋಜರ್ ದಾಳಿ ನಡೆಸಲಾಗಿದೆ. ಮರಗಳನ್ನು ನೆಡುವ ಬಗ್ಗೆ ಮಹಿಳೆ ಹಾಗೂ ಶ್ರೀಕಾಂತ್ ತ್ಯಾಗಿ ಮಧ್ಯೆ ವಾಗ್ವಾದ ಉಂಟಾಗಿ ಶ್ರೀಕಾಂತ್ ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಶ್ರೀಕಾಂತ್ ವಿರುದ್ಧ ಐಪಿಸಿ ಸೆಕ್ಷನ್‌ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈಗ ಬುಲ್ಡೋಜರ್ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಮ್ಮ ರಾಜ್ಯದಲ್ಲೂ ಅಂತ ಕಾನೂ ಬರಲಿ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. 
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more