ಮೋದಿ ಮೇಲೆ ಪ್ರಿಯಾಂಕ್ ಮುನಿಸು: ಸಿನಿಯರ್ ಖರ್ಗೆ ಬಗ್ಗೆ ಹಗುರ ಮಾತು ಸಲ್ಲ!

Mar 6, 2019, 9:45 PM IST

ಬೆಂಗಳೂರು(ಮಾ.06): ಪ್ರಧಾನಿ ನರೇಂದ್ರ ಮೋದಿ ಮತ್ತು ಇಂದು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಉಮೇಶ್ ಜಾಧವ್ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ. ಇದೇ ನನ್ನ ಕೊನೆಯ ಚುನಾವಣೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂಬ ಮಾತಿಗೆ ಸಿಟ್ಟಾದ ಪ್ರಿಯಾಂಕ್ ಖರ್ಗೆ, ತಮ್ಮ ತಂದೆ ಆ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ ಬದಲಾಗಿ ನಾನು 11 ಚುನಾವಣೆಗಳನ್ನು ಎದುರಿಸಿದ್ದು, ಇದು ನನ್ನ 12ನೇಯ ಚುನಾವಣೆಯಾಗಲಿದೆ ಎಂದು ಹೇಳಿದ್ದಾರೆ ಎಂದು ಪ್ರಿಯಂಕ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...