ಬೆಂಗಳೂರಿನಲ್ಲಿ ಬಲಿ ಪಡೆಯಲು ಕಾಯ್ತಿದೆ 11,361 ರಸ್ತೆ ಗುಂಡಿಗಳು !

ಬೆಂಗಳೂರಿನಲ್ಲಿ ಬಲಿ ಪಡೆಯಲು ಕಾಯ್ತಿದೆ 11,361 ರಸ್ತೆ ಗುಂಡಿಗಳು !

Published : Oct 19, 2023, 11:35 AM IST

ಬೆಂಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿಯಿಂದ ರಸ್ತೆ ಗುಂಡಿ ಹೆಚ್ಚಾಗ್ತಿವೆ. ಎಷ್ಟು ಗುಂಡಿ ಮುಚ್ಚಿದ್ರು ಮೂರೇ ದಿನಕ್ಕೆ ಬಾಯ್ತೆರೆಯುತ್ತವೆ. ರಸ್ತೆ ಗುಂಡಿ ಮುಚ್ಚಲು ಈಗ ಬಿಬಿಎಂಪಿ ಮುಖ್ಯ ಆಯುಕ್ತರು ಗುಡುವು ನೀಡಿದ್ದಾರೆ. ನವೆಂಬರ್ 30ರ ಒಳಗಡೆ ಮೇಜರ್ ರಸ್ತೆಗಳ ಗುಂಡಿ ಮುಚ್ಚಲು ಸೂಚನೆ ನೀಡಲಾಗಿದೆ.

ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡೋ ಕನಸನ್ನ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಕನಸು ಕಾಣ್ತಾ ಇದ್ದಾರೆ. ಆದ್ರೆ ಒಂದೇ ಒಂದು ಮಳೆಗೆ  ಕೋಟಿ ಕೋಟಿ ಸುರಿದು ಮುಚ್ಚಿದ ರಸ್ತೆ ಗುಂಡಿಗಳು ಬಣ್ಣ ಬಯಲಾಗ್ತಿದೆ. ಈಗ ಮತ್ತೆ ರಸ್ತೆ ಗುಂಡಿಗಳ‌ ಅವಾಂತರ ಜಾಸ್ತಿ ಆಗಿದ್ದು ರಸ್ತೆ ಗುಂಡಿ ಮುಚ್ಚೋದಕ್ಕೆ ಬಿಬಿಎಂಪಿ(BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ವಲಯ ಆಯುಕ್ತರುಗಳಿಗೆ ನವೆಂಬರ್ 30ರ ಒಳಗಡೆ ಮೇಜರ್ ರಸ್ತೆಗುಂಡಿಗಳನ್ನ ಮುಚ್ಚುವಂತೆ ಸೂಚಿಸಿದ್ದಾರೆ. ಈಗಾಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೂಡ ನವೆಂಬರ್ 30 ರ ಒಳಗಡೆ ರಸ್ತೆ ಗುಂಡಿ(road potholes) ಮುಚ್ಚಬೇಕು ಅಂತಾ ಹೇಳಿದ್ದಾರೆ.‌ 11,361 ಗುಂಡಿಗಳನ್ನ ಗುರುತಿಸಿದ್ದು ಅವುಗಳನ್ನು ಮುಚ್ಚಬೇಕಾಗಿದೆ‌.ಬೊಮ್ಮನಹಳ್ಳಿ ವಲಯದಲ್ಲಿ  319 ರಸ್ತೆ ಗುಂಡಿ ಮುಚ್ಚಬೇಕಿದೆ, ದಾಸರಹಳ್ಳಿ ವಲಯದಲ್ಲಿ  1317 ಗುಂಡಿ ಮುಚ್ಚಬೇಕಿದೆ, ಪೂರ್ವ ವಲಯ್ಲಗಲಿ 1646, ಮಹಾದೇವಪುರ ವಲಯದಲ್ಲಿ 595, ಆರ್ಆರ್ ನಗರ ವಲಯದಲ್ಲಿ 845, ದಕ್ಷಿಣ ವಲಯದಲ್ಲಿ 401, ಪಶ್ಚಿಮ ವಲಯದಲ್ಲಿ  422, ಯಲಹಂಕ ವಲಯದಲ್ಲಿ 423ಗುಂಡಿ ಮುಚ್ಚಬೇಕಿದೆ.ಗುಂಡಿ ಗಂಡಾಂತರದಿಂದ ಬೆಂಗಳೂರಿನ ವಾಹನ‌ ಸವಾರರು ಬೇಸತ್ತು ಹೋಗಿದ್ದು ಸರ್ಕಾರಕ್ಕೆ  ಹಿಡಿಶಾಪ ಹಾಕುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕರಾವಳಿಯಲ್ಲಿ ಮತ್ತೊಂದು ಚಂಡಮಾರುತ ಭೀತಿ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more