Bengaluru: ಮರಿಯಪ್ಪನ ಪಾಳ್ಯದಲ್ಲಿ ಸಿಲಿಂಡರ್ ಬ್ಲಾಸ್ಟ್: 13 ಜನರಿಗೆ ಗಾಯ

Bengaluru: ಮರಿಯಪ್ಪನ ಪಾಳ್ಯದಲ್ಲಿ ಸಿಲಿಂಡರ್ ಬ್ಲಾಸ್ಟ್: 13 ಜನರಿಗೆ ಗಾಯ

Published : Mar 03, 2023, 08:57 PM IST

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟವಾಗಿದ್ದು, ಒಂದೇ ಕುಟುಂಬದ 13 ಜನರಿಗೆ ಗಾಯವಾಗಿ, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. 

ಬೆಂಗಳೂರು (ಮಾ.03): ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟವಾಗಿದ್ದು, ಒಂದೇ ಕುಟುಂಬದ 13 ಜನರಿಗೆ ಗಾಯವಾಗಿ, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. ಇಂದು ಮನೆಯಲ್ಲಿ ಕಾರ್ಯಕ್ರಮವಿದ್ದ ಕಾರಣ ಸಂಬಂಧಿಕರನ್ನ ಕರೆಸಿ ರಾತ್ರಿಯೆಲ್ಲ ಅಡುಗೆ ಮಾಡಿಸಿದ್ದಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಇವತ್ತು ಬೆಳಗ್ಗೆ ಶುಭ ಕಾರ್ಯ ನಡೆಯಬೇಕಿತ್ತು. ಆದರೆ ಬೆಳಗ್ಗೆ ಸುಮಾರು 6.10 ರ‌ ಸಮಯದಲ್ಲಿ ಹಾಲು ಕಾಯಿಸಲು ಹೋದಾಗ ಗ್ಯಾಸ್ ಲೀಕೇಜ್ ಆಗಿರೋದು ಗೊತ್ತೇ ಆಗಿಲ್ಲ .ಲೈಟರ್ ಆನ್ ಮಾಡಿದ್ದಾರಷ್ಟೆ, ಬೆಂಕಿಯ ಕಿಡಿಗೆ ಸಿಲಿಂಡರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಮಲಗಿದ್ದ ಹದಿಮೂರು ಜನರು ‌ಗಾಯಗೊಂಡಿದ್ದಾರೆ. ಅದರಲ್ಲಿ ಆರು ಜನ ಮಹಿಳೆಯರು , ಮೂವರು ಮಕ್ಕಳು ಇದ್ದಾರೆ. ಇನ್ನೂ ಸ್ಟೋಟದ ಶಬ್ದಕೇಳಿದ ಸ್ಥಳೀಯರು ಓಡಿ ಬಂದು ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ರೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಕರೆ ಮಾಡಿ ಒಂದು‌ ಗಂಟೆಯಾದರೂ ಅಂಬ್ಯುಲೆನ್ಸ್ ಬಾರದೆ ಗಾಯಾಳುಗಳು ಪರದಾಡಿದ್ರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಸಂಬಂಧ ರಾಜಾಜಿನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more