Bengaluru: ಮರಿಯಪ್ಪನ ಪಾಳ್ಯದಲ್ಲಿ ಸಿಲಿಂಡರ್ ಬ್ಲಾಸ್ಟ್: 13 ಜನರಿಗೆ ಗಾಯ

Bengaluru: ಮರಿಯಪ್ಪನ ಪಾಳ್ಯದಲ್ಲಿ ಸಿಲಿಂಡರ್ ಬ್ಲಾಸ್ಟ್: 13 ಜನರಿಗೆ ಗಾಯ

Published : Mar 03, 2023, 08:57 PM IST

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟವಾಗಿದ್ದು, ಒಂದೇ ಕುಟುಂಬದ 13 ಜನರಿಗೆ ಗಾಯವಾಗಿ, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. 

ಬೆಂಗಳೂರು (ಮಾ.03): ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟವಾಗಿದ್ದು, ಒಂದೇ ಕುಟುಂಬದ 13 ಜನರಿಗೆ ಗಾಯವಾಗಿ, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. ಇಂದು ಮನೆಯಲ್ಲಿ ಕಾರ್ಯಕ್ರಮವಿದ್ದ ಕಾರಣ ಸಂಬಂಧಿಕರನ್ನ ಕರೆಸಿ ರಾತ್ರಿಯೆಲ್ಲ ಅಡುಗೆ ಮಾಡಿಸಿದ್ದಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಇವತ್ತು ಬೆಳಗ್ಗೆ ಶುಭ ಕಾರ್ಯ ನಡೆಯಬೇಕಿತ್ತು. ಆದರೆ ಬೆಳಗ್ಗೆ ಸುಮಾರು 6.10 ರ‌ ಸಮಯದಲ್ಲಿ ಹಾಲು ಕಾಯಿಸಲು ಹೋದಾಗ ಗ್ಯಾಸ್ ಲೀಕೇಜ್ ಆಗಿರೋದು ಗೊತ್ತೇ ಆಗಿಲ್ಲ .ಲೈಟರ್ ಆನ್ ಮಾಡಿದ್ದಾರಷ್ಟೆ, ಬೆಂಕಿಯ ಕಿಡಿಗೆ ಸಿಲಿಂಡರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಮಲಗಿದ್ದ ಹದಿಮೂರು ಜನರು ‌ಗಾಯಗೊಂಡಿದ್ದಾರೆ. ಅದರಲ್ಲಿ ಆರು ಜನ ಮಹಿಳೆಯರು , ಮೂವರು ಮಕ್ಕಳು ಇದ್ದಾರೆ. ಇನ್ನೂ ಸ್ಟೋಟದ ಶಬ್ದಕೇಳಿದ ಸ್ಥಳೀಯರು ಓಡಿ ಬಂದು ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ರೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಕರೆ ಮಾಡಿ ಒಂದು‌ ಗಂಟೆಯಾದರೂ ಅಂಬ್ಯುಲೆನ್ಸ್ ಬಾರದೆ ಗಾಯಾಳುಗಳು ಪರದಾಡಿದ್ರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಸಂಬಂಧ ರಾಜಾಜಿನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more