Bengaluru: ಮರಿಯಪ್ಪನ ಪಾಳ್ಯದಲ್ಲಿ ಸಿಲಿಂಡರ್ ಬ್ಲಾಸ್ಟ್: 13 ಜನರಿಗೆ ಗಾಯ

Bengaluru: ಮರಿಯಪ್ಪನ ಪಾಳ್ಯದಲ್ಲಿ ಸಿಲಿಂಡರ್ ಬ್ಲಾಸ್ಟ್: 13 ಜನರಿಗೆ ಗಾಯ

Published : Mar 03, 2023, 08:57 PM IST

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟವಾಗಿದ್ದು, ಒಂದೇ ಕುಟುಂಬದ 13 ಜನರಿಗೆ ಗಾಯವಾಗಿ, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. 

ಬೆಂಗಳೂರು (ಮಾ.03): ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟವಾಗಿದ್ದು, ಒಂದೇ ಕುಟುಂಬದ 13 ಜನರಿಗೆ ಗಾಯವಾಗಿ, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. ಇಂದು ಮನೆಯಲ್ಲಿ ಕಾರ್ಯಕ್ರಮವಿದ್ದ ಕಾರಣ ಸಂಬಂಧಿಕರನ್ನ ಕರೆಸಿ ರಾತ್ರಿಯೆಲ್ಲ ಅಡುಗೆ ಮಾಡಿಸಿದ್ದಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಇವತ್ತು ಬೆಳಗ್ಗೆ ಶುಭ ಕಾರ್ಯ ನಡೆಯಬೇಕಿತ್ತು. ಆದರೆ ಬೆಳಗ್ಗೆ ಸುಮಾರು 6.10 ರ‌ ಸಮಯದಲ್ಲಿ ಹಾಲು ಕಾಯಿಸಲು ಹೋದಾಗ ಗ್ಯಾಸ್ ಲೀಕೇಜ್ ಆಗಿರೋದು ಗೊತ್ತೇ ಆಗಿಲ್ಲ .ಲೈಟರ್ ಆನ್ ಮಾಡಿದ್ದಾರಷ್ಟೆ, ಬೆಂಕಿಯ ಕಿಡಿಗೆ ಸಿಲಿಂಡರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಮಲಗಿದ್ದ ಹದಿಮೂರು ಜನರು ‌ಗಾಯಗೊಂಡಿದ್ದಾರೆ. ಅದರಲ್ಲಿ ಆರು ಜನ ಮಹಿಳೆಯರು , ಮೂವರು ಮಕ್ಕಳು ಇದ್ದಾರೆ. ಇನ್ನೂ ಸ್ಟೋಟದ ಶಬ್ದಕೇಳಿದ ಸ್ಥಳೀಯರು ಓಡಿ ಬಂದು ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ರೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಕರೆ ಮಾಡಿ ಒಂದು‌ ಗಂಟೆಯಾದರೂ ಅಂಬ್ಯುಲೆನ್ಸ್ ಬಾರದೆ ಗಾಯಾಳುಗಳು ಪರದಾಡಿದ್ರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಸಂಬಂಧ ರಾಜಾಜಿನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more