Bengaluru: ಮರಿಯಪ್ಪನ ಪಾಳ್ಯದಲ್ಲಿ ಸಿಲಿಂಡರ್ ಬ್ಲಾಸ್ಟ್: 13 ಜನರಿಗೆ ಗಾಯ

Bengaluru: ಮರಿಯಪ್ಪನ ಪಾಳ್ಯದಲ್ಲಿ ಸಿಲಿಂಡರ್ ಬ್ಲಾಸ್ಟ್: 13 ಜನರಿಗೆ ಗಾಯ

Published : Mar 03, 2023, 08:57 PM IST

ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟವಾಗಿದ್ದು, ಒಂದೇ ಕುಟುಂಬದ 13 ಜನರಿಗೆ ಗಾಯವಾಗಿ, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. 

ಬೆಂಗಳೂರು (ಮಾ.03): ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟವಾಗಿದ್ದು, ಒಂದೇ ಕುಟುಂಬದ 13 ಜನರಿಗೆ ಗಾಯವಾಗಿ, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. ಇಂದು ಮನೆಯಲ್ಲಿ ಕಾರ್ಯಕ್ರಮವಿದ್ದ ಕಾರಣ ಸಂಬಂಧಿಕರನ್ನ ಕರೆಸಿ ರಾತ್ರಿಯೆಲ್ಲ ಅಡುಗೆ ಮಾಡಿಸಿದ್ದಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಇವತ್ತು ಬೆಳಗ್ಗೆ ಶುಭ ಕಾರ್ಯ ನಡೆಯಬೇಕಿತ್ತು. ಆದರೆ ಬೆಳಗ್ಗೆ ಸುಮಾರು 6.10 ರ‌ ಸಮಯದಲ್ಲಿ ಹಾಲು ಕಾಯಿಸಲು ಹೋದಾಗ ಗ್ಯಾಸ್ ಲೀಕೇಜ್ ಆಗಿರೋದು ಗೊತ್ತೇ ಆಗಿಲ್ಲ .ಲೈಟರ್ ಆನ್ ಮಾಡಿದ್ದಾರಷ್ಟೆ, ಬೆಂಕಿಯ ಕಿಡಿಗೆ ಸಿಲಿಂಡರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಮಲಗಿದ್ದ ಹದಿಮೂರು ಜನರು ‌ಗಾಯಗೊಂಡಿದ್ದಾರೆ. ಅದರಲ್ಲಿ ಆರು ಜನ ಮಹಿಳೆಯರು , ಮೂವರು ಮಕ್ಕಳು ಇದ್ದಾರೆ. ಇನ್ನೂ ಸ್ಟೋಟದ ಶಬ್ದಕೇಳಿದ ಸ್ಥಳೀಯರು ಓಡಿ ಬಂದು ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ರೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಕರೆ ಮಾಡಿ ಒಂದು‌ ಗಂಟೆಯಾದರೂ ಅಂಬ್ಯುಲೆನ್ಸ್ ಬಾರದೆ ಗಾಯಾಳುಗಳು ಪರದಾಡಿದ್ರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನೆ ಸಂಬಂಧ ರಾಜಾಜಿನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more