ಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆ: ರಾಯಚೂರಿನ ಇಬ್ಬರು ಪೊಲೀಸ್ರು ಸಸ್ಪೆಂಡ್

Jun 29, 2019, 6:02 PM IST

ರಾಯಚೂರು, [ಜೂ.28]: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದ ವೇಳೆ ಭದ್ರತಾ ವೈಫಲ್ಯ ನಡೆದಿದೆ ಎಂದು ಆರೋಪಿಸಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. 

ಗ್ರಾಮ ವಾಸ್ತವ್ಯಕ್ಕಾಗಿ ಕುಮಾರಸ್ವಾಮಿ ಅವರು 26ರಂದು  ರಾಯಚೂರಿನಿಂದ ಸರ್ಕಾರಿ ಬಸ್‌ನಲ್ಲಿ ಮಾನ್ವಿ ತಾಲೂಕಿನ ಕರೇಗುಡ್ಡ ಗ್ರಾಮಕ್ಕೆ ತೆರಳುತ್ತಿದ್ದರು. ಆಗ ವೈಟಿಪಿಎಸ್ ಕಾರ್ಮಿಕರ ಸಂಘದ ಸದಸ್ಯರು ಬಸ್ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದರು.ಈ ಸಿಟ್ಟನ್ನು ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ತೋರಿಸಿದ್ದಾರೆ. ಹಾಗಾದ್ರೆ ಅಮಾನತುಗೊಂಡ ಇಬ್ಬರು ಪೊಲೀಸ್ರು ಯಾರು? ವಿಡಿಯೋದಲ್ಲಿ ನೋಡಿ.