ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 25ನೇ ವಾರ್ಷಿಕೋತ್ಸವ: ಬ್ರಹ್ಮೋತ್ಸವದ ಅಂಗವಾಗಿ ಕುಂಭಮೇಳ

ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 25ನೇ ವಾರ್ಷಿಕೋತ್ಸವ: ಬ್ರಹ್ಮೋತ್ಸವದ ಅಂಗವಾಗಿ ಕುಂಭಮೇಳ

Published : May 26, 2024, 01:29 PM ISTUpdated : May 26, 2024, 01:30 PM IST

ಸಾಂಸ್ಕೃತಿಕ ನಗರಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿರುವ  ದತ್ತ ವೆಂಕಟೇಶ್ವರ ಕ್ಷೇತ್ರದ ‌25ನೇ ವಾರ್ಷಿಕೋತ್ಸವ ಅದ್ದೂರಿಯಾಗಿ ನೆರವೇರಿತು. 25ನೇ ವರ್ಷದ ವಾರ್ಷಿಕೋತ್ಸವದ ಜೊತೆಗೆ ಬ್ರಹ್ಮೋತ್ಸವದ ಕುಂಭಾಭಿಷೇಕ ಕಾರ್ಯಕ್ರಮ ಸಾಂಗವಾಗಿ ನೆರವೇರಿತು.

ಗಣಪತಿ ಸಚ್ಚಿದಾನಂದ ಆಶ್ರಮದ(Ganapati Sachichidananda Ashram) ದತ್ತ ವೆಂಕಟೇಶ್ವರ ದೇವಾಲಯದ(Datta Venkateswara Kshetra) 25ನೇ ಬ್ರಹ್ಮೋತ್ಸವದ(Brahmotsava) ಅಂಗವಾಗಿ ಕುಂಭಮೇಳ ಜರುಗಿತು. ಕುಂಭಮೇಳದಲ್ಲಿ ಪಾಲ್ಗೊಂಡ ಗಣಪತಿ ಸಚ್ಚಿದಾನಂದ ಶ್ರೀಗಳು ನೆರದಿದ್ದ ಭಕ್ತರಿಗೆ ಆಶಿರ್ವಚನ ದಯಪಾಲಿಸಿದರು. ಕಷ್ಟಗಳು‌ ದೂರವಾಗಿ ಮಳೆ, ಬೆಳೆಯಾಗಿ ದೇಶ ಸುಭಿಕ್ಷವಾಗಲಿ. ಕ್ರೋಧ, ಮತ್ಸರ, ಕಷ್ಟ ಕೋಟಲೆಗಳು‌ ದೂರವಾಗಿ ಕಾಲ ಕಾಲಕ್ಕೆ ಮಳೆ, ಬೆಳೆಯಾಗಿ ದೇಶ ಸುಭಿಕ್ಷವಾಗಲಿ ಎಂದು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಪ್ರಾರ್ಥಿಸಿದರು. ಇದಕ್ಕೂ ಮೊದಲು ವಜ್ರೋತ್ಸವ ಯಾಗ ಮಂಟಪದಲ್ಲಿ ಪ್ರಧಾನ‌ ಯಾಗವನ್ನು‌ ನೆರವೇರಿಸಲಾಯಿತು. ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಶ್ರೀ ದತ್ತ ವಿಜಯಾನಂದ ತೀರ್ಥ‌ ಸ್ವಾಮೀಜಿಯವರು ಹೋಮಕಾರ್ಯದಲ್ಲಿ ಪಾಲ್ಗೊಂಡು‌ ಪೂರ್ಣಾಹುತಿ ಸಮರ್ಪಿಸಿದರು. ನಂತರ ಆಗಮ‌ ಪಂಡಿತರ ಸಮ್ಮುಖದಲ್ಲಿ ವಿವಿಧ ನದಿಗಳಿಂದ‌ ತರಲಾಗಿದ್ದ ಶುದ್ಧ ಜಲದಿಂದ ದೇವಾಲಯಗಳ ಶಿಖರಗಳಿಗೆ ಮಹಾ ಕುಂಭಾಭಿಷೇಕ ನೆರವೇರಿಸಲಾಯಿತು. ದೇವತಾ ಮೂರ್ತಿಗಳಿಗೆ ಬ್ರಹ್ಮಕಲಶ ಅಭಿಷೇಕ ಮಾಡಲಾಯ್ತು.

ಇದನ್ನೂ ವೀಕ್ಷಿಸಿ:  ಮತ್ತೆ ತಾಯಿಯಾದ್ರಾ ನಟಿ ಆಲಿಯಾ ಭಟ್‌ ? ಆ ವಿಡಿಯೋದ ಅಸಲಿಯತ್ತೇನು ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!