Chikkamagaluru: ಕಸಾಯಿಖಾನೆ ಪಾಲಾಗ್ತಿದ್ದ 70ಕ್ಕೂ ಹೆಚ್ಚು ಗೋವುಗಳಿಗೆ ಮರುಜನ್ಮ..!

Chikkamagaluru: ಕಸಾಯಿಖಾನೆ ಪಾಲಾಗ್ತಿದ್ದ 70ಕ್ಕೂ ಹೆಚ್ಚು ಗೋವುಗಳಿಗೆ ಮರುಜನ್ಮ..!

Suvarna News   | Asianet News
Published : Jan 21, 2022, 12:21 PM IST

*   ಚಿಕ್ಕಮಗಳೂರಿನ ಇಂದಾವರದಲ್ಲಿ ಗೋವುಗಳಿಗೆ ಆಶ್ರಯ 
*   ದನಗಳ್ಳರ ಹಾವಳಿಯಿಂದ ಬೇಸತ್ತು ಗೋಶಾಲೆ ಕಟ್ಟಿದ ಯುವಕರು
*   ದನಗಳನ್ನ ಸಾಕಲಾಗದೇ ಕಸಾಯಿಖಾನೆಗೆ ಮಾರುವವರ ಮನವೊಲಿಕೆ
 

ಚಿಕ್ಕಮಗಳೂರು(ಜ.21):  ಗೋವುಗಳನ್ನ ಸಾಕೋದು ಏನು ದೊಡ್ಡ ವಿಚಾರವೇನಲ್ಲ. ಆದ್ರೆ, ಇಲ್ಲಿರೋ 70ಕ್ಕೂ ಹೆಚ್ಚು ದನಕರುಗಳು ಒಂದು ದಿನ ಲೇಟಾಗಿದ್ರೂ ನಮ್ಮ ಕಣ್ಣೆದುರು ಇರ್ತಾ ಇರ್ಲಿಲ್ಲ. ಎಲ್ಲವೂ ಕಸಾಯಿ ಖಾನೆಗೆ ಹೋಗಲು ತಯಾರಿ ನಡೆದಿತ್ತು. ಈ ವಿಚಾರವನ್ನ ತಿಳಿದ ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದ ಕಾಮಧೇನು ಗೋ ಗೋಶಾಲೆಯ ಭಗವಾನ್, ಲಕ್ಷ್ಮಣ್ ಸೇರಿ ಮೋಹನ್ ಗೌಡ ಎಂಬುವರ ಸಹಾಯ ಪಡೆದು ಈ ಗೋವುಗಳನ್ನ ಕಾಪಾಡಿದ್ದಾರೆ. 

ನಮಗೆ ಈ ದನಗಳನ್ನ ಸಾಕಲು ಸಾಧ್ಯವಾಗ್ತಿಲ್ಲ. ಹಾಗಾಗಿ ಈಗಾಗಲೇ ಕಸಾಯಿಖಾನೆಗೆ ಮಾರಲು ಮುಂದಾಗಿ, ಅಡ್ವಾನ್ಸ್ ಕೂಡ ಪಡೆದಿದ್ದೇವೆ ಅಂತಾ ದನಗಳನ್ನ ಮಾರಲು ಸಿದ್ದರಾದವರ ಮನಸ್ಸನ್ನೇ ಈ ಗೋ ಪಾಲಕರು ಬದಲಾಯಿಸಿದ್ದಾರೆ. ಸದ್ಯ 70ರಲ್ಲಿ 40ಕ್ಕೂ ಹೆಚ್ಚು ರಾಸುಗಳು ಉಳಿದ 30ಕ್ಕೂ ಹೆಚ್ಚು ಗಂಡು ಕರುಗಳು ಇದೀಗ ಕಸಾಯಿಖಾನೆಯ ಬದಲು ಗೋಶಾಲೆಯಲ್ಲಿ ಆಶ್ರಯ ಪಡೆದು ನೆಮ್ಮದಿಯಾಗಿವೆ. 

Weekend Curfew:ಎಲ್ಲಾ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ: ಸಿಎಂ ಭರವಸೆ

ಒಟ್ಟಾರೆ, ಸದ್ಯ 80ಕ್ಕೂ ಹೆಚ್ಚು ದನಕರುಗಳಿಗೆ ಪುನರ್ ಜೀವನ ಕೊಟ್ಟು ಸಾಕುತ್ತಿರೋ ಈ ಗೋಪಾಲಕರ ಕಾಳಜಿಗೆ ಎಲ್ಲರೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಗೋವುಗಳ ರಕ್ಷಣೆಗೆ ಕಟಿಬದ್ಧರಾಗಿರುವವರ ಕಾರ್ಯ ನಿಜಕ್ಕೂ ಪ್ರಶಂಸನೀಯ. ಒಟ್ಟಿನಲ್ಲಿ ಈ ಗೋಪಾಲಕರ ಸಮಯಪ್ರಜ್ಞೆಯಿಂದ 70ಕ್ಕೂ ಹೆಚ್ಚು ದನಕರುಗಳು ಮರಜನ್ಮವನ್ನೇ ಪಡೆಯುವಂತಾಗಿದೆ.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more