Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ

Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ

Published : Aug 14, 2022, 10:35 PM IST

ಬರೋಬ್ಬರಿ 900 ಕೆ.ಜಿ ಧಾನ್ಯಗಳನ್ನು ಬಳಸಿ  ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಭಿನ್ನ ತ್ರಿವರ್ಣ ಧ್ವಜದ ಕಲ್ಪನೆಯ ಚಿತ್ತಾರ ಬಿಡಿಸಲಾಗಿದೆ.

ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಭಿನ್ನವಾಗಿ ತ್ರಿವರ್ಣ ಧ್ವಜದ ಕಲ್ಪನೆ ಮೂಡಿಬಂದಿದೆ. ಬರೋಬ್ಬರಿ 900 ಕೆ.ಜಿ ಧಾನ್ಯಗಳನ್ನು ಬಳಸಿ ದೇವಸ್ಥಾನದ ಆವರಣದಲ್ಲಿ ತಿರಂಗ ಚಿತ್ತಾರ ಮಾಡಲಾಗಿದೆ. ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಇದನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದ್ದಾರೆ. ಗುರುಬೆಳದಿಂಗಳು ಟ್ರಸ್ಟ್‌ನ 30 ಸದಸ್ಯರ ಕೈಚಳಕದಲ್ಲಿ ತ್ರಿವರ್ಣ ಧ್ವಜ ಮೂಡಿಬಂದಿದೆ. ಈ ಚಿತ್ತಾರ ಬಿಡಿಸಲು 300ಕೆಜಿ ಸಾಗು , 300ಕೆಜಿ ಹೆಸರುಕಾಳು, 300 ಕೆಜಿ ಕೆಂಪು ತೊಗರಿ ಬಳಕೆ ಮಾಡಲಾಗಿದೆ. 38 ಫೀಟ್ ವೃತ್ತದಲ್ಲಿ 108 ಬಾಳೆ ಎಲೆ ಬಳಸಿ 54 ಕಳಶವಿಟ್ಟು ತಿರಂಗ ಅಲಂಕಾರ.

ಮಂಗಳೂರಿನಲ್ಲಿ ದಾಖಲೆ ಬರೆದ 900 ಕೆ.ಜಿ‌ ತೂಕದ ತಿರಂಗ!

90 ಕೆ.ಜಿಯಷ್ಟು ಸಾಬಕ್ಕಿ, ಬೆಂಡೆಕಾಯಿ, ಮೂಲಂಗಿ, ಅಡಕೆ, ಕ್ಯಾರೆಟ್ ಬಳಕೆ. ಕ್ಷೇತ್ರದ ಆವರಣದಲ್ಲಿ ಪುಷ್ಪ ಹಾಗೂ ಧಾನ್ಯಗಳನ್ನು ಬಳಸಿ ಚಿತ್ರಾಕೃತಿ ರಚಿಸಲಾಗಿದೆ. ಬರೋಬ್ಬರಿ 12 ಗಂಟೆಗಳ ಶ್ರಮದಲ್ಲಿ ತಿರಂಗ ಕಲಾಕೃತಿ ನಿರ್ಮಾಣ ಮಾಡಲಾಗಿದ್ದು,  ತಿರಂಗ ಕಲಾಕೃತಿ ಎದುರು ಜನ ಫೋಟೋ ಕ್ಲಿಕ್ಕಿಸಿಕೊಳ್ತಿದ್ದಾರೆ. ತಾಜಾ ತರಕಾರಿ, ಧಾನ್ಯ ಹಾಗೂ ಹೂಗಳನ್ನು ಬಳಸಿದ 1000 ಕೆ.ಜಿ ತೂಗುವ ಕಲಾಕೃತಿ ರಚನೆ ಮಾಡಲಾಗಿದೆ. ಸ್ವಾತಂತ್ರ್ಯೋತ್ಯವದ ಅಮೃತಮಹೋತ್ಸವ ಹಿನ್ನೆಲೆ ಈ ವಿಭಿನ್ನ ಪ್ರಯೋಗ ಮಾಡಲಾಗಿದ್ದು, ಕಲಾವಿದ ಹಾಗೂ ಛಾಯಾಗ್ರಾಹಕ ಪುನಿಕ್ ಶೆಟ್ಟಿ ಇದರ ನೇತೃತ್ವ ವಹಿಸಿದ್ದಾರೆ.

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
Read more