Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ

Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ

Published : Aug 14, 2022, 10:35 PM IST

ಬರೋಬ್ಬರಿ 900 ಕೆ.ಜಿ ಧಾನ್ಯಗಳನ್ನು ಬಳಸಿ  ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಭಿನ್ನ ತ್ರಿವರ್ಣ ಧ್ವಜದ ಕಲ್ಪನೆಯ ಚಿತ್ತಾರ ಬಿಡಿಸಲಾಗಿದೆ.

ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಭಿನ್ನವಾಗಿ ತ್ರಿವರ್ಣ ಧ್ವಜದ ಕಲ್ಪನೆ ಮೂಡಿಬಂದಿದೆ. ಬರೋಬ್ಬರಿ 900 ಕೆ.ಜಿ ಧಾನ್ಯಗಳನ್ನು ಬಳಸಿ ದೇವಸ್ಥಾನದ ಆವರಣದಲ್ಲಿ ತಿರಂಗ ಚಿತ್ತಾರ ಮಾಡಲಾಗಿದೆ. ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಇದನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದ್ದಾರೆ. ಗುರುಬೆಳದಿಂಗಳು ಟ್ರಸ್ಟ್‌ನ 30 ಸದಸ್ಯರ ಕೈಚಳಕದಲ್ಲಿ ತ್ರಿವರ್ಣ ಧ್ವಜ ಮೂಡಿಬಂದಿದೆ. ಈ ಚಿತ್ತಾರ ಬಿಡಿಸಲು 300ಕೆಜಿ ಸಾಗು , 300ಕೆಜಿ ಹೆಸರುಕಾಳು, 300 ಕೆಜಿ ಕೆಂಪು ತೊಗರಿ ಬಳಕೆ ಮಾಡಲಾಗಿದೆ. 38 ಫೀಟ್ ವೃತ್ತದಲ್ಲಿ 108 ಬಾಳೆ ಎಲೆ ಬಳಸಿ 54 ಕಳಶವಿಟ್ಟು ತಿರಂಗ ಅಲಂಕಾರ.

ಮಂಗಳೂರಿನಲ್ಲಿ ದಾಖಲೆ ಬರೆದ 900 ಕೆ.ಜಿ‌ ತೂಕದ ತಿರಂಗ!

90 ಕೆ.ಜಿಯಷ್ಟು ಸಾಬಕ್ಕಿ, ಬೆಂಡೆಕಾಯಿ, ಮೂಲಂಗಿ, ಅಡಕೆ, ಕ್ಯಾರೆಟ್ ಬಳಕೆ. ಕ್ಷೇತ್ರದ ಆವರಣದಲ್ಲಿ ಪುಷ್ಪ ಹಾಗೂ ಧಾನ್ಯಗಳನ್ನು ಬಳಸಿ ಚಿತ್ರಾಕೃತಿ ರಚಿಸಲಾಗಿದೆ. ಬರೋಬ್ಬರಿ 12 ಗಂಟೆಗಳ ಶ್ರಮದಲ್ಲಿ ತಿರಂಗ ಕಲಾಕೃತಿ ನಿರ್ಮಾಣ ಮಾಡಲಾಗಿದ್ದು,  ತಿರಂಗ ಕಲಾಕೃತಿ ಎದುರು ಜನ ಫೋಟೋ ಕ್ಲಿಕ್ಕಿಸಿಕೊಳ್ತಿದ್ದಾರೆ. ತಾಜಾ ತರಕಾರಿ, ಧಾನ್ಯ ಹಾಗೂ ಹೂಗಳನ್ನು ಬಳಸಿದ 1000 ಕೆ.ಜಿ ತೂಗುವ ಕಲಾಕೃತಿ ರಚನೆ ಮಾಡಲಾಗಿದೆ. ಸ್ವಾತಂತ್ರ್ಯೋತ್ಯವದ ಅಮೃತಮಹೋತ್ಸವ ಹಿನ್ನೆಲೆ ಈ ವಿಭಿನ್ನ ಪ್ರಯೋಗ ಮಾಡಲಾಗಿದ್ದು, ಕಲಾವಿದ ಹಾಗೂ ಛಾಯಾಗ್ರಾಹಕ ಪುನಿಕ್ ಶೆಟ್ಟಿ ಇದರ ನೇತೃತ್ವ ವಹಿಸಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more