ವರದಕ್ಷಿಣೆ ಕೇಸ್‌ಲ್ಲಿ 26 ವರ್ಷ ಜೈಲಿನಲ್ಲಿದ್ದ 93 ವರ್ಷದ ಅಜ್ಜಿ, ಬಿಡುಗಡೆಯಾದ ಒಂದೇ ವಾರಕ್ಕೆ ಸಾವು

ವರದಕ್ಷಿಣೆ ಕೇಸ್‌ಲ್ಲಿ 26 ವರ್ಷ ಜೈಲಿನಲ್ಲಿದ್ದ 93 ವರ್ಷದ ಅಜ್ಜಿ, ಬಿಡುಗಡೆಯಾದ ಒಂದೇ ವಾರಕ್ಕೆ ಸಾವು

Published : Dec 07, 2024, 06:16 PM IST

ವರದಕ್ಷಿಣೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 93 ವರ್ಷದ ನಾಗಮ್ಮ ಅವರಿಗೆ ಪರೋಲ್ ಸಿಕ್ಕಿ ವಾರದಲ್ಲೇ ಸಾವು. 26 ವರ್ಷ ಜೈಲುವಾಸ ಅನುಭವಿಸಿದ್ದ ನಾಗಮ್ಮ ಅವರ ಸ್ಥಿತಿ ನೋಡಿ ಮರುಗಿದ ಉಪಲೋಕಾಯುಕ್ತರು ಪರೋಲ್‌ಗೆ ಮಧ್ಯಪ್ರವೇಶ ಮಾಡಿದ್ದರು.

ಕಲಬುರಗಿ (ಡಿ.7): ವರದಕ್ಷಿಣೆ ಕೇಸ್‌ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 93 ವರ್ಷದ ಅಜ್ಜಿ ನಾಗಮ್ಮ ಎನ್ನುವವರಿಗೆ ಕಳೆದ ವಾರವಷ್ಟೇ ಪರೋಲ್‌ ಸಿಕ್ಕಿತ್ತು. ಜೈಲಿನಲ್ಲಿ ಅಜ್ಜಿಯ ಸ್ಥಿತಿ ನೋಡಿ ಮರುಗಿದ್ದ ಉಪಲೋಕಾಯುಕ್ತ ಜಸ್ಟೀಸ್‌ ಬಿ.ವೀರಪ್ಪ ಈಕೆಯ ಬಿಡುಗಡೆಯ ಬಗ್ಗೆ ಮಧ್ಯಪ್ರವೇಶ ಮಾಡೋದಾಗಿ ಹೇಳಿದ್ದರು. ಇದರಿಂದಾಗಿ ಒಂದು ವಾರದ ಹಿಂದೆಯಷ್ಟೇ 90 ದಿನಗಳ ಪರೋಲ್‌ ಪಡೆದಿದ್ದ ಅಜ್ಜಿ ನಾಗಮ್ಮ ಶುಕ್ರವಾರ ಸಾವು ಕಂಡಿದ್ದಾರೆ.

ತನ್ನ ಸೊಸೆಯ ಸಾವಿನ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 498 ರ ಅಡಿಯಲ್ಲಿ ನಾಗಮ್ಮ 26 ವರ್ಷಗಳ ಕಾಲ ಜೈಲಿನಲ್ಲಿದ್ದರು. ಜೇವರ್ಗಿ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣದಲ್ಲಿ ಆಕೆ ಕಿರುಕುಳದ ಆರೋಪ ಎದುರಿಸಿದ್ದರು.

ವರದಕ್ಷಿಣೆ ಕಿರುಕುಳ ಕೇಸ್‌ನಲ್ಲಿ ಜೀವಾವಧಿ ಶಿಕ್ಷೆ ಪಡೆದಿದ್ದ 93 ವರ್ಷದ ಅಜ್ಜಿ ನಾಗಮ್ಮ ಬಿಡುಗಡೆ!

ನವೆಂಬರ್‌ 16 ರಂದು ಕಲಬುರಗಿ ಜೈಲಿಗೆ ಹೋಗಿದ್ದ ವೇಳೆ ನಾಗಮ್ಮ ಅವರ ಪರಿಸ್ಥಿತಿಯನ್ನು ನೋಡಿದ್ದ ಉಪಲೋಕಾಯುಕ್ತರು, ಸುಪ್ರೀಂ ಕೋರ್ಟ್‌ಗೆ ಈಕೆಯ ಶಿಕ್ಷೆಯ ಕುರಿತು ಮರುಪರಿಶೀಲನಾ ಅರ್ಜಿ ಸಲ್ಲಿಸೋದಾಗಿ ತಿಳಿಸಿದ್ದರು. ಇದರ ನಡುವೆ ಇವರನ್ನು 90 ದಿನಗಳ ಪರೋಲ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು.

ಸೊಸೆ ದಾಖಲಿಸಿದ್ದ ವರದಕ್ಷಿಣೆ ಕೇಸ್‌ನಲ್ಲಿ ಜೈಲಿನಲ್ಲಿರುವ 93 ವರ್ಷದ ಅಜ್ಜಿ, ಮರುಗಿದ ಉಪಲೋಕಾಯುಕ್ತ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more