ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಐವರ ದುರ್ಮರಣ

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಐವರ ದುರ್ಮರಣ

Published : Aug 13, 2023, 11:40 AM IST

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ(Lorry) ಹಿಂಬದಿಯಿಂದ ಕಾರು(Car) ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರು ವಿಜಯಪುರ(vijayapura) ಜಿಲ್ಲೆ ಬಸವನಬಾಗೇವಾಡಿ‌ ತಾಲೂಕಿನ ಕುದರೆಸಾಲವಾಡಗಿ ಗ್ರಾಮದವರು ಎಂದು ತಿಳಿದುಬಂದಿದೆ. ಸಂಗನಬಸಪ್ಪ, ಪತ್ನಿ ರೇಖಾ , ಪುತ್ರ ಅಗಸ್ತ್ಯ ಸಂಬಂಧಿಕ ಭೀಮಾಶಂಕರ್‌ ಸ್ಥಳದಲ್ಲಿ ಮೃತಪಟ್ಟರೇ, ಮಧುಸೂದನ್ ಎಂಬುವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ನಿನ್ನೆ ರಾತ್ರಿ 11ಕ್ಕೆ ಮನೆಯಿಂದ ಕಾರಿನಲ್ಲಿ ಮೃತರು ಪ್ರಯಾಣ ಬೆಳೆಸಿದ್ದಾರೆ. ಇವರು ಚಿಕ್ಕಮಗಳೂರಿನತ್ತ ಪ್ರಯಾಣ ಬೆಳೆಸಿದ್ದರು.ಸದ್ಯ ಚಿತ್ರದುರ್ಗದತ್ತ ಪ್ರಯಾಣ ಬೆಳೆಸಿದ್ದರು. ಮಧುಸೂದನ್ ಎಂಬುವರು ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಕೋಲಾರದ ಕೆಜಿಎಫ್ ಮೂಲದವರಾಗಿದ್ದಾರೆ. ಪಿಎಸ್‌ಐ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದರು. ಇವರು ಮೃತ ಭೀಮಾಶಂಕರ್‌ ಸ್ನೇಹಿತರಾಗಿದ್ದರು.

ಇದನ್ನೂ ವೀಕ್ಷಿಸಿ:  ಫುಡ್, ಫನ್ ಮತ್ತು ಫ್ಯಾಷನ್ ಫೆಸ್ಟಿವಲ್‌ಗೆ ಇಂದೇ ಕೊನೆ ದಿನ: ಬನ್ನಿ ಭಾಗವಹಿಸಿ..ವೀಕೆಂಡ್‌ನಲ್ಲಿ ಸಂಭ್ರಮಿಸಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more