ಸಾವನ್ನೇ ಗೆದ್ದು ಬಂದ ವಿದ್ಯಾರ್ಥಿನಿ ಅಶ್ವಿನಿ: ಮಾತು ತಪ್ಪಿದ ಮಹಾರಾಣಿ ವಿವಿ ವಿಸಿ

ಸಾವನ್ನೇ ಗೆದ್ದು ಬಂದ ವಿದ್ಯಾರ್ಥಿನಿ ಅಶ್ವಿನಿ: ಮಾತು ತಪ್ಪಿದ ಮಹಾರಾಣಿ ವಿವಿ ವಿಸಿ

Published : Nov 02, 2023, 11:02 AM IST

ಅಕ್ಟೋಬರ್ 7 ಅಂದು ಬೆಂಗಳೂರು ಮಹಾರಾಣಿ ಕಾಲೇಜು ಆವರಣದಲ್ಲಿ ಭೀಕರ ಅಪಘಾತವೊಂದು ನಡೆದಿತ್ತು. ಪ್ರೊ.ನಾಗರಾಜು ಕಾರು ಪಾರ್ಕ್ ಮಾಡುವಾಗ ಬ್ರೇಕ್ ಬದಲು ಅಚಾನಕ್ಕಾಗಿ ಌಕ್ಸಿಲೇಟರ್ ಒತ್ತಿದ್ದರು. ಅಂದು ನಡೆದ ಅಪಘಾತದಲ್ಲಿ ಕೊಪ್ಪಳ ಮೂಲದ ವಿದ್ಯಾರ್ಥಿನಿ ಅಶ್ವಿನಿ ಗಾಯಗೊಂಡು ಆಸ್ಪತ್ರೆ ಸೇರಿದ್ರು. 25 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ಪಡೆದು ಅಶ್ವಿನಿ ಸಾವು ಗೆದ್ದು ಬಂದಿದ್ದಾರೆ. ಇದೇನೋ ಖುಷಿ ವಿಚಾರ.. ಆದ್ರೆ ವಿದ್ಯಾರ್ಥಿನಿ ಅಶ್ವಿನಿ ಕುಟುಂಬಕ್ಕೆ ಚಿಕಿತ್ಸೆ ವೆಚ್ಚ ಭರಿಸೋದೆ ದೊಡ್ಡ ಸಮಸ್ಯೆಯಾಗಿದೆ.

ಅಪಘಾತದ ವೇಳೆ ಆಸ್ಪತ್ರೆಯ ಎಲ್ಲಾ ಖರ್ಚು ವೆಚ್ಚ ಭರಿಸೋದಾಗಿ ಮಹಾರಾಣಿಯ ವಿವಿಯ(Maharani cluster university) ವಿಸಿ ಹೇಳಿದ್ರಂತೆ. ಆದ್ರೆ ಆರು ಲಕ್ಷ ನೀಡಿದ ವಿವಿ ಇನ್ಮುಂದೆ ಮತ್ತೆ ಹಣ ಕೇಳಬೇಡಿ ಎಂದು ಕಡ್ಡಿ ಮುರಿದಂತೆ ಹೇಳಿದ್ಯಂತೆ ಡಿಸ್ಚಾರ್ಜ್ ಮಾಡಿಸಿಕೊಂಡು  ಸರ್ಕಾರಿ ಆಸ್ಪತ್ರೆಗೆ(Hospital) ದಾಖಲು ಮಾಡಿ ಅಂತ ಹೇಳಿ ಕೈಬಿಟ್ಟಿದ್ದಾರಂತೆ. ಇನ್ನೂ ಅಶ್ವಿನಿ ವೈದ್ಯಕೀಯ ವೆಚ್ಚ ಈಗಾಗಲೇ  12ಲಕ್ಷ ಮುಟ್ಟಿದೆ. ಹೆಚ್ಚಿನ ಹಣ ಹೇಗೆ ಹೊಂದಿಸೋದು ಎನ್ನುತ್ತಿದೆ ಅಶ್ವಿನಿ ಕುಟುಂಬ. ಇನ್ನೊಂದ್ಕಡೆ ಉಜ್ವಲ ಭವಿಷ್ಯದ ಕನಸು ಕಂಡಿದ್ದ ಅಶ್ವಿನಿಯ ಬಲಗಾಲಿಗೆ ಆಪರೇಷನ್ ಮಾಡಿ ರಾಡ್ ಅಳವಡಿಸಲಾಗಿದೆ. ಆ್ಯಕ್ಸಿಡೆಂಟ್ನಿಂದ ಕನಸೆಲ್ಲಾ ನುಚ್ಚುನೂರಾಗಿದೆ ಎಂದು  ವಿದ್ಯಾರ್ಥಿನಿ(Student) ಕಣ್ಣೀರು ಹಾಕುತ್ತಿದ್ದಾಳೆ. ಅಷ್ಟೇ ಅಲ್ಲ ಕಾಲೇಜಿನವರು ಸೌಜನ್ಯಕ್ಕೂ ನನ್ನನ್ನ ನೋಡಲು ಬಂದಿಲ್ಲ, ಚಿಕಿತ್ಸೆ ವೆಚ್ಚ ಹೆಚ್ಚಾಗಿದ್ದು, ನಮ್ಮ ಕುಟುಂಬಕ್ಕೆ ಸಹಾಯ ಮಾಡಿ ಅಂತ ಅಂಗಾಲಾಚುತ್ತಿದ್ದಾಳೆ. ಅಶ್ವಿನಿಗೆ ಬೆಡ್ ರೆಸ್ಟ್ನಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದಾರೆ..ಈಗಾಗಲೇ ಆಸ್ಪತ್ರೆಗೆ 12 ಲಕ್ಷ ಖರ್ಚು ಮಾಡಿದ್ದು, ಮುಂದಿನ ಟ್ರೀಟ್ಮೆಂಟ್ಗೆ ಹಣ ಹೊಂದಿಸೋದೇ ಕಷ್ಟವಾಗಿದೆ..ಅಶ್ವಿನಿ ಕುಟುಂಬಕ್ಕೆ ಕೊಟ್ಟ ಮಾತಿನಂತೆ ವಿವಿ ನಡೆದುಕೊಳ್ಳಬೇಕಿದೆ.

ಇದನ್ನೂ ವೀಕ್ಷಿಸಿ:  ಅವಳಿನಗರ ಪೊಲೀಸರ ಮುಂದೆ ಚಾಲೆಂಜಿಂಗ್ ಟಾಸ್ಕ್..! ಸಣ್ಣ ಸುಳಿವೂ ಇಲ್ಲದ ಕೇಸ್‌ನಲ್ಲಿ ಖದೀಮರ ಬಂಧಿಸಿದ್ದೇಗೆ..?

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more