ಸಾವನ್ನೇ ಗೆದ್ದು ಬಂದ ವಿದ್ಯಾರ್ಥಿನಿ ಅಶ್ವಿನಿ: ಮಾತು ತಪ್ಪಿದ ಮಹಾರಾಣಿ ವಿವಿ ವಿಸಿ

ಸಾವನ್ನೇ ಗೆದ್ದು ಬಂದ ವಿದ್ಯಾರ್ಥಿನಿ ಅಶ್ವಿನಿ: ಮಾತು ತಪ್ಪಿದ ಮಹಾರಾಣಿ ವಿವಿ ವಿಸಿ

Published : Nov 02, 2023, 11:02 AM IST

ಅಕ್ಟೋಬರ್ 7 ಅಂದು ಬೆಂಗಳೂರು ಮಹಾರಾಣಿ ಕಾಲೇಜು ಆವರಣದಲ್ಲಿ ಭೀಕರ ಅಪಘಾತವೊಂದು ನಡೆದಿತ್ತು. ಪ್ರೊ.ನಾಗರಾಜು ಕಾರು ಪಾರ್ಕ್ ಮಾಡುವಾಗ ಬ್ರೇಕ್ ಬದಲು ಅಚಾನಕ್ಕಾಗಿ ಌಕ್ಸಿಲೇಟರ್ ಒತ್ತಿದ್ದರು. ಅಂದು ನಡೆದ ಅಪಘಾತದಲ್ಲಿ ಕೊಪ್ಪಳ ಮೂಲದ ವಿದ್ಯಾರ್ಥಿನಿ ಅಶ್ವಿನಿ ಗಾಯಗೊಂಡು ಆಸ್ಪತ್ರೆ ಸೇರಿದ್ರು. 25 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ಪಡೆದು ಅಶ್ವಿನಿ ಸಾವು ಗೆದ್ದು ಬಂದಿದ್ದಾರೆ. ಇದೇನೋ ಖುಷಿ ವಿಚಾರ.. ಆದ್ರೆ ವಿದ್ಯಾರ್ಥಿನಿ ಅಶ್ವಿನಿ ಕುಟುಂಬಕ್ಕೆ ಚಿಕಿತ್ಸೆ ವೆಚ್ಚ ಭರಿಸೋದೆ ದೊಡ್ಡ ಸಮಸ್ಯೆಯಾಗಿದೆ.

ಅಪಘಾತದ ವೇಳೆ ಆಸ್ಪತ್ರೆಯ ಎಲ್ಲಾ ಖರ್ಚು ವೆಚ್ಚ ಭರಿಸೋದಾಗಿ ಮಹಾರಾಣಿಯ ವಿವಿಯ(Maharani cluster university) ವಿಸಿ ಹೇಳಿದ್ರಂತೆ. ಆದ್ರೆ ಆರು ಲಕ್ಷ ನೀಡಿದ ವಿವಿ ಇನ್ಮುಂದೆ ಮತ್ತೆ ಹಣ ಕೇಳಬೇಡಿ ಎಂದು ಕಡ್ಡಿ ಮುರಿದಂತೆ ಹೇಳಿದ್ಯಂತೆ ಡಿಸ್ಚಾರ್ಜ್ ಮಾಡಿಸಿಕೊಂಡು  ಸರ್ಕಾರಿ ಆಸ್ಪತ್ರೆಗೆ(Hospital) ದಾಖಲು ಮಾಡಿ ಅಂತ ಹೇಳಿ ಕೈಬಿಟ್ಟಿದ್ದಾರಂತೆ. ಇನ್ನೂ ಅಶ್ವಿನಿ ವೈದ್ಯಕೀಯ ವೆಚ್ಚ ಈಗಾಗಲೇ  12ಲಕ್ಷ ಮುಟ್ಟಿದೆ. ಹೆಚ್ಚಿನ ಹಣ ಹೇಗೆ ಹೊಂದಿಸೋದು ಎನ್ನುತ್ತಿದೆ ಅಶ್ವಿನಿ ಕುಟುಂಬ. ಇನ್ನೊಂದ್ಕಡೆ ಉಜ್ವಲ ಭವಿಷ್ಯದ ಕನಸು ಕಂಡಿದ್ದ ಅಶ್ವಿನಿಯ ಬಲಗಾಲಿಗೆ ಆಪರೇಷನ್ ಮಾಡಿ ರಾಡ್ ಅಳವಡಿಸಲಾಗಿದೆ. ಆ್ಯಕ್ಸಿಡೆಂಟ್ನಿಂದ ಕನಸೆಲ್ಲಾ ನುಚ್ಚುನೂರಾಗಿದೆ ಎಂದು  ವಿದ್ಯಾರ್ಥಿನಿ(Student) ಕಣ್ಣೀರು ಹಾಕುತ್ತಿದ್ದಾಳೆ. ಅಷ್ಟೇ ಅಲ್ಲ ಕಾಲೇಜಿನವರು ಸೌಜನ್ಯಕ್ಕೂ ನನ್ನನ್ನ ನೋಡಲು ಬಂದಿಲ್ಲ, ಚಿಕಿತ್ಸೆ ವೆಚ್ಚ ಹೆಚ್ಚಾಗಿದ್ದು, ನಮ್ಮ ಕುಟುಂಬಕ್ಕೆ ಸಹಾಯ ಮಾಡಿ ಅಂತ ಅಂಗಾಲಾಚುತ್ತಿದ್ದಾಳೆ. ಅಶ್ವಿನಿಗೆ ಬೆಡ್ ರೆಸ್ಟ್ನಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದಾರೆ..ಈಗಾಗಲೇ ಆಸ್ಪತ್ರೆಗೆ 12 ಲಕ್ಷ ಖರ್ಚು ಮಾಡಿದ್ದು, ಮುಂದಿನ ಟ್ರೀಟ್ಮೆಂಟ್ಗೆ ಹಣ ಹೊಂದಿಸೋದೇ ಕಷ್ಟವಾಗಿದೆ..ಅಶ್ವಿನಿ ಕುಟುಂಬಕ್ಕೆ ಕೊಟ್ಟ ಮಾತಿನಂತೆ ವಿವಿ ನಡೆದುಕೊಳ್ಳಬೇಕಿದೆ.

ಇದನ್ನೂ ವೀಕ್ಷಿಸಿ:  ಅವಳಿನಗರ ಪೊಲೀಸರ ಮುಂದೆ ಚಾಲೆಂಜಿಂಗ್ ಟಾಸ್ಕ್..! ಸಣ್ಣ ಸುಳಿವೂ ಇಲ್ಲದ ಕೇಸ್‌ನಲ್ಲಿ ಖದೀಮರ ಬಂಧಿಸಿದ್ದೇಗೆ..?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more