Acid Attack: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್‌ ಸಂತ್ರಸ್ತೆ ಕುಟುಂಬ

Acid Attack: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್‌ ಸಂತ್ರಸ್ತೆ ಕುಟುಂಬ

Published : Apr 30, 2022, 11:37 AM IST

*  ಮಗಳ ಚಿಕಿತ್ಸೆಗೆ ಹಣ ಹೊಂದಿಸಲು ಪರದಾಡುತ್ತಿರುವ ತಂದೆ-ತಾಯಿ 
*  ದಾನಿಗಳ ಆರ್ಥಿಕ ಸಹಾಯಕ್ಕೆ ಎದುರು ನೋಡುತ್ತಿರುವ ಸಂತ್ರಸ್ತೆಯ ಪೋಷಕರು
*  ಕೂಲಿ ಮಾಡಿಕೊಂಡು ಹೆಂಡತಿ ಮಕ್ಕಳನ್ನು ಸಾಕುತ್ತಿರುವ ತಂದೆ-ತಾಯಿ 
 

ಬೆಂಗಳೂರು(ಏ.30):  ಒಂದೆಡೆ ಮನೆಯ ಆಧಾರಸ್ತಂಭವಾಗಿದ್ದ ಮಗಳು ಕಿಡಿಗೇಡಿಯ ಆ್ಯಸಿಡ್‌ ದಾಳಿಯಿಂದ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ಮಗಳ ಚಿಕಿತ್ಸೆಗೆ ಹಣ ಹೊಂದಿಸಲು ಪರದಾಡುತ್ತಿರುವ ತಂದೆ-ತಾಯಿ ದಾನಿಗಳ ಆರ್ಥಿಕ ಸಹಾಯಕ್ಕೆ ಎದುರು ನೋಡುತ್ತಿದ್ದಾರೆ.

ಸುಂಕದಕಟ್ಟೆ ಬಳಿ ಗುರುವಾರ ಆ್ಯಸಿಡ್‌ ದಾಳಿಗೆ ಒಳಗಾದ ಯುವತಿ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ತರಕಾರಿ ವ್ಯಾಪಾರ ಮಾಡುವ ಸಂತ್ರಸ್ತೆಯ ತಂದೆ ರಾಜಣ್ಣ ಇದೀಗ ಮಗಳ ಚಿಕಿತ್ಸೆಗಾಗಿ ಹಣ ಹೊಂದಿಸಲು ಒದ್ದಾಡುತ್ತಿದ್ದಾರೆ. ರಾಜಣ್ಣ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರನಿದ್ದಾನೆ. ಆರಂಭದಲ್ಲಿ ಪ್ರಿಂಟಿಂಗ್‌ ಪ್ರೆಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಣ್ಣ ಅವರು ಹೃದ್ರೋಗಿಯಾಗಿದ್ದಾರೆ. ಸದ್ಯ ತರಕಾರಿ ವ್ಯಾಪಾರ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.

Udupi: ಸೇಂಟ್ ಮೆರೀಸ್ ದೀಪದಲ್ಲಿ ವಾಚ್ ಟವರ್, ಸೆಲ್ಫಿ ಪಾಯಿಂಟ್ ನಿರ್ಮಿಸಲು ತೀರ್ಮಾನ

ಹಿರಿಯ ಮಗಳ ಮದುವೆ ನಿಶ್ಚಯವಾಗಿದ್ದು, ಮೇ 7 ಮತ್ತು 8 ರಂದು ಮದುವೆ ದಿನಾಂಕ ಗೊತ್ತು ಮಾಡಲಾಗಿದೆ. ಈಗಾಗಲೇ ಸಾಲ ಮಾಡಿ ಮಗಳ ಮದುವೆಗೆ ತಯಾರಿ ನಡೆಸಿರುವ ರಾಜಣ್ಣ ಅವರ ಕುಟುಂಬಕ್ಕೆ ಎರಡನೇ ಮಗಳ ಮೇಲೆ ನಡೆದ ಆ್ಯಸಿಡ್‌ ದಾಳಿ ತೀವ್ರ ನೋವಿನ ಜತೆಗೆ ತೀವ್ರ ಆರ್ಥಿಕ ಸಂಕಷ್ಟವನ್ನು ತಂದೊಡ್ಡಿದೆ. ಹೀಗಾಗಿ ರಾಜಣ್ಣ ಅವರ ಕುಟುಂಬ ಆರ್ಥಿಕ ಸಹಾಯಕ್ಕಾಗಿ ದಾನಿಗಳಿಗೆ ಎದುರು ನೋಡುತ್ತಿದೆ.

ಕೂಲಿ ಮಾಡಿಕೊಂಡು ಹೆಂಡತಿ ಮಕ್ಕಳನ್ನು ಸಾಕಿದ್ದೇನೆ. ನಾನು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದೇನೆ. ತರಕಾರಿ ವ್ಯಾಪಾರ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದೇನೆ. ಮುಂದಿನ ತಿಂಗಳು ಹಿರಿಯ ಮಗಳ ಮದುವೆಯಿದೆ. ಸಂಬಂಧಿಕರು, ಸ್ನೇಹಿತರಿಂದ ಸಾಲ ಪಡೆದು ಮದುವೆಗೆ ಸಿದ್ಧತೆ ಮಾಡಿದ್ದೇನೆ. ಇದೀಗ ಎರಡನೇ ಮಗಳ ಮೇಲೆ ಆ್ಯಸಿಡ್‌ ದಾಳಿಯಾಗಿದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ದಿಕ್ಕೇ ತೋಚದಾಗಿದೆ. ಹಲವರು ಆಸ್ಪತ್ರೆಗೆ ಬಂದು ಸಹಾಯ ಮಾಡುವುದಾಗಿ ಭರವಸೆ ನೀಡುತ್ತಿದ್ದಾರೆ. ಆದರೆ, ಈವರೆಗೂ ಯಾರಿಂದಲೂ ಒಂದು ರು. ನೆರವು ಬಂದಿಲ್ಲ. ಹೀಗಾಗಿ ಸಾಲ ಮಾಡಿ ಮಗಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ದಾನಿಗಳು ಆರ್ಥಿಕ ಸಹಾಯ ನೀಡಿದರೆ ತುಂಬಾ ಅನುಕೂಲವಾಗುತ್ತದೆ ಎಂದು ಸಂತ್ರಸ್ತೆಯ ತಂದೆ ರಾಜಣ್ಣ ‘ಕನ್ನಡಪ್ರಭ’ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more