Acid Attack: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್‌ ಸಂತ್ರಸ್ತೆ ಕುಟುಂಬ

Acid Attack: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್‌ ಸಂತ್ರಸ್ತೆ ಕುಟುಂಬ

Published : Apr 30, 2022, 11:37 AM IST

*  ಮಗಳ ಚಿಕಿತ್ಸೆಗೆ ಹಣ ಹೊಂದಿಸಲು ಪರದಾಡುತ್ತಿರುವ ತಂದೆ-ತಾಯಿ 
*  ದಾನಿಗಳ ಆರ್ಥಿಕ ಸಹಾಯಕ್ಕೆ ಎದುರು ನೋಡುತ್ತಿರುವ ಸಂತ್ರಸ್ತೆಯ ಪೋಷಕರು
*  ಕೂಲಿ ಮಾಡಿಕೊಂಡು ಹೆಂಡತಿ ಮಕ್ಕಳನ್ನು ಸಾಕುತ್ತಿರುವ ತಂದೆ-ತಾಯಿ 
 

ಬೆಂಗಳೂರು(ಏ.30):  ಒಂದೆಡೆ ಮನೆಯ ಆಧಾರಸ್ತಂಭವಾಗಿದ್ದ ಮಗಳು ಕಿಡಿಗೇಡಿಯ ಆ್ಯಸಿಡ್‌ ದಾಳಿಯಿಂದ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ಮಗಳ ಚಿಕಿತ್ಸೆಗೆ ಹಣ ಹೊಂದಿಸಲು ಪರದಾಡುತ್ತಿರುವ ತಂದೆ-ತಾಯಿ ದಾನಿಗಳ ಆರ್ಥಿಕ ಸಹಾಯಕ್ಕೆ ಎದುರು ನೋಡುತ್ತಿದ್ದಾರೆ.

ಸುಂಕದಕಟ್ಟೆ ಬಳಿ ಗುರುವಾರ ಆ್ಯಸಿಡ್‌ ದಾಳಿಗೆ ಒಳಗಾದ ಯುವತಿ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ತರಕಾರಿ ವ್ಯಾಪಾರ ಮಾಡುವ ಸಂತ್ರಸ್ತೆಯ ತಂದೆ ರಾಜಣ್ಣ ಇದೀಗ ಮಗಳ ಚಿಕಿತ್ಸೆಗಾಗಿ ಹಣ ಹೊಂದಿಸಲು ಒದ್ದಾಡುತ್ತಿದ್ದಾರೆ. ರಾಜಣ್ಣ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರನಿದ್ದಾನೆ. ಆರಂಭದಲ್ಲಿ ಪ್ರಿಂಟಿಂಗ್‌ ಪ್ರೆಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಣ್ಣ ಅವರು ಹೃದ್ರೋಗಿಯಾಗಿದ್ದಾರೆ. ಸದ್ಯ ತರಕಾರಿ ವ್ಯಾಪಾರ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.

Udupi: ಸೇಂಟ್ ಮೆರೀಸ್ ದೀಪದಲ್ಲಿ ವಾಚ್ ಟವರ್, ಸೆಲ್ಫಿ ಪಾಯಿಂಟ್ ನಿರ್ಮಿಸಲು ತೀರ್ಮಾನ

ಹಿರಿಯ ಮಗಳ ಮದುವೆ ನಿಶ್ಚಯವಾಗಿದ್ದು, ಮೇ 7 ಮತ್ತು 8 ರಂದು ಮದುವೆ ದಿನಾಂಕ ಗೊತ್ತು ಮಾಡಲಾಗಿದೆ. ಈಗಾಗಲೇ ಸಾಲ ಮಾಡಿ ಮಗಳ ಮದುವೆಗೆ ತಯಾರಿ ನಡೆಸಿರುವ ರಾಜಣ್ಣ ಅವರ ಕುಟುಂಬಕ್ಕೆ ಎರಡನೇ ಮಗಳ ಮೇಲೆ ನಡೆದ ಆ್ಯಸಿಡ್‌ ದಾಳಿ ತೀವ್ರ ನೋವಿನ ಜತೆಗೆ ತೀವ್ರ ಆರ್ಥಿಕ ಸಂಕಷ್ಟವನ್ನು ತಂದೊಡ್ಡಿದೆ. ಹೀಗಾಗಿ ರಾಜಣ್ಣ ಅವರ ಕುಟುಂಬ ಆರ್ಥಿಕ ಸಹಾಯಕ್ಕಾಗಿ ದಾನಿಗಳಿಗೆ ಎದುರು ನೋಡುತ್ತಿದೆ.

ಕೂಲಿ ಮಾಡಿಕೊಂಡು ಹೆಂಡತಿ ಮಕ್ಕಳನ್ನು ಸಾಕಿದ್ದೇನೆ. ನಾನು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದೇನೆ. ತರಕಾರಿ ವ್ಯಾಪಾರ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದೇನೆ. ಮುಂದಿನ ತಿಂಗಳು ಹಿರಿಯ ಮಗಳ ಮದುವೆಯಿದೆ. ಸಂಬಂಧಿಕರು, ಸ್ನೇಹಿತರಿಂದ ಸಾಲ ಪಡೆದು ಮದುವೆಗೆ ಸಿದ್ಧತೆ ಮಾಡಿದ್ದೇನೆ. ಇದೀಗ ಎರಡನೇ ಮಗಳ ಮೇಲೆ ಆ್ಯಸಿಡ್‌ ದಾಳಿಯಾಗಿದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ದಿಕ್ಕೇ ತೋಚದಾಗಿದೆ. ಹಲವರು ಆಸ್ಪತ್ರೆಗೆ ಬಂದು ಸಹಾಯ ಮಾಡುವುದಾಗಿ ಭರವಸೆ ನೀಡುತ್ತಿದ್ದಾರೆ. ಆದರೆ, ಈವರೆಗೂ ಯಾರಿಂದಲೂ ಒಂದು ರು. ನೆರವು ಬಂದಿಲ್ಲ. ಹೀಗಾಗಿ ಸಾಲ ಮಾಡಿ ಮಗಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ದಾನಿಗಳು ಆರ್ಥಿಕ ಸಹಾಯ ನೀಡಿದರೆ ತುಂಬಾ ಅನುಕೂಲವಾಗುತ್ತದೆ ಎಂದು ಸಂತ್ರಸ್ತೆಯ ತಂದೆ ರಾಜಣ್ಣ ‘ಕನ್ನಡಪ್ರಭ’ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more