Acid Attack: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್‌ ಸಂತ್ರಸ್ತೆ ಕುಟುಂಬ

Acid Attack: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್‌ ಸಂತ್ರಸ್ತೆ ಕುಟುಂಬ

Published : Apr 30, 2022, 11:37 AM IST

*  ಮಗಳ ಚಿಕಿತ್ಸೆಗೆ ಹಣ ಹೊಂದಿಸಲು ಪರದಾಡುತ್ತಿರುವ ತಂದೆ-ತಾಯಿ 
*  ದಾನಿಗಳ ಆರ್ಥಿಕ ಸಹಾಯಕ್ಕೆ ಎದುರು ನೋಡುತ್ತಿರುವ ಸಂತ್ರಸ್ತೆಯ ಪೋಷಕರು
*  ಕೂಲಿ ಮಾಡಿಕೊಂಡು ಹೆಂಡತಿ ಮಕ್ಕಳನ್ನು ಸಾಕುತ್ತಿರುವ ತಂದೆ-ತಾಯಿ 
 

ಬೆಂಗಳೂರು(ಏ.30):  ಒಂದೆಡೆ ಮನೆಯ ಆಧಾರಸ್ತಂಭವಾಗಿದ್ದ ಮಗಳು ಕಿಡಿಗೇಡಿಯ ಆ್ಯಸಿಡ್‌ ದಾಳಿಯಿಂದ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ಮಗಳ ಚಿಕಿತ್ಸೆಗೆ ಹಣ ಹೊಂದಿಸಲು ಪರದಾಡುತ್ತಿರುವ ತಂದೆ-ತಾಯಿ ದಾನಿಗಳ ಆರ್ಥಿಕ ಸಹಾಯಕ್ಕೆ ಎದುರು ನೋಡುತ್ತಿದ್ದಾರೆ.

ಸುಂಕದಕಟ್ಟೆ ಬಳಿ ಗುರುವಾರ ಆ್ಯಸಿಡ್‌ ದಾಳಿಗೆ ಒಳಗಾದ ಯುವತಿ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ತರಕಾರಿ ವ್ಯಾಪಾರ ಮಾಡುವ ಸಂತ್ರಸ್ತೆಯ ತಂದೆ ರಾಜಣ್ಣ ಇದೀಗ ಮಗಳ ಚಿಕಿತ್ಸೆಗಾಗಿ ಹಣ ಹೊಂದಿಸಲು ಒದ್ದಾಡುತ್ತಿದ್ದಾರೆ. ರಾಜಣ್ಣ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರನಿದ್ದಾನೆ. ಆರಂಭದಲ್ಲಿ ಪ್ರಿಂಟಿಂಗ್‌ ಪ್ರೆಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಣ್ಣ ಅವರು ಹೃದ್ರೋಗಿಯಾಗಿದ್ದಾರೆ. ಸದ್ಯ ತರಕಾರಿ ವ್ಯಾಪಾರ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.

Udupi: ಸೇಂಟ್ ಮೆರೀಸ್ ದೀಪದಲ್ಲಿ ವಾಚ್ ಟವರ್, ಸೆಲ್ಫಿ ಪಾಯಿಂಟ್ ನಿರ್ಮಿಸಲು ತೀರ್ಮಾನ

ಹಿರಿಯ ಮಗಳ ಮದುವೆ ನಿಶ್ಚಯವಾಗಿದ್ದು, ಮೇ 7 ಮತ್ತು 8 ರಂದು ಮದುವೆ ದಿನಾಂಕ ಗೊತ್ತು ಮಾಡಲಾಗಿದೆ. ಈಗಾಗಲೇ ಸಾಲ ಮಾಡಿ ಮಗಳ ಮದುವೆಗೆ ತಯಾರಿ ನಡೆಸಿರುವ ರಾಜಣ್ಣ ಅವರ ಕುಟುಂಬಕ್ಕೆ ಎರಡನೇ ಮಗಳ ಮೇಲೆ ನಡೆದ ಆ್ಯಸಿಡ್‌ ದಾಳಿ ತೀವ್ರ ನೋವಿನ ಜತೆಗೆ ತೀವ್ರ ಆರ್ಥಿಕ ಸಂಕಷ್ಟವನ್ನು ತಂದೊಡ್ಡಿದೆ. ಹೀಗಾಗಿ ರಾಜಣ್ಣ ಅವರ ಕುಟುಂಬ ಆರ್ಥಿಕ ಸಹಾಯಕ್ಕಾಗಿ ದಾನಿಗಳಿಗೆ ಎದುರು ನೋಡುತ್ತಿದೆ.

ಕೂಲಿ ಮಾಡಿಕೊಂಡು ಹೆಂಡತಿ ಮಕ್ಕಳನ್ನು ಸಾಕಿದ್ದೇನೆ. ನಾನು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದೇನೆ. ತರಕಾರಿ ವ್ಯಾಪಾರ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದೇನೆ. ಮುಂದಿನ ತಿಂಗಳು ಹಿರಿಯ ಮಗಳ ಮದುವೆಯಿದೆ. ಸಂಬಂಧಿಕರು, ಸ್ನೇಹಿತರಿಂದ ಸಾಲ ಪಡೆದು ಮದುವೆಗೆ ಸಿದ್ಧತೆ ಮಾಡಿದ್ದೇನೆ. ಇದೀಗ ಎರಡನೇ ಮಗಳ ಮೇಲೆ ಆ್ಯಸಿಡ್‌ ದಾಳಿಯಾಗಿದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ದಿಕ್ಕೇ ತೋಚದಾಗಿದೆ. ಹಲವರು ಆಸ್ಪತ್ರೆಗೆ ಬಂದು ಸಹಾಯ ಮಾಡುವುದಾಗಿ ಭರವಸೆ ನೀಡುತ್ತಿದ್ದಾರೆ. ಆದರೆ, ಈವರೆಗೂ ಯಾರಿಂದಲೂ ಒಂದು ರು. ನೆರವು ಬಂದಿಲ್ಲ. ಹೀಗಾಗಿ ಸಾಲ ಮಾಡಿ ಮಗಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ದಾನಿಗಳು ಆರ್ಥಿಕ ಸಹಾಯ ನೀಡಿದರೆ ತುಂಬಾ ಅನುಕೂಲವಾಗುತ್ತದೆ ಎಂದು ಸಂತ್ರಸ್ತೆಯ ತಂದೆ ರಾಜಣ್ಣ ‘ಕನ್ನಡಪ್ರಭ’ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more