Acid Attack: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್‌ ಸಂತ್ರಸ್ತೆ ಕುಟುಂಬ

Acid Attack: ತೀವ್ರ ಆರ್ಥಿಕ ಸಂಕಷ್ಟದಲ್ಲಿ ಆ್ಯಸಿಡ್‌ ಸಂತ್ರಸ್ತೆ ಕುಟುಂಬ

Published : Apr 30, 2022, 11:37 AM IST

*  ಮಗಳ ಚಿಕಿತ್ಸೆಗೆ ಹಣ ಹೊಂದಿಸಲು ಪರದಾಡುತ್ತಿರುವ ತಂದೆ-ತಾಯಿ 
*  ದಾನಿಗಳ ಆರ್ಥಿಕ ಸಹಾಯಕ್ಕೆ ಎದುರು ನೋಡುತ್ತಿರುವ ಸಂತ್ರಸ್ತೆಯ ಪೋಷಕರು
*  ಕೂಲಿ ಮಾಡಿಕೊಂಡು ಹೆಂಡತಿ ಮಕ್ಕಳನ್ನು ಸಾಕುತ್ತಿರುವ ತಂದೆ-ತಾಯಿ 
 

ಬೆಂಗಳೂರು(ಏ.30):  ಒಂದೆಡೆ ಮನೆಯ ಆಧಾರಸ್ತಂಭವಾಗಿದ್ದ ಮಗಳು ಕಿಡಿಗೇಡಿಯ ಆ್ಯಸಿಡ್‌ ದಾಳಿಯಿಂದ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ಮಗಳ ಚಿಕಿತ್ಸೆಗೆ ಹಣ ಹೊಂದಿಸಲು ಪರದಾಡುತ್ತಿರುವ ತಂದೆ-ತಾಯಿ ದಾನಿಗಳ ಆರ್ಥಿಕ ಸಹಾಯಕ್ಕೆ ಎದುರು ನೋಡುತ್ತಿದ್ದಾರೆ.

ಸುಂಕದಕಟ್ಟೆ ಬಳಿ ಗುರುವಾರ ಆ್ಯಸಿಡ್‌ ದಾಳಿಗೆ ಒಳಗಾದ ಯುವತಿ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ತರಕಾರಿ ವ್ಯಾಪಾರ ಮಾಡುವ ಸಂತ್ರಸ್ತೆಯ ತಂದೆ ರಾಜಣ್ಣ ಇದೀಗ ಮಗಳ ಚಿಕಿತ್ಸೆಗಾಗಿ ಹಣ ಹೊಂದಿಸಲು ಒದ್ದಾಡುತ್ತಿದ್ದಾರೆ. ರಾಜಣ್ಣ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರನಿದ್ದಾನೆ. ಆರಂಭದಲ್ಲಿ ಪ್ರಿಂಟಿಂಗ್‌ ಪ್ರೆಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಣ್ಣ ಅವರು ಹೃದ್ರೋಗಿಯಾಗಿದ್ದಾರೆ. ಸದ್ಯ ತರಕಾರಿ ವ್ಯಾಪಾರ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.

Udupi: ಸೇಂಟ್ ಮೆರೀಸ್ ದೀಪದಲ್ಲಿ ವಾಚ್ ಟವರ್, ಸೆಲ್ಫಿ ಪಾಯಿಂಟ್ ನಿರ್ಮಿಸಲು ತೀರ್ಮಾನ

ಹಿರಿಯ ಮಗಳ ಮದುವೆ ನಿಶ್ಚಯವಾಗಿದ್ದು, ಮೇ 7 ಮತ್ತು 8 ರಂದು ಮದುವೆ ದಿನಾಂಕ ಗೊತ್ತು ಮಾಡಲಾಗಿದೆ. ಈಗಾಗಲೇ ಸಾಲ ಮಾಡಿ ಮಗಳ ಮದುವೆಗೆ ತಯಾರಿ ನಡೆಸಿರುವ ರಾಜಣ್ಣ ಅವರ ಕುಟುಂಬಕ್ಕೆ ಎರಡನೇ ಮಗಳ ಮೇಲೆ ನಡೆದ ಆ್ಯಸಿಡ್‌ ದಾಳಿ ತೀವ್ರ ನೋವಿನ ಜತೆಗೆ ತೀವ್ರ ಆರ್ಥಿಕ ಸಂಕಷ್ಟವನ್ನು ತಂದೊಡ್ಡಿದೆ. ಹೀಗಾಗಿ ರಾಜಣ್ಣ ಅವರ ಕುಟುಂಬ ಆರ್ಥಿಕ ಸಹಾಯಕ್ಕಾಗಿ ದಾನಿಗಳಿಗೆ ಎದುರು ನೋಡುತ್ತಿದೆ.

ಕೂಲಿ ಮಾಡಿಕೊಂಡು ಹೆಂಡತಿ ಮಕ್ಕಳನ್ನು ಸಾಕಿದ್ದೇನೆ. ನಾನು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದೇನೆ. ತರಕಾರಿ ವ್ಯಾಪಾರ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದೇನೆ. ಮುಂದಿನ ತಿಂಗಳು ಹಿರಿಯ ಮಗಳ ಮದುವೆಯಿದೆ. ಸಂಬಂಧಿಕರು, ಸ್ನೇಹಿತರಿಂದ ಸಾಲ ಪಡೆದು ಮದುವೆಗೆ ಸಿದ್ಧತೆ ಮಾಡಿದ್ದೇನೆ. ಇದೀಗ ಎರಡನೇ ಮಗಳ ಮೇಲೆ ಆ್ಯಸಿಡ್‌ ದಾಳಿಯಾಗಿದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ ದಿಕ್ಕೇ ತೋಚದಾಗಿದೆ. ಹಲವರು ಆಸ್ಪತ್ರೆಗೆ ಬಂದು ಸಹಾಯ ಮಾಡುವುದಾಗಿ ಭರವಸೆ ನೀಡುತ್ತಿದ್ದಾರೆ. ಆದರೆ, ಈವರೆಗೂ ಯಾರಿಂದಲೂ ಒಂದು ರು. ನೆರವು ಬಂದಿಲ್ಲ. ಹೀಗಾಗಿ ಸಾಲ ಮಾಡಿ ಮಗಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ದಾನಿಗಳು ಆರ್ಥಿಕ ಸಹಾಯ ನೀಡಿದರೆ ತುಂಬಾ ಅನುಕೂಲವಾಗುತ್ತದೆ ಎಂದು ಸಂತ್ರಸ್ತೆಯ ತಂದೆ ರಾಜಣ್ಣ ‘ಕನ್ನಡಪ್ರಭ’ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more