ಕೊಲ್ಲೂರಿಗೆ ಕೇರಳ ಭಕ್ತರ ಆಗಮನ.. ಜನರಲ್ಲಿ ಆತಂಕ: ಆಫ್ರಿಕನ್ ಫೀವರ್ ಬಾಧಿಸುವ ಭೀತಿ !

ಕೊಲ್ಲೂರಿಗೆ ಕೇರಳ ಭಕ್ತರ ಆಗಮನ.. ಜನರಲ್ಲಿ ಆತಂಕ: ಆಫ್ರಿಕನ್ ಫೀವರ್ ಬಾಧಿಸುವ ಭೀತಿ !

Published : Sep 01, 2023, 10:57 AM IST

ಕರಾವಳಿಯಲ್ಲಿ ಮತ್ತೊಂದು ಜ್ವರದ ಭೀತಿ ಎದುರಾಗಿದೆ. ಕೇರಳದಲ್ಲಿ ಕಾಣಿಸಿಕೊಂಡಿರುವ ಆಫ್ರಿಕನ್ ಫೀವರ್ ಕರ್ನಾಟಕ ಕರಾವಳಿಗೂ ಬರಬಹುದು 
ಅನ್ನೋ ಆತಂಕ ಜನರಲ್ಲಿ ಮನೆ ಮಾಡಿದೆ. 

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಒಂದರ ಹಿಂದೊಂದರಂತೆ ಸಾಂಕ್ರಾಮಿಕ ಜ್ವರದ ಭೀತಿ ಜನರನ್ನು ಕಾಡುತ್ತಿದೆ. ಈಗಾಗಲೇ ಮಲೇರಿಯಾ ಹಾಗೂ ಡೆಂಘೀ ಜ್ವರ ಆವರಿಸಿಕೊಂಡಿದೆ. ಇದೀಗ ಉಡುಪಿ(Udupi) ಜೊತೆ ಗಡಿ ಹಂಚಿಕೊಂಡ ಕೇರಳದಲ್ಲಿ(Kerala) ಕಾಣಿಸಿಕೊಂಡಿರುವ ಹಂದಿ ಜ್ವರ (Swine Flu) ಅಥವಾ ಆಫ್ರಿಕನ್ ಫ್ಲೂ(African swine fever virus) ಉಡುಪಿಗೂ ವಕ್ಕರಿಸುವ ಆತಂಕ ಕಾಡುತ್ತಿದೆ. ಓಣಂ ಹಬ್ಬದ ಪ್ರಯುಕ್ತ ಕೇರಳದಲ್ಲಿ ಈಗ ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ನಿತ್ಯ ನೂರಾರು ಭಕ್ತರು ಕೊಲ್ಲೂರಿನ ಮುಕಾಂಬಿಕಾ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಹೀಗೆ ಬಂದವರ ಮೂಲಕ ರೋಗ ಹರಡಬಹುದು ಅನ್ನೋ ಭೀತಿ ಜನರನ್ನ ಕಾಡುತ್ತಿದೆ.ಕೇರಳದಲ್ಲಿ ಕೇವಲ ಹಂದಿಗಳಲ್ಲಿ ಮಾತ್ರ ಆಫ್ರಿಕನ್ ಫೀವರ್ ಕಾಣಿಸಿಕೊಂಡಿದೆ. ಈವರೆಗೆ ಯಾವುದೇ ನಾಗರಿಕರಿಗೆ ಜ್ವರ ಬಂದಿಲ್ಲ. ಈ ಜ್ವರ ಮನುಷ್ಯರಿಗೆ ಹಬ್ಬುವುದಿಲ್ಲ ಅಂತಾ ಕೇರಳದ ಪಶುಸಂಗೋಪನ ಇಲಾಖೆ ಸ್ಪಷ್ಟಪಡಿಸಿದೆ. ಹಾಗಾಗಿ ಆತಂಕ ಪಡುವ ಅಗತ್ಯವಿಲ್ಲ ಅಂತಾರೆ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಪ್ರಶಾಂತ್ ಭಟ್. ಆಫ್ರಿಕನ್ ಫೀವರ್ ಬಗ್ಗೆ ಉಡುಪಿ ಜನ ಆತಂಕದಲ್ಲಿದ್ದಾರೆ. ಆದ್ರೆ ಯಾರು ಭಯಪಡುವ ಅಗತ್ಯವಿಲ್ಲ. ಕೇರಳ ಭಾಗದಿಂದ ಬರುವವರಲ್ಲಿ ಜ್ವರದ ಲಕ್ಷಣಗಳು ಕಂಡುಬಂದ್ರೆ ಜ್ವರ ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಸಜ್ಜಾಗಿದೆ ಎನ್ನುತ್ತಿದ್ದಾರೆ ಆರೋಗ್ಯಾಧಿಕಾರಿ ಡಾ. ಪ್ರಶಾಂತ ಭಟ್.

ಇದನ್ನೂ ವೀಕ್ಷಿಸಿ:  ರಾಘವೇಂದ್ರ ಸ್ವಾಮಿ 352ನೇ ಆರಾಧನೆ ಮಹೋತ್ಸವ: ಮಂತ್ರಾಲಯದಲ್ಲಿ ರಾಯರ ಭಕ್ತರ ಸಂಭ್ರಮವೋ ಸಂಭ್ರಮ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more