ಕೊಲ್ಲೂರಿಗೆ ಕೇರಳ ಭಕ್ತರ ಆಗಮನ.. ಜನರಲ್ಲಿ ಆತಂಕ: ಆಫ್ರಿಕನ್ ಫೀವರ್ ಬಾಧಿಸುವ ಭೀತಿ !

ಕೊಲ್ಲೂರಿಗೆ ಕೇರಳ ಭಕ್ತರ ಆಗಮನ.. ಜನರಲ್ಲಿ ಆತಂಕ: ಆಫ್ರಿಕನ್ ಫೀವರ್ ಬಾಧಿಸುವ ಭೀತಿ !

Published : Sep 01, 2023, 10:57 AM IST

ಕರಾವಳಿಯಲ್ಲಿ ಮತ್ತೊಂದು ಜ್ವರದ ಭೀತಿ ಎದುರಾಗಿದೆ. ಕೇರಳದಲ್ಲಿ ಕಾಣಿಸಿಕೊಂಡಿರುವ ಆಫ್ರಿಕನ್ ಫೀವರ್ ಕರ್ನಾಟಕ ಕರಾವಳಿಗೂ ಬರಬಹುದು 
ಅನ್ನೋ ಆತಂಕ ಜನರಲ್ಲಿ ಮನೆ ಮಾಡಿದೆ. 

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಒಂದರ ಹಿಂದೊಂದರಂತೆ ಸಾಂಕ್ರಾಮಿಕ ಜ್ವರದ ಭೀತಿ ಜನರನ್ನು ಕಾಡುತ್ತಿದೆ. ಈಗಾಗಲೇ ಮಲೇರಿಯಾ ಹಾಗೂ ಡೆಂಘೀ ಜ್ವರ ಆವರಿಸಿಕೊಂಡಿದೆ. ಇದೀಗ ಉಡುಪಿ(Udupi) ಜೊತೆ ಗಡಿ ಹಂಚಿಕೊಂಡ ಕೇರಳದಲ್ಲಿ(Kerala) ಕಾಣಿಸಿಕೊಂಡಿರುವ ಹಂದಿ ಜ್ವರ (Swine Flu) ಅಥವಾ ಆಫ್ರಿಕನ್ ಫ್ಲೂ(African swine fever virus) ಉಡುಪಿಗೂ ವಕ್ಕರಿಸುವ ಆತಂಕ ಕಾಡುತ್ತಿದೆ. ಓಣಂ ಹಬ್ಬದ ಪ್ರಯುಕ್ತ ಕೇರಳದಲ್ಲಿ ಈಗ ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ನಿತ್ಯ ನೂರಾರು ಭಕ್ತರು ಕೊಲ್ಲೂರಿನ ಮುಕಾಂಬಿಕಾ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಹೀಗೆ ಬಂದವರ ಮೂಲಕ ರೋಗ ಹರಡಬಹುದು ಅನ್ನೋ ಭೀತಿ ಜನರನ್ನ ಕಾಡುತ್ತಿದೆ.ಕೇರಳದಲ್ಲಿ ಕೇವಲ ಹಂದಿಗಳಲ್ಲಿ ಮಾತ್ರ ಆಫ್ರಿಕನ್ ಫೀವರ್ ಕಾಣಿಸಿಕೊಂಡಿದೆ. ಈವರೆಗೆ ಯಾವುದೇ ನಾಗರಿಕರಿಗೆ ಜ್ವರ ಬಂದಿಲ್ಲ. ಈ ಜ್ವರ ಮನುಷ್ಯರಿಗೆ ಹಬ್ಬುವುದಿಲ್ಲ ಅಂತಾ ಕೇರಳದ ಪಶುಸಂಗೋಪನ ಇಲಾಖೆ ಸ್ಪಷ್ಟಪಡಿಸಿದೆ. ಹಾಗಾಗಿ ಆತಂಕ ಪಡುವ ಅಗತ್ಯವಿಲ್ಲ ಅಂತಾರೆ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಪ್ರಶಾಂತ್ ಭಟ್. ಆಫ್ರಿಕನ್ ಫೀವರ್ ಬಗ್ಗೆ ಉಡುಪಿ ಜನ ಆತಂಕದಲ್ಲಿದ್ದಾರೆ. ಆದ್ರೆ ಯಾರು ಭಯಪಡುವ ಅಗತ್ಯವಿಲ್ಲ. ಕೇರಳ ಭಾಗದಿಂದ ಬರುವವರಲ್ಲಿ ಜ್ವರದ ಲಕ್ಷಣಗಳು ಕಂಡುಬಂದ್ರೆ ಜ್ವರ ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಸಜ್ಜಾಗಿದೆ ಎನ್ನುತ್ತಿದ್ದಾರೆ ಆರೋಗ್ಯಾಧಿಕಾರಿ ಡಾ. ಪ್ರಶಾಂತ ಭಟ್.

ಇದನ್ನೂ ವೀಕ್ಷಿಸಿ:  ರಾಘವೇಂದ್ರ ಸ್ವಾಮಿ 352ನೇ ಆರಾಧನೆ ಮಹೋತ್ಸವ: ಮಂತ್ರಾಲಯದಲ್ಲಿ ರಾಯರ ಭಕ್ತರ ಸಂಭ್ರಮವೋ ಸಂಭ್ರಮ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more