ಕೊಲ್ಲೂರಿಗೆ ಕೇರಳ ಭಕ್ತರ ಆಗಮನ.. ಜನರಲ್ಲಿ ಆತಂಕ: ಆಫ್ರಿಕನ್ ಫೀವರ್ ಬಾಧಿಸುವ ಭೀತಿ !

ಕೊಲ್ಲೂರಿಗೆ ಕೇರಳ ಭಕ್ತರ ಆಗಮನ.. ಜನರಲ್ಲಿ ಆತಂಕ: ಆಫ್ರಿಕನ್ ಫೀವರ್ ಬಾಧಿಸುವ ಭೀತಿ !

Published : Sep 01, 2023, 10:57 AM IST

ಕರಾವಳಿಯಲ್ಲಿ ಮತ್ತೊಂದು ಜ್ವರದ ಭೀತಿ ಎದುರಾಗಿದೆ. ಕೇರಳದಲ್ಲಿ ಕಾಣಿಸಿಕೊಂಡಿರುವ ಆಫ್ರಿಕನ್ ಫೀವರ್ ಕರ್ನಾಟಕ ಕರಾವಳಿಗೂ ಬರಬಹುದು 
ಅನ್ನೋ ಆತಂಕ ಜನರಲ್ಲಿ ಮನೆ ಮಾಡಿದೆ. 

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಒಂದರ ಹಿಂದೊಂದರಂತೆ ಸಾಂಕ್ರಾಮಿಕ ಜ್ವರದ ಭೀತಿ ಜನರನ್ನು ಕಾಡುತ್ತಿದೆ. ಈಗಾಗಲೇ ಮಲೇರಿಯಾ ಹಾಗೂ ಡೆಂಘೀ ಜ್ವರ ಆವರಿಸಿಕೊಂಡಿದೆ. ಇದೀಗ ಉಡುಪಿ(Udupi) ಜೊತೆ ಗಡಿ ಹಂಚಿಕೊಂಡ ಕೇರಳದಲ್ಲಿ(Kerala) ಕಾಣಿಸಿಕೊಂಡಿರುವ ಹಂದಿ ಜ್ವರ (Swine Flu) ಅಥವಾ ಆಫ್ರಿಕನ್ ಫ್ಲೂ(African swine fever virus) ಉಡುಪಿಗೂ ವಕ್ಕರಿಸುವ ಆತಂಕ ಕಾಡುತ್ತಿದೆ. ಓಣಂ ಹಬ್ಬದ ಪ್ರಯುಕ್ತ ಕೇರಳದಲ್ಲಿ ಈಗ ಸರ್ಕಾರಿ ರಜೆ ಘೋಷಿಸಲಾಗಿದೆ. ಹೀಗಾಗಿ ನಿತ್ಯ ನೂರಾರು ಭಕ್ತರು ಕೊಲ್ಲೂರಿನ ಮುಕಾಂಬಿಕಾ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಹೀಗೆ ಬಂದವರ ಮೂಲಕ ರೋಗ ಹರಡಬಹುದು ಅನ್ನೋ ಭೀತಿ ಜನರನ್ನ ಕಾಡುತ್ತಿದೆ.ಕೇರಳದಲ್ಲಿ ಕೇವಲ ಹಂದಿಗಳಲ್ಲಿ ಮಾತ್ರ ಆಫ್ರಿಕನ್ ಫೀವರ್ ಕಾಣಿಸಿಕೊಂಡಿದೆ. ಈವರೆಗೆ ಯಾವುದೇ ನಾಗರಿಕರಿಗೆ ಜ್ವರ ಬಂದಿಲ್ಲ. ಈ ಜ್ವರ ಮನುಷ್ಯರಿಗೆ ಹಬ್ಬುವುದಿಲ್ಲ ಅಂತಾ ಕೇರಳದ ಪಶುಸಂಗೋಪನ ಇಲಾಖೆ ಸ್ಪಷ್ಟಪಡಿಸಿದೆ. ಹಾಗಾಗಿ ಆತಂಕ ಪಡುವ ಅಗತ್ಯವಿಲ್ಲ ಅಂತಾರೆ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಪ್ರಶಾಂತ್ ಭಟ್. ಆಫ್ರಿಕನ್ ಫೀವರ್ ಬಗ್ಗೆ ಉಡುಪಿ ಜನ ಆತಂಕದಲ್ಲಿದ್ದಾರೆ. ಆದ್ರೆ ಯಾರು ಭಯಪಡುವ ಅಗತ್ಯವಿಲ್ಲ. ಕೇರಳ ಭಾಗದಿಂದ ಬರುವವರಲ್ಲಿ ಜ್ವರದ ಲಕ್ಷಣಗಳು ಕಂಡುಬಂದ್ರೆ ಜ್ವರ ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಸಜ್ಜಾಗಿದೆ ಎನ್ನುತ್ತಿದ್ದಾರೆ ಆರೋಗ್ಯಾಧಿಕಾರಿ ಡಾ. ಪ್ರಶಾಂತ ಭಟ್.

ಇದನ್ನೂ ವೀಕ್ಷಿಸಿ:  ರಾಘವೇಂದ್ರ ಸ್ವಾಮಿ 352ನೇ ಆರಾಧನೆ ಮಹೋತ್ಸವ: ಮಂತ್ರಾಲಯದಲ್ಲಿ ರಾಯರ ಭಕ್ತರ ಸಂಭ್ರಮವೋ ಸಂಭ್ರಮ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more