Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Published : Dec 17, 2021, 05:23 PM IST

- ಅತಿವೃಷ್ಟಿ-ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರಿಗೆ ಮತ್ತೊಂದು ಕಂಟಕ

- ಹವಾಮಾನ ಏರುಪೇರಿನಿಂದ ರೈತ ಬೆಳೆದ ಹಿಂಗಾರು ಬೆಳೆಗೆ ಕೀಟಗಳ ಕಾಟ  

- ಔಷಧ ಸಿಂಪಡಣೆ ಮಾಡಿದರೂ ನಿಯಂತ್ರಣಕ್ಕೆ ಬಾರದ ಹುಳುಗಳ ಕಾಟ

- ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರದ ನೆರವಿಗಾಗಿ ಮೊರೆ

ಬೀದರ್ (ಡಿ. 17): ಗಡಿ ಜಿಲ್ಲೆ ಬೀದರ್ (Bidar) ಅಂದ್ರೆ ಸಾಕು ಮೊದಲು ಬರ ನೆನಪಾಗುತ್ತೆ. ಸತತ ನಾಲ್ಕು ವರ್ಷಗಳ ಕಾಲ ಮಳೆಯಾಗದೇ ಜಿಲ್ಲೆಯಲ್ಲಿ ಬರಗಾಲ ಪರಸ್ಥಿತಿ (Drought) ಉಂಟಾಗಿ ರೈತರು ಕಂಗಾಲಾಗಿ ಹೋಗಿದ್ರು. ಬಳಿಕ ಅತಿವೃಷ್ಟಿಯಿಂದ ಹೈರಾಣಾದ್ರು. ಈ ವರ್ಷ ಮಳೆಗಾಲ ಪ್ರಾರಂಭದಲ್ಲಿ ಮತ್ತೆ ಅತಿವೃಷ್ಟಿಯಿಂದ ಮುಂಗಾರು-ಹಂಗಾಮಿನ ಹೆಸರು, ಉದ್ದು ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ರು. ಇದೀಗ ರೈತರು ಬೆಳೆದ ಬಂಗಾರದಂತೆ ಮೇಲೆ ಕೀಟಗಳ ( Insects) ಹಾವಳಿ ಶುರುವಾಗಿದ್ದು ರೈತರು ಕಣ್ಣಿರಲ್ಲಿ ಕೈ ತೋಳೆಯುವಂತ ಪರಸ್ಥಿತಿ ನಿರ್ಮಾಣವಾಗಿದೆ. 

ಇನ್ನೂ ಮುಂಗಾರು ಹಂಗಾಮಿನ ಪ್ರಾರಂಭದಲ್ಲಿ ಅತಿವೃಷ್ಟಿಯಿಂದ ಲಕ್ಷಾಂತರ ಹೇಕ್ಟರ್ ಭೂಮಿಯಲ್ಲಿ ಬೆಳೆದಂತ ಬೆಳೆ ನೀರುಪಾಲಾಗಿತ್ತು. ಈಗ ಮತ್ತೆ ಹಿಂಗಾರು ಬೆಳೆ ಕೂಡ ವಾತಾವರಣದಲ್ಲಿ ಆದ ಏರುಪೇರಿನಿಂದ ವಿವಿಧ ಬಗೆಯ ಫಂಗಸ್ ಹಾಗೂ ಕೀಟಗಳ ಬಾಧೆಯಿಂದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇನ್ನೂ ಸಾಲಶೂಲ ಮಾಡಿ ಔಷಧ ಸಿಂಪಡಣೆ ಮಾಡಿದರೂ ಹುಳುಗಳು ಕಂಟ್ರೋಲ್‌ಗೆ ಬರುವಂತೆ ಲಕ್ಷಣ ಕಾಣಿಸುತ್ತಿಲ್ಲ,. ಹೀಗಾಗಿ ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರ ರೈತರ ಕೈ ಹಿಡಿಯಬೇಕಾಗಿದೆ ಎಂದು ರೈತರು ಮನವಿ ಮಾಡಿಕೊಳ್ಳುತ್ತಿದ್ದಾರೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more