Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Farmers in Distress: ಹಿಂಗಾರು ಬೆಳೆಗೆ ಕೀಟಗಳ ಕಾಟ , ದಿಕ್ಕು ತೋಚದ ರೈತ, ಸರ್ಕಾರದ ನೆರವಿಗಾಗಿ ಮೊರೆ

Published : Dec 17, 2021, 05:23 PM IST

- ಅತಿವೃಷ್ಟಿ-ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರಿಗೆ ಮತ್ತೊಂದು ಕಂಟಕ

- ಹವಾಮಾನ ಏರುಪೇರಿನಿಂದ ರೈತ ಬೆಳೆದ ಹಿಂಗಾರು ಬೆಳೆಗೆ ಕೀಟಗಳ ಕಾಟ  

- ಔಷಧ ಸಿಂಪಡಣೆ ಮಾಡಿದರೂ ನಿಯಂತ್ರಣಕ್ಕೆ ಬಾರದ ಹುಳುಗಳ ಕಾಟ

- ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರದ ನೆರವಿಗಾಗಿ ಮೊರೆ

ಬೀದರ್ (ಡಿ. 17): ಗಡಿ ಜಿಲ್ಲೆ ಬೀದರ್ (Bidar) ಅಂದ್ರೆ ಸಾಕು ಮೊದಲು ಬರ ನೆನಪಾಗುತ್ತೆ. ಸತತ ನಾಲ್ಕು ವರ್ಷಗಳ ಕಾಲ ಮಳೆಯಾಗದೇ ಜಿಲ್ಲೆಯಲ್ಲಿ ಬರಗಾಲ ಪರಸ್ಥಿತಿ (Drought) ಉಂಟಾಗಿ ರೈತರು ಕಂಗಾಲಾಗಿ ಹೋಗಿದ್ರು. ಬಳಿಕ ಅತಿವೃಷ್ಟಿಯಿಂದ ಹೈರಾಣಾದ್ರು. ಈ ವರ್ಷ ಮಳೆಗಾಲ ಪ್ರಾರಂಭದಲ್ಲಿ ಮತ್ತೆ ಅತಿವೃಷ್ಟಿಯಿಂದ ಮುಂಗಾರು-ಹಂಗಾಮಿನ ಹೆಸರು, ಉದ್ದು ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ರು. ಇದೀಗ ರೈತರು ಬೆಳೆದ ಬಂಗಾರದಂತೆ ಮೇಲೆ ಕೀಟಗಳ ( Insects) ಹಾವಳಿ ಶುರುವಾಗಿದ್ದು ರೈತರು ಕಣ್ಣಿರಲ್ಲಿ ಕೈ ತೋಳೆಯುವಂತ ಪರಸ್ಥಿತಿ ನಿರ್ಮಾಣವಾಗಿದೆ. 

ಇನ್ನೂ ಮುಂಗಾರು ಹಂಗಾಮಿನ ಪ್ರಾರಂಭದಲ್ಲಿ ಅತಿವೃಷ್ಟಿಯಿಂದ ಲಕ್ಷಾಂತರ ಹೇಕ್ಟರ್ ಭೂಮಿಯಲ್ಲಿ ಬೆಳೆದಂತ ಬೆಳೆ ನೀರುಪಾಲಾಗಿತ್ತು. ಈಗ ಮತ್ತೆ ಹಿಂಗಾರು ಬೆಳೆ ಕೂಡ ವಾತಾವರಣದಲ್ಲಿ ಆದ ಏರುಪೇರಿನಿಂದ ವಿವಿಧ ಬಗೆಯ ಫಂಗಸ್ ಹಾಗೂ ಕೀಟಗಳ ಬಾಧೆಯಿಂದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇನ್ನೂ ಸಾಲಶೂಲ ಮಾಡಿ ಔಷಧ ಸಿಂಪಡಣೆ ಮಾಡಿದರೂ ಹುಳುಗಳು ಕಂಟ್ರೋಲ್‌ಗೆ ಬರುವಂತೆ ಲಕ್ಷಣ ಕಾಣಿಸುತ್ತಿಲ್ಲ,. ಹೀಗಾಗಿ ರೈತರಿಗೆ ದಿಕ್ಕು ತೋಚದಂತಾಗಿದ್ದು ಸರ್ಕಾರ ರೈತರ ಕೈ ಹಿಡಿಯಬೇಕಾಗಿದೆ ಎಂದು ರೈತರು ಮನವಿ ಮಾಡಿಕೊಳ್ಳುತ್ತಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more