ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

Published : Dec 18, 2023, 11:55 AM IST

ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾತಿಗಣತಿ ದಂಗಲ್..! 
ಹಿಂದುಳಿದ,ದಲಿತ ಮುಖಂಡರ ನೇತೃತ್ವದಲ್ಲಿ ಸಮಾವೇಶ
ಸಂಕ್ರಾಂತಿ ಬಳಿಕ ಅಹಿಂದ ಸಮಾವೇಶಕ್ಕೆ ಸಿಎಂ ಸಿದ್ಧತೆ

ಲೋಕಸಭೆ ಚುನಾವಣೆ ಹೊತ್ತಲ್ಲೇ ಜಾತಿಗಣತಿ ದಂಗಲ್ ಶುರುವಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ(Congress government) ಜಾತಿಗಣತಿ ಅಸ್ತ್ರ ಕಂಟಕವಾಗುವ ಸಾಧ್ಯತೆ ಇದೆ. ಜಾತಿಗಣತಿ ವಿರುದ್ಧ ಒಕ್ಕಲಿಗ, ಲಿಂಗಾಯತರು(Lingayats) ಸಿಡಿದೆದ್ದಿದ್ದಾರೆ. ಅಹಿಂದ ದಾಳದ ಬಳಕೆಗೆ ಸಿಎಂ ಸಿದ್ಧರಾಮಯ್ಯ ಮುಂದಾದಂತೆ ಕಾಣುತ್ತಿದೆ. ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ ನೀಡುವ ಸಾಧ್ಯತೆ ಇದ್ದು, ಅಹಿಂದ ಸಮುದಾಯಗಳಿಂದ ಭರ್ಜರಿ ಸಮಾವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಚಿತ್ರದುರ್ಗದಲ್ಲಿ(Chitradurga) ಶೋಷಿತ ಸಮುದಾಯಗಳ ಐಕ್ಯತಾ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶೋಷಿತ, ಹಿಂದುಳಿದ ಜಾತಿಗಳ ಒಕ್ಕೂಟದಿಂದ ಸಮಾವೇಶ ಮಾಡಲಾಗುತ್ತಿದೆ. ಕಾಂತರಾಜು ವರದಿ(Kantaraju report) ಬಿಡುಗಡೆಗೆ ಒತ್ತಾಯಿಸಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿ ಸಮಾವೇಶಕ್ಕೆ ಪ್ಲಾನ್ ಮಾಡಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಹಿಂದುಳಿದ ವರ್ಗಗಳ ಮುಖಂಡರು, ಹಿಂದುಳಿದ ವರ್ಗಗಳ ಒಕ್ಕೂಟ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ ಮಾಡಲಾಯಿತು. ಜನವರಿ 20 ರಿಂದ 25ರೊಳಗೆ ಸಮಾವೇಶ ನಡೆಯುವ ಸಾಧ್ಯತೆ ಇದ್ದು, ಅಹಿಂದ ಸಮಾವೇಶದ ಮೂಲಕ ರಾಜಕೀಯ ವಿರೋಧಿಗಳಿಗೆ ಸಿಎಂ ಠಕ್ಕರ್..? ಕೊಡಲು ಚಿಂತಿಸುತ್ತಿದ್ದಾರೆ. ಚಿತ್ರದುರ್ಗಕ್ಕೆ ಭೇಟಿ ನೀಡಿ ಸಿಎಂ ಆಪ್ತರಿಂದ ಸಮಾವೇಶದ ಸಮಾಲೋಚನೆ ನಡೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಸಂಸಂತ್ ಒಳಗೆ 3 ಸಂಚು ರೂಪಿಸಿದ್ದಾಗಿ ಬಾಯ್ಬಿಟ್ರಾ ಆರೋಪಿಗಳು..? ಬಗೆದಷ್ಟು ಬಯಲಾಗ್ತಿದೆ ಭಯಾನಕ ಸತ್ಯ !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more