ಉಡುಪಿಯಲ್ಲಿ ಕ್ರಿಸ್‌ಮಸ್‌ ತಯಾರಿ ಶುರು: ವೈನ್‌, ರಮ್‌ ಮಿಶ್ರಣದಿಂದ ಲಕ್ಷಾಂತರ ಮೌಲ್ಯದ ಕೇಕ್‌ ಸಿದ್ಧ

ಉಡುಪಿಯಲ್ಲಿ ಕ್ರಿಸ್‌ಮಸ್‌ ತಯಾರಿ ಶುರು: ವೈನ್‌, ರಮ್‌ ಮಿಶ್ರಣದಿಂದ ಲಕ್ಷಾಂತರ ಮೌಲ್ಯದ ಕೇಕ್‌ ಸಿದ್ಧ

Published : Nov 28, 2023, 11:28 AM IST

ಉಡುಪಿಯಲ್ಲಿ ತಿಂಗಳ ಮೊದಲೇ ಕ್ರಿಸ್ಮಸ್ ತಯಾರಿ ಜೋರಾಗಿದೆ. ಪಾಶ್ಚಾತ್ಯರಲ್ಲೂ ನಮ್ಮಲ್ಲಿರುವಂತೆ ಕೆಲ ಅಪರೂಪದ ಸಂಪ್ರದಾಯಗಳಿವೆ. ಕೃಷಿ ಸಂಸ್ಕೃತಿಯೊಂದಿಗೆ ಬೆರೆತಿರುವ ಒಂದು ಆಚರಣೆಯಂತೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ.
 

ರುಚಿರುಚಿಯಾದ dry Fruits. ನೂರಾರು ಬಗೆಯ ರಾಶಿ ರಾಶಿ ಡ್ರೈ ಫ್ರುಟ್ಸ್ ಗೆ ಆಲ್ಕೋಹಾಲ್  ಮಿಕ್ಸಿಂಗ್(Mixing alcohol).ಸ್ಮೆಲ್ ತಗೊಂಡ್ರೆ ಅಮಲೇರುವಂತಿದೆ.. ಇದು ಉಡುಪಿಯಲ್ಲಿ(Udupi) ತಿಂಗಳ ಮೊದಲೇ ಶುರುವಾದ ಕ್ರಿಸ್ಮಸ್(Christmas) ಹಬ್ಬದ ಕೇಕ್ ತಯಾರಿ. ಡ್ರೈ ಫ್ರುಟ್ಸ್  ಗುಡ್ಡೆ ಹಾಕಿ ರಮ್, ವಿಸ್ಕಿ, ಬ್ಲಾಕ್ ವೈನ್, ರೆಡ್ ವೈನ್, ಬಗೆಬಗೆಯ ಜ್ಯೂಸ್ ಗಳನ್ನ ಸುರಿಯುತ್ತಾರೆ. ಬಳಿಕ ಕಲಸಿಟ್ಟು ಹದ ಮಾಡಲಾದ ಮಿಶ್ರಣವನ್ನು ಮುಚ್ಚಿ ಪೆಟ್ಟಿಗೆಯೊಳಗೆ ಇರಿಸಲಾಯ್ತು. ಈ ಹುಳಿಯಾದ ಮಿಕ್ಸ್ ನ್ನು ಬಳಸಿ ರುಚಿರುಚಿಯಾದ ಕೇಕ್(Cake) ತಯಾರಿಸೋದು ಪಾಶ್ಚಾತ್ಯರ ಆಚರಣೆ.ಕ್ರಿಸ್ಮಸ್ ಹಬ್ಬಕ್ಕೆ ಚಪ್ಪರಿಸಲು ತಿಂಗಳ ಮೊದಲೇ ಕೇಕ್ ತಯಾರಿ ಮಾಡ್ತಾರೆ. ಅದೇ ರೀತಿ ಉಡುಪಿಯ ಮಣಿಪಾಲದಲ್ಲಿರುವ ಹೋಟೆಲ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಒಣ ಹಣ್ಣುಗಳನ್ನು ಹುಳಿ ಮಾಡುವ ಕಾಯಕಕ್ಕೆ ಚಾಲನೆ ನೀಡಲಾಯ್ತು.ಸಾಮಾನ್ಯವಾಗಿ ಪಾಶ್ಚಾತ್ಯ ದೇಶಗಳಲ್ಲಿ ತೆನೆ ಕಟಾವಿನ ಸೀಸನ್ ಕಳೆದ ನಂತ್ರ ಈ ಅಪರೂಪದ ಸಂಪ್ರದಾಯ ಪಾಲಿಸಲಾಗುತ್ತೆ. ಕ್ರಿಸ್ಮಸ್ ಹಬ್ಬಕ್ಕೆ ಬೇಕಾದ ಕೇಕ್ಗೆ ತಯಾರಿ ನಡೆಸೋದು ಈ ಆಚರಣೆಯ ಉದ್ದೇಶವಾಗಿದೆ.ಬ್ರಿಟೀಷರ ಕಾಲದಿಂದಲೂ ಈ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ವೈನ್ ಮತ್ತು ರಮ್ ಬೆರೆಸಿದ ಈ ಮಿಶ್ರಣದಿಂದ ಲಕ್ಷಾಂತರ ಮೌಲ್ಯದ ಕೇಕ್ ಸಿದ್ದವಾಗುತ್ತೆ. ಇದರಿಂದ ತಯಾರಾದ ಕೇಕ್ ನಲ್ಲಿ ಏನೋ ಒಂದು ಕಿಕ್ ಇರುತ್ತದೆ. ಮಾಹೆ ವಿಶ್ವವಿದ್ಯಾಲಯದ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು ಈ ಮೂಲಕ ಪ್ರಾಯೋಗಿಕವಾಗಿ ಲಾರ್ಜ್ ಸ್ಕೇಲ್ ಕುಕ್ಕಿಂಗ್ ಅಭ್ಯಾಸ ಮಾಡಿದ್ರು. ಪ್ರತಿ ಹಬ್ಬಕ್ಕೂ ಅದರದ್ದೇಯಾದ ಸಂಪ್ರದಾಯವಿದೆ.  ಆಚರಿಸುವ ರೀತಿಯಲ್ಲಿ ವೈವಿಧ್ಯತೆ  ಇದೆ. ಕ್ರಿಸ್ ಮಸ್ ಮತ್ತು ಹೊಸವರ್ಷದ ಸಂದರ್ಭದಲ್ಲಿ ಹೋಟೇಲ್ ಗೆ ಬರುವ ಅತಿಥಿಗಳಿಗೆ ಮತ್ತು ಸಾರ್ವಜನಿಕರಿಗೆ ಕೇಕ್ ವಿತರಿಸಲಾಗುತ್ತದೆ. ಕರಾವಳಿ ಭಾಗದಲ್ಲಂತೂ ಜಾತಿ,ಧರ್ಮ ಬೇಧವಿಲ್ಲದೆ ಕ್ರಿಸ್ಮಸ್ ಆಚರಿಸಲಾಗುತ್ತದೆ.

ಇದನ್ನೂ ವೀಕ್ಷಿಸಿ:  ಪೂಜೆ ವೇಳೆ ಅಲುಗಾಡುತ್ತೆ 16 ಅಡಿಯ ಹುತ್ತ ..ಕಾಫಿನಾಡಲ್ಲೊಂದು ವಿಸ್ಮಯ ಉತ್ಸವ..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more