ಉಡುಪಿಯಲ್ಲಿ ಕ್ರಿಸ್‌ಮಸ್‌ ತಯಾರಿ ಶುರು: ವೈನ್‌, ರಮ್‌ ಮಿಶ್ರಣದಿಂದ ಲಕ್ಷಾಂತರ ಮೌಲ್ಯದ ಕೇಕ್‌ ಸಿದ್ಧ

ಉಡುಪಿಯಲ್ಲಿ ಕ್ರಿಸ್‌ಮಸ್‌ ತಯಾರಿ ಶುರು: ವೈನ್‌, ರಮ್‌ ಮಿಶ್ರಣದಿಂದ ಲಕ್ಷಾಂತರ ಮೌಲ್ಯದ ಕೇಕ್‌ ಸಿದ್ಧ

Published : Nov 28, 2023, 11:28 AM IST

ಉಡುಪಿಯಲ್ಲಿ ತಿಂಗಳ ಮೊದಲೇ ಕ್ರಿಸ್ಮಸ್ ತಯಾರಿ ಜೋರಾಗಿದೆ. ಪಾಶ್ಚಾತ್ಯರಲ್ಲೂ ನಮ್ಮಲ್ಲಿರುವಂತೆ ಕೆಲ ಅಪರೂಪದ ಸಂಪ್ರದಾಯಗಳಿವೆ. ಕೃಷಿ ಸಂಸ್ಕೃತಿಯೊಂದಿಗೆ ಬೆರೆತಿರುವ ಒಂದು ಆಚರಣೆಯಂತೂ ತುಂಬಾನೇ ಇಂಟರೆಸ್ಟಿಂಗ್ ಆಗಿದೆ.
 

ರುಚಿರುಚಿಯಾದ dry Fruits. ನೂರಾರು ಬಗೆಯ ರಾಶಿ ರಾಶಿ ಡ್ರೈ ಫ್ರುಟ್ಸ್ ಗೆ ಆಲ್ಕೋಹಾಲ್  ಮಿಕ್ಸಿಂಗ್(Mixing alcohol).ಸ್ಮೆಲ್ ತಗೊಂಡ್ರೆ ಅಮಲೇರುವಂತಿದೆ.. ಇದು ಉಡುಪಿಯಲ್ಲಿ(Udupi) ತಿಂಗಳ ಮೊದಲೇ ಶುರುವಾದ ಕ್ರಿಸ್ಮಸ್(Christmas) ಹಬ್ಬದ ಕೇಕ್ ತಯಾರಿ. ಡ್ರೈ ಫ್ರುಟ್ಸ್  ಗುಡ್ಡೆ ಹಾಕಿ ರಮ್, ವಿಸ್ಕಿ, ಬ್ಲಾಕ್ ವೈನ್, ರೆಡ್ ವೈನ್, ಬಗೆಬಗೆಯ ಜ್ಯೂಸ್ ಗಳನ್ನ ಸುರಿಯುತ್ತಾರೆ. ಬಳಿಕ ಕಲಸಿಟ್ಟು ಹದ ಮಾಡಲಾದ ಮಿಶ್ರಣವನ್ನು ಮುಚ್ಚಿ ಪೆಟ್ಟಿಗೆಯೊಳಗೆ ಇರಿಸಲಾಯ್ತು. ಈ ಹುಳಿಯಾದ ಮಿಕ್ಸ್ ನ್ನು ಬಳಸಿ ರುಚಿರುಚಿಯಾದ ಕೇಕ್(Cake) ತಯಾರಿಸೋದು ಪಾಶ್ಚಾತ್ಯರ ಆಚರಣೆ.ಕ್ರಿಸ್ಮಸ್ ಹಬ್ಬಕ್ಕೆ ಚಪ್ಪರಿಸಲು ತಿಂಗಳ ಮೊದಲೇ ಕೇಕ್ ತಯಾರಿ ಮಾಡ್ತಾರೆ. ಅದೇ ರೀತಿ ಉಡುಪಿಯ ಮಣಿಪಾಲದಲ್ಲಿರುವ ಹೋಟೆಲ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಒಣ ಹಣ್ಣುಗಳನ್ನು ಹುಳಿ ಮಾಡುವ ಕಾಯಕಕ್ಕೆ ಚಾಲನೆ ನೀಡಲಾಯ್ತು.ಸಾಮಾನ್ಯವಾಗಿ ಪಾಶ್ಚಾತ್ಯ ದೇಶಗಳಲ್ಲಿ ತೆನೆ ಕಟಾವಿನ ಸೀಸನ್ ಕಳೆದ ನಂತ್ರ ಈ ಅಪರೂಪದ ಸಂಪ್ರದಾಯ ಪಾಲಿಸಲಾಗುತ್ತೆ. ಕ್ರಿಸ್ಮಸ್ ಹಬ್ಬಕ್ಕೆ ಬೇಕಾದ ಕೇಕ್ಗೆ ತಯಾರಿ ನಡೆಸೋದು ಈ ಆಚರಣೆಯ ಉದ್ದೇಶವಾಗಿದೆ.ಬ್ರಿಟೀಷರ ಕಾಲದಿಂದಲೂ ಈ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ವೈನ್ ಮತ್ತು ರಮ್ ಬೆರೆಸಿದ ಈ ಮಿಶ್ರಣದಿಂದ ಲಕ್ಷಾಂತರ ಮೌಲ್ಯದ ಕೇಕ್ ಸಿದ್ದವಾಗುತ್ತೆ. ಇದರಿಂದ ತಯಾರಾದ ಕೇಕ್ ನಲ್ಲಿ ಏನೋ ಒಂದು ಕಿಕ್ ಇರುತ್ತದೆ. ಮಾಹೆ ವಿಶ್ವವಿದ್ಯಾಲಯದ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು ಈ ಮೂಲಕ ಪ್ರಾಯೋಗಿಕವಾಗಿ ಲಾರ್ಜ್ ಸ್ಕೇಲ್ ಕುಕ್ಕಿಂಗ್ ಅಭ್ಯಾಸ ಮಾಡಿದ್ರು. ಪ್ರತಿ ಹಬ್ಬಕ್ಕೂ ಅದರದ್ದೇಯಾದ ಸಂಪ್ರದಾಯವಿದೆ.  ಆಚರಿಸುವ ರೀತಿಯಲ್ಲಿ ವೈವಿಧ್ಯತೆ  ಇದೆ. ಕ್ರಿಸ್ ಮಸ್ ಮತ್ತು ಹೊಸವರ್ಷದ ಸಂದರ್ಭದಲ್ಲಿ ಹೋಟೇಲ್ ಗೆ ಬರುವ ಅತಿಥಿಗಳಿಗೆ ಮತ್ತು ಸಾರ್ವಜನಿಕರಿಗೆ ಕೇಕ್ ವಿತರಿಸಲಾಗುತ್ತದೆ. ಕರಾವಳಿ ಭಾಗದಲ್ಲಂತೂ ಜಾತಿ,ಧರ್ಮ ಬೇಧವಿಲ್ಲದೆ ಕ್ರಿಸ್ಮಸ್ ಆಚರಿಸಲಾಗುತ್ತದೆ.

ಇದನ್ನೂ ವೀಕ್ಷಿಸಿ:  ಪೂಜೆ ವೇಳೆ ಅಲುಗಾಡುತ್ತೆ 16 ಅಡಿಯ ಹುತ್ತ ..ಕಾಫಿನಾಡಲ್ಲೊಂದು ವಿಸ್ಮಯ ಉತ್ಸವ..!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more