Uttara Kannada: ಮಾಗೋಡು ಗ್ರಾಮದಲ್ಲಿ ಆಲೆಮನೆ ಹಬ್ಬ, 10 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

Uttara Kannada: ಮಾಗೋಡು ಗ್ರಾಮದಲ್ಲಿ ಆಲೆಮನೆ ಹಬ್ಬ, 10 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

Published : Feb 27, 2022, 05:48 PM ISTUpdated : Feb 27, 2022, 06:17 PM IST

ಜಾತ್ರೆ, ರಥೋತ್ಸವ ಹಾಗೂ ಇತರ ಹಬ್ಬಗಳ ಆಚರಣೆಯಲ್ಲಿ ಸಾವಿರಾರು ಜನರು ಸೇರುವುದನ್ನು ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಹಬ್ಬದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರುವ ಮೂಲಕ ಹಬ್ಬವನ್ನು ಜಾತ್ರೆಯನ್ನಾಗಿ ಮಾಡಿದ್ದಾರೆ.

ಉತ್ತರ ಕನ್ನಡ (ಫೆ. 27):  ಜಾತ್ರೆ, ರಥೋತ್ಸವ ಹಾಗೂ ಇತರ ಹಬ್ಬಗಳ ಆಚರಣೆಯಲ್ಲಿ ಸಾವಿರಾರು ಜನರು ಸೇರುವುದನ್ನು ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಹಬ್ಬದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರುವ ಮೂಲಕ ಹಬ್ಬವನ್ನು ಜಾತ್ರೆಯನ್ನಾಗಿ ಮಾಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಗ್ರಾಮದಲ್ಲಿ ಮಲೆನಾಡು ಭಾಗದಲ್ಲಿ ಈ ಹಿಂದೆ ಕಾಣುತ್ತಿದ್ದ ಗ್ರಾಮೀಣ ಸೊಗಡಿನ ಆಲೆಮನೆ ಮತ್ತೆ ಅನಾವರಣಗೊಂಡಿದೆ. ರಾತ್ರಿಯಿಡಿ ಕಬ್ಬಿನ ಗಾಣದ ಸದ್ದು, ಹಾಲು ಕುಡಿದು ಖುಷಿಪಡುತ್ತಿರುವವರ ಸಂಖ್ಯೆಗೇನು ಕೊರತೆ ಇಲ್ಲ. ಕಳೆದ ಐದು ವರ್ಷಗಳಿಂದ ಮಾಗೋಡು  ಗ್ರಾಮದಲ್ಲಿ ಇಂಥ ಅಲೆಮನೆ ಹಬ್ಬವನ್ನು ಸಂಘಟಿಸಲಾಗುತ್ತಿದೆ.  ಆಲೆಮನೆಯಲ್ಲಿ ಹಳ್ಳಿಯ ಬಗೆಬಗೆಯ ತಿಂಡಿ ತಿನಿಸುಗಳ ಜತೆಗೆ  ಮನಸ್ಸಿಗೆ ಉಲ್ಲಾಸ ನೀಡುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.  ಆಲೆಮನೆಯಲ್ಲಿ ಬಂಧು ಬಾಂಧವರು, ಮಿತ್ರರು ಎಲ್ಲರ ಸಮಾಗಮವಾಗಿರುವುದು ಇಲ್ಲಿನ ವಿಶೇಷವಾಗಿದೆ. 

ಮಾಗೋಡು ಗ್ರಾಮದಲ್ಲಿ ನಡೆದ ಈ ಉತ್ಸವದಲ್ಲಿ ಪರಿಶುದ್ಧ ಕಬ್ಬಿನ ಹಾಲು, ತೊಡೆದೇವು, ಬೆಲ್ಲ, ಕಾಕಂಬಿ, ಮಾರಾಟವೂ ಕೂಡ ಜೋರಾಗಿತ್ತು. ಆಗಮಿಸಿದ ಪ್ರತಿಯೊಬ್ಬರಿಗೂ ಉಚಿತವಾಗಿ ಹಾಲು, ಬಜೆ, ಪಾಪಡಿಯನ್ನು ನೀಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಅಲ್ಲದೇ, ಹಬ್ಬದ ವಿಶೇಷವಾಗಿ ಮಹಾದ್ವಾರದ ವಿವಿಧ ಮಳಿಗೆಗಳಲ್ಲೂ ಪೌರಾಣಿಕ ಕಲ್ಪನೆ ಕೊಡುವ ನಮ್ಮ ಮಹಾಕಾವ್ಯಗಳ ಪರಿಚಯ ಮಾಡಿಸುವ ಪ್ರಯತ್ನ ನಡೆಯಿತು. ಹಳೆಯ ಕಾಲದ ಆಲೆಮನೆಯ ವೈಭವವನ್ನು ನೋಡುವ ಅವಕಾಶ ಮಲೆನಾಡು ಭಾಗದ ನಾಗರಿಕರಿಗೆ ಲಭಿಸಿತು.  ಸುಮಾರು 10 ಟನ್ ಗೂ ಹೆಚ್ಚು ಕಬ್ಬುಗಳನ್ನು ತರಿಸಲಾಗಿದ್ದು, 10 ಆರು ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡರು.  ಕೃಷಿಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಿರೋದಾಗಿ ಸಂಘಟಕರು ಹೇಳಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more