Uttara Kannada: ಮಾಗೋಡು ಗ್ರಾಮದಲ್ಲಿ ಆಲೆಮನೆ ಹಬ್ಬ, 10 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

Uttara Kannada: ಮಾಗೋಡು ಗ್ರಾಮದಲ್ಲಿ ಆಲೆಮನೆ ಹಬ್ಬ, 10 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

Published : Feb 27, 2022, 05:48 PM ISTUpdated : Feb 27, 2022, 06:17 PM IST

ಜಾತ್ರೆ, ರಥೋತ್ಸವ ಹಾಗೂ ಇತರ ಹಬ್ಬಗಳ ಆಚರಣೆಯಲ್ಲಿ ಸಾವಿರಾರು ಜನರು ಸೇರುವುದನ್ನು ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಹಬ್ಬದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರುವ ಮೂಲಕ ಹಬ್ಬವನ್ನು ಜಾತ್ರೆಯನ್ನಾಗಿ ಮಾಡಿದ್ದಾರೆ.

ಉತ್ತರ ಕನ್ನಡ (ಫೆ. 27):  ಜಾತ್ರೆ, ರಥೋತ್ಸವ ಹಾಗೂ ಇತರ ಹಬ್ಬಗಳ ಆಚರಣೆಯಲ್ಲಿ ಸಾವಿರಾರು ಜನರು ಸೇರುವುದನ್ನು ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಹಬ್ಬದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರುವ ಮೂಲಕ ಹಬ್ಬವನ್ನು ಜಾತ್ರೆಯನ್ನಾಗಿ ಮಾಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಗ್ರಾಮದಲ್ಲಿ ಮಲೆನಾಡು ಭಾಗದಲ್ಲಿ ಈ ಹಿಂದೆ ಕಾಣುತ್ತಿದ್ದ ಗ್ರಾಮೀಣ ಸೊಗಡಿನ ಆಲೆಮನೆ ಮತ್ತೆ ಅನಾವರಣಗೊಂಡಿದೆ. ರಾತ್ರಿಯಿಡಿ ಕಬ್ಬಿನ ಗಾಣದ ಸದ್ದು, ಹಾಲು ಕುಡಿದು ಖುಷಿಪಡುತ್ತಿರುವವರ ಸಂಖ್ಯೆಗೇನು ಕೊರತೆ ಇಲ್ಲ. ಕಳೆದ ಐದು ವರ್ಷಗಳಿಂದ ಮಾಗೋಡು  ಗ್ರಾಮದಲ್ಲಿ ಇಂಥ ಅಲೆಮನೆ ಹಬ್ಬವನ್ನು ಸಂಘಟಿಸಲಾಗುತ್ತಿದೆ.  ಆಲೆಮನೆಯಲ್ಲಿ ಹಳ್ಳಿಯ ಬಗೆಬಗೆಯ ತಿಂಡಿ ತಿನಿಸುಗಳ ಜತೆಗೆ  ಮನಸ್ಸಿಗೆ ಉಲ್ಲಾಸ ನೀಡುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.  ಆಲೆಮನೆಯಲ್ಲಿ ಬಂಧು ಬಾಂಧವರು, ಮಿತ್ರರು ಎಲ್ಲರ ಸಮಾಗಮವಾಗಿರುವುದು ಇಲ್ಲಿನ ವಿಶೇಷವಾಗಿದೆ. 

ಮಾಗೋಡು ಗ್ರಾಮದಲ್ಲಿ ನಡೆದ ಈ ಉತ್ಸವದಲ್ಲಿ ಪರಿಶುದ್ಧ ಕಬ್ಬಿನ ಹಾಲು, ತೊಡೆದೇವು, ಬೆಲ್ಲ, ಕಾಕಂಬಿ, ಮಾರಾಟವೂ ಕೂಡ ಜೋರಾಗಿತ್ತು. ಆಗಮಿಸಿದ ಪ್ರತಿಯೊಬ್ಬರಿಗೂ ಉಚಿತವಾಗಿ ಹಾಲು, ಬಜೆ, ಪಾಪಡಿಯನ್ನು ನೀಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಅಲ್ಲದೇ, ಹಬ್ಬದ ವಿಶೇಷವಾಗಿ ಮಹಾದ್ವಾರದ ವಿವಿಧ ಮಳಿಗೆಗಳಲ್ಲೂ ಪೌರಾಣಿಕ ಕಲ್ಪನೆ ಕೊಡುವ ನಮ್ಮ ಮಹಾಕಾವ್ಯಗಳ ಪರಿಚಯ ಮಾಡಿಸುವ ಪ್ರಯತ್ನ ನಡೆಯಿತು. ಹಳೆಯ ಕಾಲದ ಆಲೆಮನೆಯ ವೈಭವವನ್ನು ನೋಡುವ ಅವಕಾಶ ಮಲೆನಾಡು ಭಾಗದ ನಾಗರಿಕರಿಗೆ ಲಭಿಸಿತು.  ಸುಮಾರು 10 ಟನ್ ಗೂ ಹೆಚ್ಚು ಕಬ್ಬುಗಳನ್ನು ತರಿಸಲಾಗಿದ್ದು, 10 ಆರು ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡರು.  ಕೃಷಿಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಿರೋದಾಗಿ ಸಂಘಟಕರು ಹೇಳಿದ್ದಾರೆ. 

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more