Uttara Kannada: ಮಾಗೋಡು ಗ್ರಾಮದಲ್ಲಿ ಆಲೆಮನೆ ಹಬ್ಬ, 10 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

Uttara Kannada: ಮಾಗೋಡು ಗ್ರಾಮದಲ್ಲಿ ಆಲೆಮನೆ ಹಬ್ಬ, 10 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

Published : Feb 27, 2022, 05:48 PM ISTUpdated : Feb 27, 2022, 06:17 PM IST

ಜಾತ್ರೆ, ರಥೋತ್ಸವ ಹಾಗೂ ಇತರ ಹಬ್ಬಗಳ ಆಚರಣೆಯಲ್ಲಿ ಸಾವಿರಾರು ಜನರು ಸೇರುವುದನ್ನು ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಹಬ್ಬದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರುವ ಮೂಲಕ ಹಬ್ಬವನ್ನು ಜಾತ್ರೆಯನ್ನಾಗಿ ಮಾಡಿದ್ದಾರೆ.

ಉತ್ತರ ಕನ್ನಡ (ಫೆ. 27):  ಜಾತ್ರೆ, ರಥೋತ್ಸವ ಹಾಗೂ ಇತರ ಹಬ್ಬಗಳ ಆಚರಣೆಯಲ್ಲಿ ಸಾವಿರಾರು ಜನರು ಸೇರುವುದನ್ನು ನಾವು ನೋಡಿದ್ದೇವೆ. ಆದರೆ, ಇಲ್ಲೊಂದು ಹಬ್ಬದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಸೇರುವ ಮೂಲಕ ಹಬ್ಬವನ್ನು ಜಾತ್ರೆಯನ್ನಾಗಿ ಮಾಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಗ್ರಾಮದಲ್ಲಿ ಮಲೆನಾಡು ಭಾಗದಲ್ಲಿ ಈ ಹಿಂದೆ ಕಾಣುತ್ತಿದ್ದ ಗ್ರಾಮೀಣ ಸೊಗಡಿನ ಆಲೆಮನೆ ಮತ್ತೆ ಅನಾವರಣಗೊಂಡಿದೆ. ರಾತ್ರಿಯಿಡಿ ಕಬ್ಬಿನ ಗಾಣದ ಸದ್ದು, ಹಾಲು ಕುಡಿದು ಖುಷಿಪಡುತ್ತಿರುವವರ ಸಂಖ್ಯೆಗೇನು ಕೊರತೆ ಇಲ್ಲ. ಕಳೆದ ಐದು ವರ್ಷಗಳಿಂದ ಮಾಗೋಡು  ಗ್ರಾಮದಲ್ಲಿ ಇಂಥ ಅಲೆಮನೆ ಹಬ್ಬವನ್ನು ಸಂಘಟಿಸಲಾಗುತ್ತಿದೆ.  ಆಲೆಮನೆಯಲ್ಲಿ ಹಳ್ಳಿಯ ಬಗೆಬಗೆಯ ತಿಂಡಿ ತಿನಿಸುಗಳ ಜತೆಗೆ  ಮನಸ್ಸಿಗೆ ಉಲ್ಲಾಸ ನೀಡುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.  ಆಲೆಮನೆಯಲ್ಲಿ ಬಂಧು ಬಾಂಧವರು, ಮಿತ್ರರು ಎಲ್ಲರ ಸಮಾಗಮವಾಗಿರುವುದು ಇಲ್ಲಿನ ವಿಶೇಷವಾಗಿದೆ. 

ಮಾಗೋಡು ಗ್ರಾಮದಲ್ಲಿ ನಡೆದ ಈ ಉತ್ಸವದಲ್ಲಿ ಪರಿಶುದ್ಧ ಕಬ್ಬಿನ ಹಾಲು, ತೊಡೆದೇವು, ಬೆಲ್ಲ, ಕಾಕಂಬಿ, ಮಾರಾಟವೂ ಕೂಡ ಜೋರಾಗಿತ್ತು. ಆಗಮಿಸಿದ ಪ್ರತಿಯೊಬ್ಬರಿಗೂ ಉಚಿತವಾಗಿ ಹಾಲು, ಬಜೆ, ಪಾಪಡಿಯನ್ನು ನೀಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಅಲ್ಲದೇ, ಹಬ್ಬದ ವಿಶೇಷವಾಗಿ ಮಹಾದ್ವಾರದ ವಿವಿಧ ಮಳಿಗೆಗಳಲ್ಲೂ ಪೌರಾಣಿಕ ಕಲ್ಪನೆ ಕೊಡುವ ನಮ್ಮ ಮಹಾಕಾವ್ಯಗಳ ಪರಿಚಯ ಮಾಡಿಸುವ ಪ್ರಯತ್ನ ನಡೆಯಿತು. ಹಳೆಯ ಕಾಲದ ಆಲೆಮನೆಯ ವೈಭವವನ್ನು ನೋಡುವ ಅವಕಾಶ ಮಲೆನಾಡು ಭಾಗದ ನಾಗರಿಕರಿಗೆ ಲಭಿಸಿತು.  ಸುಮಾರು 10 ಟನ್ ಗೂ ಹೆಚ್ಚು ಕಬ್ಬುಗಳನ್ನು ತರಿಸಲಾಗಿದ್ದು, 10 ಆರು ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡರು.  ಕೃಷಿಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಿರೋದಾಗಿ ಸಂಘಟಕರು ಹೇಳಿದ್ದಾರೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more