ಕೊರೋನಾ ಭೀತಿ: ಕಲಬುರಗಿ ಸಂಪರ್ಕಿಸುವ ಎಲ್ಲ ಖಾಸಗಿ ಬಸ್ ರದ್ದು..!

ಕೊರೋನಾ ಭೀತಿ: ಕಲಬುರಗಿ ಸಂಪರ್ಕಿಸುವ ಎಲ್ಲ ಖಾಸಗಿ ಬಸ್ ರದ್ದು..!

Suvarna News   | Asianet News
Published : Mar 18, 2020, 05:49 PM IST

ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರಗಿಯಿಂದ ಹೊರಹೋಗುವ ಮತ್ತು ಒಳಬರುವ ಎಲ್ಲಾ ಖಾಸಗಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಬಿ.ಶರತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

 

ಕಲಬುರಗಿ(ಮಾ.18): ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರಗಿಯಿಂದ ಹೊರಹೋಗುವ ಮತ್ತು ಒಳಬರುವ ಎಲ್ಲಾ ಖಾಸಗಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಬಿ.ಶರತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಖಾಸಗಿ ಟ್ರಾವೆಲರ್ಸ್‌‌ ಮತ್ತು ಬುಕ್ಕಿಂಗ್ ಏಜೆಂಟರ ಸಭೆಯಲ್ಲಿ ಅವರು ಸೂಚನೆ ನೀಡಿದ್ದಾರೆ. ರಾಜ್ಯದ ರಾಜಧಾನಿ ಬೆಂಗಳೂರು, ಇತರೆ ಜಿಲ್ಲೆಗಳು, ನೆರೆರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳಿಗೆ ತೆರಳುವ ಮತ್ತು ಜಿಲ್ಲೆಯೊಳಗೆ ಬರುವ ಬಸ್‌ಗಳ ಸಂಚಾರ ನಿಲ್ಲಿಸಬೇಕು. ಈಗಾಗಲೇ ಬುಕ್ಕಿಂಗ್ ಮಾಡಿರುವ ಸೀಟುಗಳ ಟಿಕೆಟ್ ಗಳನ್ನು ರದ್ದುಮಾಡುವಂತೆ ಬಸ್ ಮಾಲೀಕರು ಮತ್ತು ಏಜಂಟರಿಗೆ ಸೂಚನೆ ನೀಡಿದ್ದಾರೆ.

ಕೊರೋನಾ ಕಾಟ ಅಷ್ಟಿಷ್ಟಲ್ಲ: ಬರೀ ಕೆಮ್ಮಿದ್ದಕ್ಕೆ ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿದ ಜನ!

ಮುಂದಿನ ಆದೇಶದವರೆಗೆ ಇದನ್ನು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ. ಒಂದುವೇಳೆ, ಈ ಸೂಚನೆಯನ್ನು ಮೀರಿ ಬಸ್ ಗಳ ಓಡಾಟ ನಡೆಸಿದಲ್ಲಿ, ಅಂತಹ ವಾಹನಗಳನ್ನು ಜಫ್ತಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ 17 ಚೆಕ್ ಪೋಸ್ಟ್ ತೆರೆದಿದ್ದು, ಬಸ್ ಗಳ ಸಂಚಾರದ ಮೇಲೆ ನಿಗಾವಹಿಸಲಾಗುತ್ತದೆ ಎಂದಿದ್ದಾರೆ.

ಇತ್ತೀಚೆಗೆ ಕೆಲವರು ಮುಂಬೈ,ಪುಣೆ,ಹೈದರಾಬಾದ್ ವಿಮಾನನಿಲ್ದಾಣದಲ್ಲಿ ಇಳಿದು,ಬಸ್ ಗಳ ಮೂಲಕ ಕಲಬುರಗಿ ಜಿಲ್ಲೆಗೆ ಬಂದಿರುತ್ತಾರೆ. ಹಾಗಾಗಿ ಇದುವರೆಗೆ ಕಲಬುರಗಿ ನಗರ ಮತ್ತು ಜಿಲ್ಲೆಗೆ ಬಂದಿರುವ ಪ್ರಯಾಣಿಕರ ಸಂಪೂರ್ಣ ವಿವರ ನೀಡುವಂತೆಯೂ ಅವರು ಇದೇ ಸಂದರ್ಭದಲ್ಲಿ ಏಜೆಂಟರಿಗೆ ಸೂಚಿಸಿದ್ದಾರೆ.
ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಇದ್ದರು.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!