ಕೊರೋನಾ ಭೀತಿ: ಕಲಬುರಗಿ ಸಂಪರ್ಕಿಸುವ ಎಲ್ಲ ಖಾಸಗಿ ಬಸ್ ರದ್ದು..!

ಕೊರೋನಾ ಭೀತಿ: ಕಲಬುರಗಿ ಸಂಪರ್ಕಿಸುವ ಎಲ್ಲ ಖಾಸಗಿ ಬಸ್ ರದ್ದು..!

Suvarna News   | Asianet News
Published : Mar 18, 2020, 05:49 PM IST

ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರಗಿಯಿಂದ ಹೊರಹೋಗುವ ಮತ್ತು ಒಳಬರುವ ಎಲ್ಲಾ ಖಾಸಗಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಬಿ.ಶರತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

 

ಕಲಬುರಗಿ(ಮಾ.18): ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರಗಿಯಿಂದ ಹೊರಹೋಗುವ ಮತ್ತು ಒಳಬರುವ ಎಲ್ಲಾ ಖಾಸಗಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಬಿ.ಶರತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಖಾಸಗಿ ಟ್ರಾವೆಲರ್ಸ್‌‌ ಮತ್ತು ಬುಕ್ಕಿಂಗ್ ಏಜೆಂಟರ ಸಭೆಯಲ್ಲಿ ಅವರು ಸೂಚನೆ ನೀಡಿದ್ದಾರೆ. ರಾಜ್ಯದ ರಾಜಧಾನಿ ಬೆಂಗಳೂರು, ಇತರೆ ಜಿಲ್ಲೆಗಳು, ನೆರೆರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳಿಗೆ ತೆರಳುವ ಮತ್ತು ಜಿಲ್ಲೆಯೊಳಗೆ ಬರುವ ಬಸ್‌ಗಳ ಸಂಚಾರ ನಿಲ್ಲಿಸಬೇಕು. ಈಗಾಗಲೇ ಬುಕ್ಕಿಂಗ್ ಮಾಡಿರುವ ಸೀಟುಗಳ ಟಿಕೆಟ್ ಗಳನ್ನು ರದ್ದುಮಾಡುವಂತೆ ಬಸ್ ಮಾಲೀಕರು ಮತ್ತು ಏಜಂಟರಿಗೆ ಸೂಚನೆ ನೀಡಿದ್ದಾರೆ.

ಕೊರೋನಾ ಕಾಟ ಅಷ್ಟಿಷ್ಟಲ್ಲ: ಬರೀ ಕೆಮ್ಮಿದ್ದಕ್ಕೆ ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿದ ಜನ!

ಮುಂದಿನ ಆದೇಶದವರೆಗೆ ಇದನ್ನು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ. ಒಂದುವೇಳೆ, ಈ ಸೂಚನೆಯನ್ನು ಮೀರಿ ಬಸ್ ಗಳ ಓಡಾಟ ನಡೆಸಿದಲ್ಲಿ, ಅಂತಹ ವಾಹನಗಳನ್ನು ಜಫ್ತಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ 17 ಚೆಕ್ ಪೋಸ್ಟ್ ತೆರೆದಿದ್ದು, ಬಸ್ ಗಳ ಸಂಚಾರದ ಮೇಲೆ ನಿಗಾವಹಿಸಲಾಗುತ್ತದೆ ಎಂದಿದ್ದಾರೆ.

ಇತ್ತೀಚೆಗೆ ಕೆಲವರು ಮುಂಬೈ,ಪುಣೆ,ಹೈದರಾಬಾದ್ ವಿಮಾನನಿಲ್ದಾಣದಲ್ಲಿ ಇಳಿದು,ಬಸ್ ಗಳ ಮೂಲಕ ಕಲಬುರಗಿ ಜಿಲ್ಲೆಗೆ ಬಂದಿರುತ್ತಾರೆ. ಹಾಗಾಗಿ ಇದುವರೆಗೆ ಕಲಬುರಗಿ ನಗರ ಮತ್ತು ಜಿಲ್ಲೆಗೆ ಬಂದಿರುವ ಪ್ರಯಾಣಿಕರ ಸಂಪೂರ್ಣ ವಿವರ ನೀಡುವಂತೆಯೂ ಅವರು ಇದೇ ಸಂದರ್ಭದಲ್ಲಿ ಏಜೆಂಟರಿಗೆ ಸೂಚಿಸಿದ್ದಾರೆ.
ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ಇದ್ದರು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!