Chitradurga: ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ, ನೀರು ಹಂಚಿಕೆ  ವಿಚಾರದಲ್ಲಿ ಆಂಧ್ರ ಕ್ಯಾತೆ

Chitradurga: ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ, ನೀರು ಹಂಚಿಕೆ ವಿಚಾರದಲ್ಲಿ ಆಂಧ್ರ ಕ್ಯಾತೆ

Published : Jan 05, 2022, 01:19 PM ISTUpdated : Jan 05, 2022, 01:47 PM IST

- ಭದ್ರಾ ಮೇಲ್ದಂಡೆ ಯೋಜನೆ ಮಧ್ಯಕರ್ನಾಟಕದ ಕನಸಿನ ಯೋಜನೆ 

- ರಾಷ್ಟ್ರೀಯ ಯೋಜನೆ ಘೋಷಣೆಯಾದ್ರೂ ಇನ್ನೂ ಬಾರದ ಅನುದಾನ

- ನೀರಿನ ಹಂಚಿಕೆ  ವಿಚಾರದಲ್ಲಿ ನೆರೆಯ ಆಂಧ್ರ ಪ್ರದೇಶದಿಂದ ಕ್ಯಾತೆ 
 

ಚಿತ್ರದುರ್ಗ (ಜ. 05): ಮಧ್ಯಕರ್ನಾಟಕದ ಕನಸಿನ ಯೋಜನೆ ಅಂದ್ರೆ ಅದು ಭದ್ರಾ ಮೇಲ್ದಂಡೆ ಯೋಜನೆ (Upper Bhadra Project) ಈ ಯೋಜನೆ ಜಾರಿಯಾದ್ರೆ ಬರದನಾಡು ಚಿತ್ರದುರ್ಗ, ದಾವಣಗೆರೆ, ತುಮಕೂರು ಹಾಗೂ ಚಿಕ್ಕಮಗಳೂರು  ಜಿಲ್ಲೆಗಳ ಜನರ ಬವಣೆ ನೀಗಲಿದೆ. ಹೀಗಾಗಿ ರಾಷ್ಟ್ರೀಯ ಯೋಜನೆ ಅಂತ ಘೋಷಣೆಯಾಗಿ ಒಂದು ತಿಂಗಳೇ ಕಳೆದು ಹೋಯ್ತು. ಆದರೆ ಕೇಂದ್ರ ಸರ್ಕಾರದಿಂದ ಈವರೆಗೆ ನಯಾಪೈಸಾ ಅನುದಾನ ಮಾತ್ರ ಬಿಡುಗಡೆ ಆಗಿಲ್ಲ. ಈ ನಡುವೆ ನೆರೆಯ ಆಂಧ್ರ ಪ್ರದೇಶ ಹೊಸ ಕ್ಯಾತೆಯೊಂದನ್ನು ಶುರುಮಾಡಿದೆ. 

ತುಂಗಾಭದ್ರಾ ನೀರಿನ ಹಂಚಿಕೆ ಹಾಗೂ ಹರಿಸುವಿಕೆ ವಿಚಾರದಲ್ಲಿ ಶಂಕೆ ವ್ಯಕ್ತಪಡಿಸಿದೆ. ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವ ಮುನ್ನ ಆಂಧ್ರಕ್ಕೆ ಆಗುವ ಅನ್ಯಾಯದ ಬಗ್ಗೆ ಸ್ಪಷ್ಟನೆ ನೀಡಿದ ಬಳಿಕ ಯೋಜನೆ ಮುಂದುವರೆಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಇದು  ಎರಡು ರಾಜ್ಯಗಳ ನಡುವೆ ಬಾರಿ ದ್ವೇಷಕ್ಕೆ ದಾರಿಯಾಗಿದ್ದೂ, ಕೋಟೆನಾಡಿನ ರೈತರು ಆಂಧ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

 ಇನ್ನು 2008ರಲ್ಲಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಘೋಷಣೆಯಾದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ಆರಂಭದಲ್ಲಿ ಕೇವಲ ಮೂರರಿಂದ ಐದು ಸಾವಿರ ಕೋಟಿ ವೆಚ್ಚದಲ್ಲಿ ಆರಂಭವಾಗಿತ್ತು. ಆದ್ರೆ ಇದೀಗ   ಹತ್ತು ಸಾವಿರ ಕೋಟಿಗೂ ಮಿಗಿಲಾಗಿ ವೆಚ್ಚ ಮೀರಿದ ಬೆನ್ನಲ್ಲೇ, ಕೇಂದ್ರ ಸರ್ಕಾರ ಇದನ್ನು ರಾಜ್ಯದ ಮೊಟ್ಟ ಮೊದಲ ರಾಷ್ಟ್ರೀಯ ಯೋಜನೆಯೆಂದು ಘೋಷಣೆ ಮಾಡಿದೆ. ಆದರೆ ನೆರೆಯ ಆಂಧ್ರಪ್ರದೇಶದ ಖ್ಯಾತೆಯಿಂದಾಗಿ, ಅವರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಗೆಜೆಟೆಡ್ ನೋಟಿಫಿಕೇಶನ್ ಪಾಸ್ ಮಾಡಲು ಹಿಂದೇಟು ಹಾಕುತ್ತಿರೋದು ವಿಪರ್ಯಾಸ ಎನಿಸಿದೆ. ಹೀಗಾಗಿ ಎಚ್ಚೆತ್ತಿರೋ‌ ಚಿತ್ರದುರ್ಗ ಬಿಜೆಪಿ‌ ಹಿರಿಯ ಶಾಸಕ ತಿಪ್ಪಾರೆಡ್ಡಿ, ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಿಎಂ ಬೊಮ್ಮಾಯಿ ಬಳಿ ನಿಯೋಗ ತೆರಳಿ, ಪ್ರದಾನಿ ನರೇಂದ್ರ ಮೋದಿಯವರಿಗೆ  ರಾಷ್ಟ್ರೀಯ ಯೋಜನೆಯನ್ನ ಹಿಂಪಡೆಯದಂತೆ ಮನವೊಲಿಸುವುದಾಗಿ ತಿಳಿಸಿದ್ದಾರೆ.

ಒಟ್ಟಾರೆ ಒಂದೂವರೆ ದಶಕ ಕಳೆದರೂ ರಾಜ್ಯದ ಮೊಟ್ಟ ಮೊದಲ ರಾಷ್ಟ್ರೀಯ ಯೋಜನೆ ಇನ್ನೂ ಪೂರ್ಣಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಇದರೆ ಬೆನ್ನಲ್ಲೇ ಆಂಧ್ರ ಸರ್ಕಾರದ ಕುತಂತ್ರ ಮಧ್ಯಕರ್ನಾಟಕದ ರೈತರ ನಿದ್ರೆ ಕೆಡಿಸಿದೆ. ಹೀಗಾಗಿ ಎರಡು ರಾಜ್ಯಗಳ ನಡುವೆ ಬಾರಿ ಸಂಘರ್ಷ ಎದುರಾಗುವ ಭೀತಿ ಶುರುವಾಗಿದ್ದೂ, ಇದು ಇನ್ಯಾವ ಹಂತಕ್ಕೆ ತಲುಪುವುದೋ ಕಾದು ನೋಡಬೇಕಿದೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more