Chitradurga: ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ, ನೀರು ಹಂಚಿಕೆ  ವಿಚಾರದಲ್ಲಿ ಆಂಧ್ರ ಕ್ಯಾತೆ

Chitradurga: ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ, ನೀರು ಹಂಚಿಕೆ ವಿಚಾರದಲ್ಲಿ ಆಂಧ್ರ ಕ್ಯಾತೆ

Published : Jan 05, 2022, 01:19 PM ISTUpdated : Jan 05, 2022, 01:47 PM IST

- ಭದ್ರಾ ಮೇಲ್ದಂಡೆ ಯೋಜನೆ ಮಧ್ಯಕರ್ನಾಟಕದ ಕನಸಿನ ಯೋಜನೆ 

- ರಾಷ್ಟ್ರೀಯ ಯೋಜನೆ ಘೋಷಣೆಯಾದ್ರೂ ಇನ್ನೂ ಬಾರದ ಅನುದಾನ

- ನೀರಿನ ಹಂಚಿಕೆ  ವಿಚಾರದಲ್ಲಿ ನೆರೆಯ ಆಂಧ್ರ ಪ್ರದೇಶದಿಂದ ಕ್ಯಾತೆ 
 

ಚಿತ್ರದುರ್ಗ (ಜ. 05): ಮಧ್ಯಕರ್ನಾಟಕದ ಕನಸಿನ ಯೋಜನೆ ಅಂದ್ರೆ ಅದು ಭದ್ರಾ ಮೇಲ್ದಂಡೆ ಯೋಜನೆ (Upper Bhadra Project) ಈ ಯೋಜನೆ ಜಾರಿಯಾದ್ರೆ ಬರದನಾಡು ಚಿತ್ರದುರ್ಗ, ದಾವಣಗೆರೆ, ತುಮಕೂರು ಹಾಗೂ ಚಿಕ್ಕಮಗಳೂರು  ಜಿಲ್ಲೆಗಳ ಜನರ ಬವಣೆ ನೀಗಲಿದೆ. ಹೀಗಾಗಿ ರಾಷ್ಟ್ರೀಯ ಯೋಜನೆ ಅಂತ ಘೋಷಣೆಯಾಗಿ ಒಂದು ತಿಂಗಳೇ ಕಳೆದು ಹೋಯ್ತು. ಆದರೆ ಕೇಂದ್ರ ಸರ್ಕಾರದಿಂದ ಈವರೆಗೆ ನಯಾಪೈಸಾ ಅನುದಾನ ಮಾತ್ರ ಬಿಡುಗಡೆ ಆಗಿಲ್ಲ. ಈ ನಡುವೆ ನೆರೆಯ ಆಂಧ್ರ ಪ್ರದೇಶ ಹೊಸ ಕ್ಯಾತೆಯೊಂದನ್ನು ಶುರುಮಾಡಿದೆ. 

ತುಂಗಾಭದ್ರಾ ನೀರಿನ ಹಂಚಿಕೆ ಹಾಗೂ ಹರಿಸುವಿಕೆ ವಿಚಾರದಲ್ಲಿ ಶಂಕೆ ವ್ಯಕ್ತಪಡಿಸಿದೆ. ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವ ಮುನ್ನ ಆಂಧ್ರಕ್ಕೆ ಆಗುವ ಅನ್ಯಾಯದ ಬಗ್ಗೆ ಸ್ಪಷ್ಟನೆ ನೀಡಿದ ಬಳಿಕ ಯೋಜನೆ ಮುಂದುವರೆಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಇದು  ಎರಡು ರಾಜ್ಯಗಳ ನಡುವೆ ಬಾರಿ ದ್ವೇಷಕ್ಕೆ ದಾರಿಯಾಗಿದ್ದೂ, ಕೋಟೆನಾಡಿನ ರೈತರು ಆಂಧ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

 ಇನ್ನು 2008ರಲ್ಲಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಘೋಷಣೆಯಾದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ಆರಂಭದಲ್ಲಿ ಕೇವಲ ಮೂರರಿಂದ ಐದು ಸಾವಿರ ಕೋಟಿ ವೆಚ್ಚದಲ್ಲಿ ಆರಂಭವಾಗಿತ್ತು. ಆದ್ರೆ ಇದೀಗ   ಹತ್ತು ಸಾವಿರ ಕೋಟಿಗೂ ಮಿಗಿಲಾಗಿ ವೆಚ್ಚ ಮೀರಿದ ಬೆನ್ನಲ್ಲೇ, ಕೇಂದ್ರ ಸರ್ಕಾರ ಇದನ್ನು ರಾಜ್ಯದ ಮೊಟ್ಟ ಮೊದಲ ರಾಷ್ಟ್ರೀಯ ಯೋಜನೆಯೆಂದು ಘೋಷಣೆ ಮಾಡಿದೆ. ಆದರೆ ನೆರೆಯ ಆಂಧ್ರಪ್ರದೇಶದ ಖ್ಯಾತೆಯಿಂದಾಗಿ, ಅವರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಗೆಜೆಟೆಡ್ ನೋಟಿಫಿಕೇಶನ್ ಪಾಸ್ ಮಾಡಲು ಹಿಂದೇಟು ಹಾಕುತ್ತಿರೋದು ವಿಪರ್ಯಾಸ ಎನಿಸಿದೆ. ಹೀಗಾಗಿ ಎಚ್ಚೆತ್ತಿರೋ‌ ಚಿತ್ರದುರ್ಗ ಬಿಜೆಪಿ‌ ಹಿರಿಯ ಶಾಸಕ ತಿಪ್ಪಾರೆಡ್ಡಿ, ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಿಎಂ ಬೊಮ್ಮಾಯಿ ಬಳಿ ನಿಯೋಗ ತೆರಳಿ, ಪ್ರದಾನಿ ನರೇಂದ್ರ ಮೋದಿಯವರಿಗೆ  ರಾಷ್ಟ್ರೀಯ ಯೋಜನೆಯನ್ನ ಹಿಂಪಡೆಯದಂತೆ ಮನವೊಲಿಸುವುದಾಗಿ ತಿಳಿಸಿದ್ದಾರೆ.

ಒಟ್ಟಾರೆ ಒಂದೂವರೆ ದಶಕ ಕಳೆದರೂ ರಾಜ್ಯದ ಮೊಟ್ಟ ಮೊದಲ ರಾಷ್ಟ್ರೀಯ ಯೋಜನೆ ಇನ್ನೂ ಪೂರ್ಣಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಇದರೆ ಬೆನ್ನಲ್ಲೇ ಆಂಧ್ರ ಸರ್ಕಾರದ ಕುತಂತ್ರ ಮಧ್ಯಕರ್ನಾಟಕದ ರೈತರ ನಿದ್ರೆ ಕೆಡಿಸಿದೆ. ಹೀಗಾಗಿ ಎರಡು ರಾಜ್ಯಗಳ ನಡುವೆ ಬಾರಿ ಸಂಘರ್ಷ ಎದುರಾಗುವ ಭೀತಿ ಶುರುವಾಗಿದ್ದೂ, ಇದು ಇನ್ಯಾವ ಹಂತಕ್ಕೆ ತಲುಪುವುದೋ ಕಾದು ನೋಡಬೇಕಿದೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more