ಅಂಗನವಾಡಿಗಳಿಗೆ ಅನುದಾನ ಬಿಡುಗಡೆಯಾಗಿಲ್ಲ..ಕಟ್ಟಡ ಖಾಲಿ ಮಾಡುವಂತೆ ಕಾರ್ಯಕರ್ತೆಯರ ಮೇಲೆ ಒತ್ತಡ

ಅಂಗನವಾಡಿಗಳಿಗೆ ಅನುದಾನ ಬಿಡುಗಡೆಯಾಗಿಲ್ಲ..ಕಟ್ಟಡ ಖಾಲಿ ಮಾಡುವಂತೆ ಕಾರ್ಯಕರ್ತೆಯರ ಮೇಲೆ ಒತ್ತಡ

Published : Nov 27, 2023, 11:18 AM IST

ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 7 ತಿಂಗಳುಗಳೇ ಕಳೆದಿದೆ. ಆದ್ರೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತೋರಿದ ಮುತುವರ್ಜಿ ಬೇರೆ ಇಲಾಖೆಗಳ ಮೇಲೆ ಸರ್ಕಾರ ತೋರುತ್ತಿಲ್ವಾ ಅನ್ನೋ ಚರ್ಚೆಗಳು ಶುರುವಾಗಿವೆ. ಯಾಕಂದ್ರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ತಾಪ್ತಿಗೆ ಬರುವ ಅಂಗನವಾಡಿಗಳ ಬಾಡಿಗೆ ವರ್ಷದಿಂದ ಬಾಕಿಯಿರಿಸಿಕೊಂಡಿದ್ದು, ಸರ್ಕಾರದ ಮೇಲೆ ಇಂಥದ್ದೊಂದು ಆರೋಪ ಮಾಡುವಂತೆ ಆಗಿದೆ.
 

ಪುಟ್ಟ ಪುಟ್ಟ ಮಕ್ಕಳು.. ಬಾಡಿಗೆ ಕಟ್ಟದಲ್ಲೆ ಪಾಠ, ಆಟ.. ಆದ್ರೆ, ಈ ಬಾಡಿಗೆ ಕಟ್ಟಡಗಳಿಗೆ ಸರ್ಕಾರ ಬಾಡಿಗೆ ಕದ ಕಾರಣ ಅಂಗನವಾಡಿ ಕಾರ್ಯಕರ್ತೆಯರು ಕಣ್ಣೀರಿಡುವಂತೆ ಆಗಿದೆ. ಹೌದು ಉತ್ತರಕನ್ನಡ (Uttara Kannada)ಜಿಲ್ಲೆಯಲ್ಲಿ ಅಂಗನವಾಡಿ(Anganawadis) ಕಾರ್ಯಕರ್ತೆಯರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ತಮಗೆ ಬರುವ ಅಲ್ಪ ಸಂಬಳವನ್ನೂ ಅಂಗನವಾಡಿಯ ಬಾಡಿಗೆಗೆ(Rent) ನೀಡುವ ದುರ್ಗತಿ ಅಂಗನವಾಡಿ ಕಾರ್ಯಕರ್ತೆಯರದ್ದಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ 2,782 ಅಂಗನವಾಡಿಗಳಿವೆ. ಇದರಲ್ಲಿ 322 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಪ್ರತಿ ಅಂಗನವಾಡಿ ಕಟ್ಟಡಕ್ಕೆ 4 ರಿಂದ 5 ಸಾವಿರ ರೂ. ವರೆಗೆ ಬಾಡಿಗೆ ನಿಗದಿ ಮಾಡಲಾಗಿದೆ. ಆದ್ರೆ ಇವುಗಳ ಬಾಡಿಗೆ ಪಾವತಿಗೆ ಕಳೆದ 1 ವರ್ಷದಿಂದ ಅನುದಾನದ ಬಿಡುಗಡೆಯಾಗಿಲ್ಲ. ಕಟ್ಟಡದ ಮಾಲೀಕರಿಗೆ ಬಾಡಿಗೆ ಸಂದಾಯವಾಗಿಲ್ಲ. ಹೀಗಾಗಿ ಕಟ್ಟಡ ಖಾಲಿ ಮಾಡುವಂತೆ ಮಾಲೀಕರು ಕಾರ್ಯಕರ್ತೆಯರ ಮೇಲೆ ಒತ್ತಡ ಹೇರುತ್ತಿದ್ದಾರಂತೆ. 2,782 ಅಂಗನವಾಡಿಗಳ ಪೈಕಿ ಬಾಡಿಗೆ ಕಟ್ಟಲು ಸಾಧ್ಯವಾಗದೇ, 7 ಅಂಗನವಾಡಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರವಾರದ ಹಬ್ಬುವಾಡ, ಸೋನಾರವಾಡ, ಹರಿದೇವ ನಗರ, ಕೆ.ಎಚ್.ಬಿ ಕಾಲೋನಿ ಸೇರಿದಂತೆ ಹಲವು ಅಂಗನವಾಡಿಗಳಲ್ಲಿ 1 ವರ್ಷದಿಂದ ಬಾಡಿಗೆ ಹಣ ಸಂದಾಯವಾಗಿಲ್ಲ. ಕೆಲವು ಅಂಗನವಾಡಿಗಳಲ್ಲಂತೂ ಕಾರ್ಯಕರ್ತೆಯರೇ ತಮ್ಮ ಸಂಬಳದಲ್ಲಿ ಬಾಡಿಗೆ ಕಟ್ಟುತ್ತಿದ್ದಾರೆ. ಅಧಿಕಾರಿಗಳು ಹೇಳುವ ಪ್ರಕಾರ ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ ಈ ಸಮಸ್ಯೆ ಎದುರಾಗಿದೆ ಎನ್ನುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಜನರನ್ನು ಆಕರ್ಷಿಸುತ್ತಿದೆ ವಿನೂತನ ಶಿಲೋದ್ಯಾನ..ಜಿಲ್ಲಾಡಳಿತದಿಂದ ವೀರಗಲ್ಲುಗಳ ರಕ್ಷಣಾ ಕಾರ್ಯ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more