ಅಂಗನವಾಡಿಗಳಿಗೆ ಅನುದಾನ ಬಿಡುಗಡೆಯಾಗಿಲ್ಲ..ಕಟ್ಟಡ ಖಾಲಿ ಮಾಡುವಂತೆ ಕಾರ್ಯಕರ್ತೆಯರ ಮೇಲೆ ಒತ್ತಡ

ಅಂಗನವಾಡಿಗಳಿಗೆ ಅನುದಾನ ಬಿಡುಗಡೆಯಾಗಿಲ್ಲ..ಕಟ್ಟಡ ಖಾಲಿ ಮಾಡುವಂತೆ ಕಾರ್ಯಕರ್ತೆಯರ ಮೇಲೆ ಒತ್ತಡ

Published : Nov 27, 2023, 11:18 AM IST

ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 7 ತಿಂಗಳುಗಳೇ ಕಳೆದಿದೆ. ಆದ್ರೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತೋರಿದ ಮುತುವರ್ಜಿ ಬೇರೆ ಇಲಾಖೆಗಳ ಮೇಲೆ ಸರ್ಕಾರ ತೋರುತ್ತಿಲ್ವಾ ಅನ್ನೋ ಚರ್ಚೆಗಳು ಶುರುವಾಗಿವೆ. ಯಾಕಂದ್ರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ತಾಪ್ತಿಗೆ ಬರುವ ಅಂಗನವಾಡಿಗಳ ಬಾಡಿಗೆ ವರ್ಷದಿಂದ ಬಾಕಿಯಿರಿಸಿಕೊಂಡಿದ್ದು, ಸರ್ಕಾರದ ಮೇಲೆ ಇಂಥದ್ದೊಂದು ಆರೋಪ ಮಾಡುವಂತೆ ಆಗಿದೆ.
 

ಪುಟ್ಟ ಪುಟ್ಟ ಮಕ್ಕಳು.. ಬಾಡಿಗೆ ಕಟ್ಟದಲ್ಲೆ ಪಾಠ, ಆಟ.. ಆದ್ರೆ, ಈ ಬಾಡಿಗೆ ಕಟ್ಟಡಗಳಿಗೆ ಸರ್ಕಾರ ಬಾಡಿಗೆ ಕದ ಕಾರಣ ಅಂಗನವಾಡಿ ಕಾರ್ಯಕರ್ತೆಯರು ಕಣ್ಣೀರಿಡುವಂತೆ ಆಗಿದೆ. ಹೌದು ಉತ್ತರಕನ್ನಡ (Uttara Kannada)ಜಿಲ್ಲೆಯಲ್ಲಿ ಅಂಗನವಾಡಿ(Anganawadis) ಕಾರ್ಯಕರ್ತೆಯರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ತಮಗೆ ಬರುವ ಅಲ್ಪ ಸಂಬಳವನ್ನೂ ಅಂಗನವಾಡಿಯ ಬಾಡಿಗೆಗೆ(Rent) ನೀಡುವ ದುರ್ಗತಿ ಅಂಗನವಾಡಿ ಕಾರ್ಯಕರ್ತೆಯರದ್ದಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ 2,782 ಅಂಗನವಾಡಿಗಳಿವೆ. ಇದರಲ್ಲಿ 322 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಪ್ರತಿ ಅಂಗನವಾಡಿ ಕಟ್ಟಡಕ್ಕೆ 4 ರಿಂದ 5 ಸಾವಿರ ರೂ. ವರೆಗೆ ಬಾಡಿಗೆ ನಿಗದಿ ಮಾಡಲಾಗಿದೆ. ಆದ್ರೆ ಇವುಗಳ ಬಾಡಿಗೆ ಪಾವತಿಗೆ ಕಳೆದ 1 ವರ್ಷದಿಂದ ಅನುದಾನದ ಬಿಡುಗಡೆಯಾಗಿಲ್ಲ. ಕಟ್ಟಡದ ಮಾಲೀಕರಿಗೆ ಬಾಡಿಗೆ ಸಂದಾಯವಾಗಿಲ್ಲ. ಹೀಗಾಗಿ ಕಟ್ಟಡ ಖಾಲಿ ಮಾಡುವಂತೆ ಮಾಲೀಕರು ಕಾರ್ಯಕರ್ತೆಯರ ಮೇಲೆ ಒತ್ತಡ ಹೇರುತ್ತಿದ್ದಾರಂತೆ. 2,782 ಅಂಗನವಾಡಿಗಳ ಪೈಕಿ ಬಾಡಿಗೆ ಕಟ್ಟಲು ಸಾಧ್ಯವಾಗದೇ, 7 ಅಂಗನವಾಡಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರವಾರದ ಹಬ್ಬುವಾಡ, ಸೋನಾರವಾಡ, ಹರಿದೇವ ನಗರ, ಕೆ.ಎಚ್.ಬಿ ಕಾಲೋನಿ ಸೇರಿದಂತೆ ಹಲವು ಅಂಗನವಾಡಿಗಳಲ್ಲಿ 1 ವರ್ಷದಿಂದ ಬಾಡಿಗೆ ಹಣ ಸಂದಾಯವಾಗಿಲ್ಲ. ಕೆಲವು ಅಂಗನವಾಡಿಗಳಲ್ಲಂತೂ ಕಾರ್ಯಕರ್ತೆಯರೇ ತಮ್ಮ ಸಂಬಳದಲ್ಲಿ ಬಾಡಿಗೆ ಕಟ್ಟುತ್ತಿದ್ದಾರೆ. ಅಧಿಕಾರಿಗಳು ಹೇಳುವ ಪ್ರಕಾರ ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ ಈ ಸಮಸ್ಯೆ ಎದುರಾಗಿದೆ ಎನ್ನುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಜನರನ್ನು ಆಕರ್ಷಿಸುತ್ತಿದೆ ವಿನೂತನ ಶಿಲೋದ್ಯಾನ..ಜಿಲ್ಲಾಡಳಿತದಿಂದ ವೀರಗಲ್ಲುಗಳ ರಕ್ಷಣಾ ಕಾರ್ಯ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more