ಈ ಸುದ್ದಿ ವಿಧಾನಸೌಧದಲ್ಲಿ ಸೌಂಡ್‌ ಮಾಡಿತ್ತು!: ಅಂಗನವಾಡಿ ಕಾರ್ಯಕರ್ತೆಯರು ಈಗ ಫುಲ್‌ ಖುಷ್‌..!

ಈ ಸುದ್ದಿ ವಿಧಾನಸೌಧದಲ್ಲಿ ಸೌಂಡ್‌ ಮಾಡಿತ್ತು!: ಅಂಗನವಾಡಿ ಕಾರ್ಯಕರ್ತೆಯರು ಈಗ ಫುಲ್‌ ಖುಷ್‌..!

Published : Aug 04, 2023, 03:23 PM IST

ಬೆಳಗಾವಿಯ ಅಂಗನವಾಡಿ ಕಾರ್ಯಕರ್ತೆಯರ ಚಿನ್ನಾಭರಣಗಳು ಈಗ ಅವರ ಕೈ ಸೇರಿವೆ. ಇದು ನಮ್ಮ ಬಿಗ್‌ 3ಯ ಇಂಪ್ಯಾಕ್ಟ್‌ ಆಗಿದೆ.
 

ಹೆಚ್ಚು ಕಮ್ಮಿ ಕಳೆದ 20 ತಿಂಗಳಿಂದ ಸರ್ಕಾರ ಅಂಗನವಾಡಿಗೆ(Anganwadi)ಬಾಡಿಗೆ ಹಣ ಬಿಡುಗಡೆ ಮಾಡಿರಲಿಲ್ಲ. ಅವರೆಲ್ಲ ಆ ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಮಾಂಗಲ್ಯವನ್ನ ಅಡವಿಟ್ಟಿದ್ದರು. ತಾಳಿ, ಇತರೆ ಆಭರಣ(ornaments) ಅಡವಿಟ್ಟು ಬಾಡಿಗೆ ಕಟ್ಟುತ್ತಿದ್ದರು. ಈ ಸುದ್ದಿ ಇಡೀ ರಾಜ್ಯವೇ ನಾಚಿಕೆ ಪಡೋ ಸುದ್ದಿ ಆಗಿತ್ತು. ಕುಂದಾನಗರಿ ಬೆಳಗಾವಿ(Belagavi) ಜಿಲ್ಲೆಯಲ್ಲಿ ಅದೆಷ್ಟೋ ಅಂಗನವಾಡಿಗಳು ಇದ್ದಾವೆ. ಆದ್ರೆ, ಬೆಳಗಾವಿ ನಗರದ ಕೆಲವು ಅಂಗನ ವಾಡಿಯ ಬಾಡಿಗೆ ಕಟ್ಟದೇ ಕಟ್ಟಡ ಖಾಲಿ ಮಾಡಿ ಅಂತ ಮಾಲೀಕರು ಪೀಡಿಸುತ್ತಿದ್ರು. ಹೀಗಾಗಿ ಭವಿಷ್ಯದ ಮಕ್ಕಳ ಹಿತ ದೃಷ್ಟಿಯಿಂದ ಮಾತೃ ಹೃದಯ ಮಿಡಿದು ಕೆಲವು ಕಾರ್ಯಕರ್ತೆಯರು ತಮ್ಮ ಚಿನ್ನಾಭರಣ ಅಡವಿಟ್ಟು ಬಾಡಿಗೆ ಕಟ್ಟುತ್ತಿದ್ರು.

ಆದ್ರೆ ಇವರ ನೆರವಿಗೆ ಯಾರೂ ನಿಲ್ಲಲಿಲ್ಲ. ಬಿಗ್3ಯಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಇಡೀ ಜಿಲ್ಲಾಡಳಿತ ಅಲರ್ಟ್ ಆಯ್ತು. ಖುದ್ದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅಖಾಡಕ್ಕೆ ಧುಮುಕಿದ್ರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕ ನಾಗರಾಜ್ಗೆ ಕ್ಲಾಸ್ ತೆಗೆದುಕೊಂಡ್ರು. ತಕ್ಷಣವೇ ಅಂಗನವಾಡಿಗೆ ತೆರಳಿ ಟೀಚರ್ಸ್‌ಗಳಿಗೆ ಧೈರ್ಯ ತುಂಬಿ ಸಮಸ್ಯೆ ಕ್ಲೀಯರ್ ಮಾಡಲು ತಿಳಿಸಿದ್ರು. ಅದಾಗಲೇ ಈ ಸುದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಅವರ ಗಮನಕ್ಕೂ ಬಂದಿತ್ತು. ಶಭಾನಾ ಅವ್ರು 22 ಸಾವಿರಕ್ಕೆ ತಮ್ಮ ಮಾಂಗಲ್ಯ ಸರವನ್ನ ಅಡವಿಟ್ಟಿದ್ದರು. ಸಿಡಿಪಿಓ ಲಕ್ಷ್ಮಣ ಭಜಂತ್ರಿ ವೈಯಕ್ತಿಕ 22 ಸಾವಿರ ಹಣ ನೀಡಿದ್ದಾರೆ. ಸದ್ಯ ಶಭಾನಾ ಅವರ ಮಾಂಗಲ್ಯಸರ ಅವರ ಕೈ ಸೇರಿದೆ. ಇನ್ನೂ ಉಳಿದ ಕಾರ್ಯಕರ್ತೆಯರು ಅಡವಿಟ್ಟಿರುವ ಚಿನ್ನಾಭರಣವನ್ನು ಹಂತ ಹಂತವಾಗಿ ಬಿಡಿಸಿಕೊಡಲಾಗುತ್ತೆ.

ಇದನ್ನೂ ವೀಕ್ಷಿಸಿ:  ಹಳೇ ಸಿಟ್ಟಿಗೆ ಸೇಡು ತೀರಿಸಿಕೊಂಡನಾ ವಾಟರ್‌ಮ್ಯಾನ್‌ ?: ಕಲುಷಿತ ನೀರು ಸೇವಿಸಿ 130 ಮಂದಿ ಅಸ್ವಸ್ಥ !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more