ಈ ಸುದ್ದಿ ವಿಧಾನಸೌಧದಲ್ಲಿ ಸೌಂಡ್‌ ಮಾಡಿತ್ತು!: ಅಂಗನವಾಡಿ ಕಾರ್ಯಕರ್ತೆಯರು ಈಗ ಫುಲ್‌ ಖುಷ್‌..!

ಈ ಸುದ್ದಿ ವಿಧಾನಸೌಧದಲ್ಲಿ ಸೌಂಡ್‌ ಮಾಡಿತ್ತು!: ಅಂಗನವಾಡಿ ಕಾರ್ಯಕರ್ತೆಯರು ಈಗ ಫುಲ್‌ ಖುಷ್‌..!

Published : Aug 04, 2023, 03:23 PM IST

ಬೆಳಗಾವಿಯ ಅಂಗನವಾಡಿ ಕಾರ್ಯಕರ್ತೆಯರ ಚಿನ್ನಾಭರಣಗಳು ಈಗ ಅವರ ಕೈ ಸೇರಿವೆ. ಇದು ನಮ್ಮ ಬಿಗ್‌ 3ಯ ಇಂಪ್ಯಾಕ್ಟ್‌ ಆಗಿದೆ.
 

ಹೆಚ್ಚು ಕಮ್ಮಿ ಕಳೆದ 20 ತಿಂಗಳಿಂದ ಸರ್ಕಾರ ಅಂಗನವಾಡಿಗೆ(Anganwadi)ಬಾಡಿಗೆ ಹಣ ಬಿಡುಗಡೆ ಮಾಡಿರಲಿಲ್ಲ. ಅವರೆಲ್ಲ ಆ ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಮಾಂಗಲ್ಯವನ್ನ ಅಡವಿಟ್ಟಿದ್ದರು. ತಾಳಿ, ಇತರೆ ಆಭರಣ(ornaments) ಅಡವಿಟ್ಟು ಬಾಡಿಗೆ ಕಟ್ಟುತ್ತಿದ್ದರು. ಈ ಸುದ್ದಿ ಇಡೀ ರಾಜ್ಯವೇ ನಾಚಿಕೆ ಪಡೋ ಸುದ್ದಿ ಆಗಿತ್ತು. ಕುಂದಾನಗರಿ ಬೆಳಗಾವಿ(Belagavi) ಜಿಲ್ಲೆಯಲ್ಲಿ ಅದೆಷ್ಟೋ ಅಂಗನವಾಡಿಗಳು ಇದ್ದಾವೆ. ಆದ್ರೆ, ಬೆಳಗಾವಿ ನಗರದ ಕೆಲವು ಅಂಗನ ವಾಡಿಯ ಬಾಡಿಗೆ ಕಟ್ಟದೇ ಕಟ್ಟಡ ಖಾಲಿ ಮಾಡಿ ಅಂತ ಮಾಲೀಕರು ಪೀಡಿಸುತ್ತಿದ್ರು. ಹೀಗಾಗಿ ಭವಿಷ್ಯದ ಮಕ್ಕಳ ಹಿತ ದೃಷ್ಟಿಯಿಂದ ಮಾತೃ ಹೃದಯ ಮಿಡಿದು ಕೆಲವು ಕಾರ್ಯಕರ್ತೆಯರು ತಮ್ಮ ಚಿನ್ನಾಭರಣ ಅಡವಿಟ್ಟು ಬಾಡಿಗೆ ಕಟ್ಟುತ್ತಿದ್ರು.

ಆದ್ರೆ ಇವರ ನೆರವಿಗೆ ಯಾರೂ ನಿಲ್ಲಲಿಲ್ಲ. ಬಿಗ್3ಯಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಇಡೀ ಜಿಲ್ಲಾಡಳಿತ ಅಲರ್ಟ್ ಆಯ್ತು. ಖುದ್ದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅಖಾಡಕ್ಕೆ ಧುಮುಕಿದ್ರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕ ನಾಗರಾಜ್ಗೆ ಕ್ಲಾಸ್ ತೆಗೆದುಕೊಂಡ್ರು. ತಕ್ಷಣವೇ ಅಂಗನವಾಡಿಗೆ ತೆರಳಿ ಟೀಚರ್ಸ್‌ಗಳಿಗೆ ಧೈರ್ಯ ತುಂಬಿ ಸಮಸ್ಯೆ ಕ್ಲೀಯರ್ ಮಾಡಲು ತಿಳಿಸಿದ್ರು. ಅದಾಗಲೇ ಈ ಸುದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಅವರ ಗಮನಕ್ಕೂ ಬಂದಿತ್ತು. ಶಭಾನಾ ಅವ್ರು 22 ಸಾವಿರಕ್ಕೆ ತಮ್ಮ ಮಾಂಗಲ್ಯ ಸರವನ್ನ ಅಡವಿಟ್ಟಿದ್ದರು. ಸಿಡಿಪಿಓ ಲಕ್ಷ್ಮಣ ಭಜಂತ್ರಿ ವೈಯಕ್ತಿಕ 22 ಸಾವಿರ ಹಣ ನೀಡಿದ್ದಾರೆ. ಸದ್ಯ ಶಭಾನಾ ಅವರ ಮಾಂಗಲ್ಯಸರ ಅವರ ಕೈ ಸೇರಿದೆ. ಇನ್ನೂ ಉಳಿದ ಕಾರ್ಯಕರ್ತೆಯರು ಅಡವಿಟ್ಟಿರುವ ಚಿನ್ನಾಭರಣವನ್ನು ಹಂತ ಹಂತವಾಗಿ ಬಿಡಿಸಿಕೊಡಲಾಗುತ್ತೆ.

ಇದನ್ನೂ ವೀಕ್ಷಿಸಿ:  ಹಳೇ ಸಿಟ್ಟಿಗೆ ಸೇಡು ತೀರಿಸಿಕೊಂಡನಾ ವಾಟರ್‌ಮ್ಯಾನ್‌ ?: ಕಲುಷಿತ ನೀರು ಸೇವಿಸಿ 130 ಮಂದಿ ಅಸ್ವಸ್ಥ !

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more