ನಾಗರಿಕ ವಿಮಾನ ನಿಲ್ದಾಣಕ್ಕೆ ಸಿದ್ದತೆ: ಗೋಮಾಳ ಜಾಗದಲ್ಲಿ ಪುನರ್ವಸತಿಗೆ ವಿರೋಧ

ನಾಗರಿಕ ವಿಮಾನ ನಿಲ್ದಾಣಕ್ಕೆ ಸಿದ್ದತೆ: ಗೋಮಾಳ ಜಾಗದಲ್ಲಿ ಪುನರ್ವಸತಿಗೆ ವಿರೋಧ

Suvarna News   | Asianet News
Published : Oct 12, 2021, 01:21 PM ISTUpdated : Oct 12, 2021, 02:25 PM IST

ಸೀಬರ್ಡ್ ಎರಡನೇ ಹಂತದ ಕಾಮಗಾರಿ ವೇಳೆ ಅಂಕೋಲಾದ ತಾಲ್ಲೂಕಿನ ಅಲಗೇರಿಯಲ್ಲಿ ನಾಗರಿಕ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸಿದ್ದತೆ ನಡೆಸಲಾಗಿದೆ. ಈ ಸಂಬಂಧ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆಯೂ ಪ್ರಾರಂಭವಾಗಿದೆ. 

ಕಾರವಾರ (ಅ. 12): ಸೀಬರ್ಡ್ ಎರಡನೇ ಹಂತದ ಕಾಮಗಾರಿ ವೇಳೆ ಅಂಕೋಲಾದ ತಾಲ್ಲೂಕಿನ ಅಲಗೇರಿಯಲ್ಲಿ ನಾಗರಿಕ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸಿದ್ದತೆ ನಡೆಸಲಾಗಿದೆ. ಈ ಸಂಬಂಧ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆಯೂ ಪ್ರಾರಂಭವಾಗಿದ್ದು, ಸ್ಥಳೀಯರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ತಾಲ್ಲೂಕಿನ ಬಾಸ್ಗೋಡು ಗ್ರಾಮದ ನಡುಬೇಣದಲ್ಲಿ ಜಾಗ ಗುರುತಿಸಲಾಗಿದೆ. 

ಆದರೆ, ಇದು ಸ್ಥಳೀಯರ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಪ್ರಸ್ತುತ, ಗುರುತಿಸಿರುವ ಜಾಗವು ಗೋಮಾಳವಾಗಿದ್ದು, ನಿತ್ಯ ಸಾವಿರಾರು ಗೋವುಗಳು ಮೇಯುವ ಸ್ಥಳವಾಗಿದೆ. ಅಲ್ಲದೇ, ಸ್ವಾತಂತ್ರ್ಯ ಚಳುವಳಿ ವೇಳೆ ಕ್ವಿಟ್ ಇಂಡಿಯಾ ಮತ್ತು ಉಪ್ಪಿನ ಸತ್ಯಾಗ್ರಹ ಚಳುವಳಿಯ ಬಗ್ಗೆ ಸಭೆಗಳು ನಡೆದು ಸ್ಥಳೀಯರಿಗೆ ಸಂಗ್ರಾಮದ ಕಿಚ್ಚು ಹೊತ್ತಿಸಿದ ಪ್ರದೇಶವಾಗಿದೆ. ಇಂತಹ ಪ್ರದೇಶವನ್ನು ವಿಮಾನ ನಿಲ್ದಾಣದ ನಿರಾಶ್ರಿತರಿಗೆ ವಸತಿ ಕಲ್ಪಿಸಲು ಮುಂದಾಗಿರುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿ ತಮಟೆ ವಾದ್ಯದ ಮೂಲಕ ಮೈದಾನದ ಸುತ್ತ ಮೆರವಣಿಗೆ ನಡೆಸಿ ಯಾವುದೇ ಕಾರಣಕ್ಕೂ ಈ ಪ್ರದೇಶವನ್ನು ನೀಡುವುದಿಲ್ಲ ಎಚ್ಚರಿಕೆ ರವಾನಿಸಿದ್ದಾರೆ.
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!