ಅನ್ನಭಾಗ್ಯದ 6 ಸಾವಿರ ಕ್ವಿಂಟಾಲ್ ಅಕ್ಕಿಯೇ ಮಾಯ..! 6 ತಿಂಗಳಲ್ಲಿ ಎರಡನೇ ಬಾರಿ ನಡೆಯಿತು ಕಳ್ಳತನ..!

ಅನ್ನಭಾಗ್ಯದ 6 ಸಾವಿರ ಕ್ವಿಂಟಾಲ್ ಅಕ್ಕಿಯೇ ಮಾಯ..! 6 ತಿಂಗಳಲ್ಲಿ ಎರಡನೇ ಬಾರಿ ನಡೆಯಿತು ಕಳ್ಳತನ..!

Published : Nov 28, 2023, 10:42 AM IST

2 ಕೋಟಿ 66 ಲಕ್ಷ ರೂ. ಮೌಲ್ಯದ 6 ಸಾವಿರ ಕ್ವಿಂಟಾಲ್ ಅಕ್ಕಿ ಕದ್ದಿದಾದ್ರು ಯಾರು..? ಬೇಲಿಯೇ ಎದ್ದು ಹೋಲ ಮೆಯ್ದಿಯಾ ಎಂಬ ಅನುಮಾನ ಕಾಡ್ತಿದೆ. ಅಕ್ರಮ ಪತ್ತೆ ಹಚ್ಚಲು ತನಿಖಾ ತಂಡದ ವರದಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.  

ಬಡವರು ಹಸಿವು ನೀಗಿಸಬೇಕಿದ್ದ ಅಕ್ಕಿಗೆ ಕನ್ನ ಬಿದ್ದಿದೆ.. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರ ಸ್ವಕ್ಷೇತ್ರದಲ್ಲಿಯೇ ಎರಡನೇ ಬಾರಿ ಅನ್ನಭಾಗ್ಯದ ಪಡಿತರ ಅಕ್ಕಿಯೇ(Ration rice) ನಾಪತ್ತೆಯಾಗಿವೆ. ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಗೋದಾಮಿನಲ್ಲಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ವ್ಯತ್ಯಾಸ ಕಂಡು ಬಂದಿದೆ. ಶಹಾಪುರ ಹಾಗೂ ವಡಗೇರಾ ತಾಲೂಕಿನ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದ(Annabhagya) ಅಕ್ಕಿಯನ್ನು ನೀಡಲು ಸಂಗ್ರಹಿಸಲಾಗಿತ್ತು. ಆದ್ರೆ ಗೋದಾಮಿನಲ್ಲಿ ಇರಬೇಕಿದ್ದ 6,077 ಕ್ಚಿಂಟಾಲ್ ಅಕ್ಕಿ ವ್ಯತ್ಯಾಸವಾಗಿದ್ದು, ಸುಮಾರು 2 ಕೋಟಿ 66 ಲಕ್ಷ ರೂ. ಮೌಲ್ಯದ ಅಕ್ಕಿ ಮಾಯವಾಗಿದೆ. ಜೂನ್ 2- 2023 ರಿಂದ ನವೆಂಬರ್ 23 ರ ಮಧ್ಯದ ಅವಧಿಯಲ್ಲಿ ಪಡಿತರ ಗೋಲ್ಮಾಲ್ ನಡೆದಿದೆ. ಈ ಬಗ್ಗೆ ಅಕ್ಕಿ ಕಳ್ಳತನ ಬಗ್ಗೆ  ಜಿಲ್ಲಾ ಆಹಾರ ನಾಗರಿಕ ಸರಬರಾಜು ವ್ಯವಹಾರಗಳ ಉಪನಿರ್ದೇಶಕ ಭೀಮರಾಯ  ಶಹಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಯಾದಗಿರಿ(Yadgir) ನ್ಯಾಯಬೆಲೆ ಅಂಗಡಿಗೆ ಸಾಗಾಟ ಮಾಡಬೇಕಾದ ಅಕ್ಕಿ ಅಧಿಕಾರಿಗಳೇ ಸಾಗಾಟ ಮಾಡಿದ್ರಾ ಎಂಬ ಅನುಮಾನ ಶುರುವಾಗಿದೆ. ಗೋದಾಮಿನ ಈಗಿನ ಮುಖ್ಯ ಕಾರ್ಯನಿರ್ವಾಹಕ ಶಿವಪ್ಪ ಹಾಗೂ ಈ ಹಿಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜ ಅವರು ತಮ್ಮ ಲಾಭಕ್ಕಾಗಿ ಸಾಗಾಟ ಮಾಡಿದ್ರಾ ಎಂಬ ಅನುಮಾನವಿದೆ. ಈ ಬಗ್ಗೆ ಶಹಾಪುರ ಠಾಣೆಯಲ್ಲಿ ಶಿವಪ್ಪ ಹಾಗೂ ಶಿವರಾಜ ಸಂಘದ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಾಗಿದೆ. ಈ ಪ್ರಕರಣದಲ್ಲಿ ಪ್ರಭಾವಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಪಡಿತರ ಅಕ್ಕಿ ಸಂಗ್ರಹದ ಗೋದಾಮಿಗೆ ಕಾಂಪೌಡ್ ನಿರ್ಮಿಸಿಲ್ಲ..ಪಡಿತರ ಅಕ್ಕಿ ಸಾಗಾಟ ಮಾಡುವ ಲಾರಿಗಳಿಗೆ ಜಿಪಿಎಸ್ ಸಹ ಅಳವಡಿಕೆಯಾಗಿಲ್ಲ.. ಜತೆಗೆ ಸಿಸಿ ಕ್ಯಾಮರಾ ಅಳವಡಿಕೆ ಮಾಡದಿರುವುದೇ ಕಳ್ಳತನಕ್ಕೆ ದಾರಿ ಮಾಡಿ ಕೊಟ್ಟಂತಾಗಿದೆ. ಉದ್ದೇಶ ಪೂರ್ವಕವಾಗಿಯೇ ಸಿಸಿಟಿವಿ,  ಲಾರಿಗಳಿಗೆ ಜಿಪಿಎಸ್ ಅಳವಡಿಸಿಲ್ವಾ ಎಂಬ ಅನುಮಾನವೂ ದಟ್ಟವಾಗಿದೆ.. ಆದ್ರಿಂದ  ಅಕ್ರಮ ಪತ್ತೆಗೆ ಜಿಲ್ಲಾ ಪಂಚಾಯತ್ ಸಿಇಓ ಗರೀಮಾ ಫನ್ವಾರ್ ನೇತೃತ್ವದಲ್ಲಿ  ತಂಡ ರಚಿಸಲಾಗಿದೆ. ಮೂರು ದಿನದೊಳಗೆ ವರದಿ ನೀಡಲು ಡಿಸಿ ಸುಶೀಲಾ.ಬಿ ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕೆರೆಗಳ ಒಡಲಿಗೆ ಕನ್ನಹಾಕಿದ ಮಾಫಿಯಾ ಗ್ಯಾಂಗ್..! ಧನದಾಹಿಗಳಿಂದ ರೈತರ ಜೀವನಾಡಿ ಕಗ್ಗೊಲೆ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more