ಅನ್ನಭಾಗ್ಯದ 6 ಸಾವಿರ ಕ್ವಿಂಟಾಲ್ ಅಕ್ಕಿಯೇ ಮಾಯ..! 6 ತಿಂಗಳಲ್ಲಿ ಎರಡನೇ ಬಾರಿ ನಡೆಯಿತು ಕಳ್ಳತನ..!

ಅನ್ನಭಾಗ್ಯದ 6 ಸಾವಿರ ಕ್ವಿಂಟಾಲ್ ಅಕ್ಕಿಯೇ ಮಾಯ..! 6 ತಿಂಗಳಲ್ಲಿ ಎರಡನೇ ಬಾರಿ ನಡೆಯಿತು ಕಳ್ಳತನ..!

Published : Nov 28, 2023, 10:42 AM IST

2 ಕೋಟಿ 66 ಲಕ್ಷ ರೂ. ಮೌಲ್ಯದ 6 ಸಾವಿರ ಕ್ವಿಂಟಾಲ್ ಅಕ್ಕಿ ಕದ್ದಿದಾದ್ರು ಯಾರು..? ಬೇಲಿಯೇ ಎದ್ದು ಹೋಲ ಮೆಯ್ದಿಯಾ ಎಂಬ ಅನುಮಾನ ಕಾಡ್ತಿದೆ. ಅಕ್ರಮ ಪತ್ತೆ ಹಚ್ಚಲು ತನಿಖಾ ತಂಡದ ವರದಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.  

ಬಡವರು ಹಸಿವು ನೀಗಿಸಬೇಕಿದ್ದ ಅಕ್ಕಿಗೆ ಕನ್ನ ಬಿದ್ದಿದೆ.. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರ ಸ್ವಕ್ಷೇತ್ರದಲ್ಲಿಯೇ ಎರಡನೇ ಬಾರಿ ಅನ್ನಭಾಗ್ಯದ ಪಡಿತರ ಅಕ್ಕಿಯೇ(Ration rice) ನಾಪತ್ತೆಯಾಗಿವೆ. ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಗೋದಾಮಿನಲ್ಲಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ವ್ಯತ್ಯಾಸ ಕಂಡು ಬಂದಿದೆ. ಶಹಾಪುರ ಹಾಗೂ ವಡಗೇರಾ ತಾಲೂಕಿನ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದ(Annabhagya) ಅಕ್ಕಿಯನ್ನು ನೀಡಲು ಸಂಗ್ರಹಿಸಲಾಗಿತ್ತು. ಆದ್ರೆ ಗೋದಾಮಿನಲ್ಲಿ ಇರಬೇಕಿದ್ದ 6,077 ಕ್ಚಿಂಟಾಲ್ ಅಕ್ಕಿ ವ್ಯತ್ಯಾಸವಾಗಿದ್ದು, ಸುಮಾರು 2 ಕೋಟಿ 66 ಲಕ್ಷ ರೂ. ಮೌಲ್ಯದ ಅಕ್ಕಿ ಮಾಯವಾಗಿದೆ. ಜೂನ್ 2- 2023 ರಿಂದ ನವೆಂಬರ್ 23 ರ ಮಧ್ಯದ ಅವಧಿಯಲ್ಲಿ ಪಡಿತರ ಗೋಲ್ಮಾಲ್ ನಡೆದಿದೆ. ಈ ಬಗ್ಗೆ ಅಕ್ಕಿ ಕಳ್ಳತನ ಬಗ್ಗೆ  ಜಿಲ್ಲಾ ಆಹಾರ ನಾಗರಿಕ ಸರಬರಾಜು ವ್ಯವಹಾರಗಳ ಉಪನಿರ್ದೇಶಕ ಭೀಮರಾಯ  ಶಹಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಯಾದಗಿರಿ(Yadgir) ನ್ಯಾಯಬೆಲೆ ಅಂಗಡಿಗೆ ಸಾಗಾಟ ಮಾಡಬೇಕಾದ ಅಕ್ಕಿ ಅಧಿಕಾರಿಗಳೇ ಸಾಗಾಟ ಮಾಡಿದ್ರಾ ಎಂಬ ಅನುಮಾನ ಶುರುವಾಗಿದೆ. ಗೋದಾಮಿನ ಈಗಿನ ಮುಖ್ಯ ಕಾರ್ಯನಿರ್ವಾಹಕ ಶಿವಪ್ಪ ಹಾಗೂ ಈ ಹಿಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜ ಅವರು ತಮ್ಮ ಲಾಭಕ್ಕಾಗಿ ಸಾಗಾಟ ಮಾಡಿದ್ರಾ ಎಂಬ ಅನುಮಾನವಿದೆ. ಈ ಬಗ್ಗೆ ಶಹಾಪುರ ಠಾಣೆಯಲ್ಲಿ ಶಿವಪ್ಪ ಹಾಗೂ ಶಿವರಾಜ ಸಂಘದ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಾಗಿದೆ. ಈ ಪ್ರಕರಣದಲ್ಲಿ ಪ್ರಭಾವಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಪಡಿತರ ಅಕ್ಕಿ ಸಂಗ್ರಹದ ಗೋದಾಮಿಗೆ ಕಾಂಪೌಡ್ ನಿರ್ಮಿಸಿಲ್ಲ..ಪಡಿತರ ಅಕ್ಕಿ ಸಾಗಾಟ ಮಾಡುವ ಲಾರಿಗಳಿಗೆ ಜಿಪಿಎಸ್ ಸಹ ಅಳವಡಿಕೆಯಾಗಿಲ್ಲ.. ಜತೆಗೆ ಸಿಸಿ ಕ್ಯಾಮರಾ ಅಳವಡಿಕೆ ಮಾಡದಿರುವುದೇ ಕಳ್ಳತನಕ್ಕೆ ದಾರಿ ಮಾಡಿ ಕೊಟ್ಟಂತಾಗಿದೆ. ಉದ್ದೇಶ ಪೂರ್ವಕವಾಗಿಯೇ ಸಿಸಿಟಿವಿ,  ಲಾರಿಗಳಿಗೆ ಜಿಪಿಎಸ್ ಅಳವಡಿಸಿಲ್ವಾ ಎಂಬ ಅನುಮಾನವೂ ದಟ್ಟವಾಗಿದೆ.. ಆದ್ರಿಂದ  ಅಕ್ರಮ ಪತ್ತೆಗೆ ಜಿಲ್ಲಾ ಪಂಚಾಯತ್ ಸಿಇಓ ಗರೀಮಾ ಫನ್ವಾರ್ ನೇತೃತ್ವದಲ್ಲಿ  ತಂಡ ರಚಿಸಲಾಗಿದೆ. ಮೂರು ದಿನದೊಳಗೆ ವರದಿ ನೀಡಲು ಡಿಸಿ ಸುಶೀಲಾ.ಬಿ ಸೂಚನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕೆರೆಗಳ ಒಡಲಿಗೆ ಕನ್ನಹಾಕಿದ ಮಾಫಿಯಾ ಗ್ಯಾಂಗ್..! ಧನದಾಹಿಗಳಿಂದ ರೈತರ ಜೀವನಾಡಿ ಕಗ್ಗೊಲೆ !

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more