ಮಲೆನಾಡಿಗರ ಜೀವನಾಡಿಯಾಗಿರುವ ಅಡಿಕೆಗೆ ಇದೀಗ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದೆ. ಈ ರೋಗ ಕಾಣಿಸಿಕೊಂಡ ಮರ ನಿಧಾನಕ್ಕೆ ಒಣಗುತ್ತಿದೆ. ಇದರಿಂದ ಅಡಿಕೆ ಬೆಳೆಗಾರರು ಆತಂಕದಲ್ಲಿದ್ದಾರೆ.
ಶೃಂಗೇರಿ (ಅ. 05): ಮಲೆನಾಡಿಗರ ಜೀವನಾಡಿಯಾಗಿರುವ ಅಡಿಕೆಗೆ ಇದೀಗ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದೆ. ಈ ರೋಗ ಕಾಣಿಸಿಕೊಂಡ ಮರ ನಿಧಾನಕ್ಕೆ ಒಣಗುತ್ತಿದೆ. ಇದರಿಂದ ಅಡಿಕೆ ಬೆಳೆಗಾರರು ಆತಂಕದಲ್ಲಿದ್ದಾರೆ. ಶೃಂಗೇರಿ, ತೀರ್ಥಹಳ್ಳಿ, ಆಗುಂಬೆ, ಸಾಗರ, ಹೊಸನಗರ, ತುಮರಿ ಭಾಗಗಳಲ್ಲಿ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದೆ. ಕೆಲವು ಕಡೇ ಇಡೀ ತೋಟವೇ ನಾಶವಾಗಿದೆ. ಅಡಿಕೆಯನ್ನೇ ನಂಬಿ ಬದುಕುತ್ತಿರುವ ಜನರಿಗೆ ದಿಕ್ಕೇ ತೋಚದಂತಾಗಿದೆ.