ಸಿಬ್ಬಂದಿ ಯಡವಟ್ಟಿನಿಂದ ಮೃತಪಟ್ಟನಾ ಅರ್ಜುನ? ಕಾಡಾನೆ ಎದುರು ಬಲ ಕಳೆದುಕೊಂಡು ಬಲಿ?

ಸಿಬ್ಬಂದಿ ಯಡವಟ್ಟಿನಿಂದ ಮೃತಪಟ್ಟನಾ ಅರ್ಜುನ? ಕಾಡಾನೆ ಎದುರು ಬಲ ಕಳೆದುಕೊಂಡು ಬಲಿ?

Published : Dec 05, 2023, 12:15 PM IST

ಕಾಡಾನೆ ಎದುರು ಬಲ ಕಳೆದುಕೊಂಡು ಬಲಿಯಾದ ಅರ್ಜನ
ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಹೆಚ್ಚಿದ ಒತ್ತಾಯ
ಕಾರ್ಯಾಚರಣೆ ವೇಳೆ ಯಡವಟ್ಟು,ಸೂಕ್ತ ತನಿಖೆಗೆ ಆಗ್ರಹ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆಗೆ ಬೀಳಬೇಕಿದ್ದ ಅರವಳಿಕೆ ಮದ್ದು ಅರ್ಜುನನಿಗೆ ಬಿದ್ದಿದೆ ಎನ್ನಲಾಗ್ತಿದೆ. ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಬಲ ಕಳೆದುಕೊಂಡ ಅರ್ಜುನ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗ್ತಿದೆ. ಕಾಡಾನೆ ಜತೆ ಕಾದಾಡಲಾಗದೆ ಅರ್ಜನ(Arjuna)ಸೋಲಪ್ಪಿದ್ದು, ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಯಡವಟ್ಟು ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮದದಲ್ಲಿದ್ದ ಕಾಡಾನೆ ಸೆರೆಗೆ ಅರಣ್ಯ ಇಲಾಖೆ(forest department) ಮುಂದಾಗಿತ್ತು. ಸೆರೆಗೆ ತೆರಳಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ತಪ್ಪಾಗಿ ಅರ್ಜುನನ ಕಾಲಿಗೆ ತಗುಲಿದೆ ಎಂದು ಹೇಳಲಾಗ್ತಿದೆ.ಈ ಬಗ್ಗೆ ಆನೆ(Elephant) ಮಾವುತರೊಬ್ಬರ ಹೇಳಿಕೆ ನೀಡಿದ್ದಾರೆ. ಕಾಲಿಗೆ ಗುಂಡು ಬೀಳುತ್ತಲೇ ಅರ್ಜುನ ಕುಗ್ಗಿದ್ದಾನೆ. ಹಠಾತ್ ಆಗಿ ಕಾಡಾನೆ ದಾಳಿ ಮಾಡಿದೆ. ಹಾಗಾಗಿ ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆಗೆ ನಡೆಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ವೇಳೆ ಮತ್ತೊಂದು ಅರಣ್ಯ ಇಲಾಖೆ ಕಾರ್ಯಾಚರಣೆ ಸಿಬ್ಬಂದಿ ಯಿಂದ ಮತ್ತೊಂದು  ಯಡವಟ್ಟು ಆಗಿದೆ ಎಂದು ತಿಳಿದುಬಂದಿದೆ. ಕಾಡಾನೆಗೆ ಅರವಳಿಗೆ ಮದ್ದು ನೀಡೋ ವೇಳೆ ಗುರಿ ತಪ್ಪಿ ಮತ್ತೊಂದು ಸಾಕಾನೆಗೆ ಅರವಳಿಕೆಯನ್ನು ಸಿಬ್ಬಂದಿ ನೀಡಿದ್ದಾರೆ. ಮಿಸ್ ಫೈರ್ ಆಗಿ ಸಾಕಾನೆಗೆ ಅರವಳಿಕೆ ಮದ್ದು ಡಾಟ್ ಆಗಿದ್ದರಿಂದ ಕಾರ್ಯಾಚರಣೆ ತಂಡ ಕೂಡ ಬಲಕಳೆದುಕೊಂಡು ಸಮಸ್ಯೆ ಆಗಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಒಂಟಿಯಾಗಿ ಹೋರಾಡಿ ಜೀವತೆತ್ತ ಅರ್ಜುನ: ಕಾಡಾನೆ ಕಾರ್ಯಾಚರಣೆ ವೇಳೆ ಹಂಟರ್ ಸ್ಪೆಷಲಿಸ್ಟ್ ಸಾವು !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more