ಸಿಬ್ಬಂದಿ ಯಡವಟ್ಟಿನಿಂದ ಮೃತಪಟ್ಟನಾ ಅರ್ಜುನ? ಕಾಡಾನೆ ಎದುರು ಬಲ ಕಳೆದುಕೊಂಡು ಬಲಿ?

ಸಿಬ್ಬಂದಿ ಯಡವಟ್ಟಿನಿಂದ ಮೃತಪಟ್ಟನಾ ಅರ್ಜುನ? ಕಾಡಾನೆ ಎದುರು ಬಲ ಕಳೆದುಕೊಂಡು ಬಲಿ?

Published : Dec 05, 2023, 12:15 PM IST

ಕಾಡಾನೆ ಎದುರು ಬಲ ಕಳೆದುಕೊಂಡು ಬಲಿಯಾದ ಅರ್ಜನ
ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಹೆಚ್ಚಿದ ಒತ್ತಾಯ
ಕಾರ್ಯಾಚರಣೆ ವೇಳೆ ಯಡವಟ್ಟು,ಸೂಕ್ತ ತನಿಖೆಗೆ ಆಗ್ರಹ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆಗೆ ಬೀಳಬೇಕಿದ್ದ ಅರವಳಿಕೆ ಮದ್ದು ಅರ್ಜುನನಿಗೆ ಬಿದ್ದಿದೆ ಎನ್ನಲಾಗ್ತಿದೆ. ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಬಲ ಕಳೆದುಕೊಂಡ ಅರ್ಜುನ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗ್ತಿದೆ. ಕಾಡಾನೆ ಜತೆ ಕಾದಾಡಲಾಗದೆ ಅರ್ಜನ(Arjuna)ಸೋಲಪ್ಪಿದ್ದು, ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಯಡವಟ್ಟು ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮದದಲ್ಲಿದ್ದ ಕಾಡಾನೆ ಸೆರೆಗೆ ಅರಣ್ಯ ಇಲಾಖೆ(forest department) ಮುಂದಾಗಿತ್ತು. ಸೆರೆಗೆ ತೆರಳಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ತಪ್ಪಾಗಿ ಅರ್ಜುನನ ಕಾಲಿಗೆ ತಗುಲಿದೆ ಎಂದು ಹೇಳಲಾಗ್ತಿದೆ.ಈ ಬಗ್ಗೆ ಆನೆ(Elephant) ಮಾವುತರೊಬ್ಬರ ಹೇಳಿಕೆ ನೀಡಿದ್ದಾರೆ. ಕಾಲಿಗೆ ಗುಂಡು ಬೀಳುತ್ತಲೇ ಅರ್ಜುನ ಕುಗ್ಗಿದ್ದಾನೆ. ಹಠಾತ್ ಆಗಿ ಕಾಡಾನೆ ದಾಳಿ ಮಾಡಿದೆ. ಹಾಗಾಗಿ ಅರ್ಜುನನ ಸಾವಿನ ಬಗ್ಗೆ ಸೂಕ್ತ ತನಿಖೆಗೆ ನಡೆಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ವೇಳೆ ಮತ್ತೊಂದು ಅರಣ್ಯ ಇಲಾಖೆ ಕಾರ್ಯಾಚರಣೆ ಸಿಬ್ಬಂದಿ ಯಿಂದ ಮತ್ತೊಂದು  ಯಡವಟ್ಟು ಆಗಿದೆ ಎಂದು ತಿಳಿದುಬಂದಿದೆ. ಕಾಡಾನೆಗೆ ಅರವಳಿಗೆ ಮದ್ದು ನೀಡೋ ವೇಳೆ ಗುರಿ ತಪ್ಪಿ ಮತ್ತೊಂದು ಸಾಕಾನೆಗೆ ಅರವಳಿಕೆಯನ್ನು ಸಿಬ್ಬಂದಿ ನೀಡಿದ್ದಾರೆ. ಮಿಸ್ ಫೈರ್ ಆಗಿ ಸಾಕಾನೆಗೆ ಅರವಳಿಕೆ ಮದ್ದು ಡಾಟ್ ಆಗಿದ್ದರಿಂದ ಕಾರ್ಯಾಚರಣೆ ತಂಡ ಕೂಡ ಬಲಕಳೆದುಕೊಂಡು ಸಮಸ್ಯೆ ಆಗಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಒಂಟಿಯಾಗಿ ಹೋರಾಡಿ ಜೀವತೆತ್ತ ಅರ್ಜುನ: ಕಾಡಾನೆ ಕಾರ್ಯಾಚರಣೆ ವೇಳೆ ಹಂಟರ್ ಸ್ಪೆಷಲಿಸ್ಟ್ ಸಾವು !

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more