Impact: ಗೃಹ ಸಚಿವ ತವರಲ್ಲಿ ಲಂಚದ ಹಾವಳಿ, ಆಗುಂಬೆ ಪೋಲಿಸ್ ಠಾಣೆಯ ಎಎಸ್ಐ ಸಸ್ಪೆಂಡ್

Impact: ಗೃಹ ಸಚಿವ ತವರಲ್ಲಿ ಲಂಚದ ಹಾವಳಿ, ಆಗುಂಬೆ ಪೋಲಿಸ್ ಠಾಣೆಯ ಎಎಸ್ಐ ಸಸ್ಪೆಂಡ್

Suvarna News   | Asianet News
Published : Dec 25, 2021, 03:35 PM IST

 ಗೃಹ ಸಚಿವರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ (Thirthahalli) ಹೆಚ್ಚಾದ  ಲಂಚದ ಹಾವಳಿ ಕುರಿತು ಸುವರ್ಣ ನ್ಯೂಸ್ ಸುದ್ದಿ ಬಿತ್ತರಿಸಿತ್ತು. ಸುದ್ದಿ ಪ್ರಸಾರದ ಬೆನ್ನಲ್ಲೇ ಆಗುಂಬೆ ಪೋಲಿಸ್ ಠಾಣೆಯ ಎಎಸ್ಐ ದೇವಿದಾಸ್ ಡಿ ನಾಯಕ್ ಸಸ್ಪೆಂಡ್ (Suspend) ಮಾಡಿ ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ಆದೇಶ ಹೊರಡಿಸಿದ್ದಾರೆ. 
 

ಶಿವಮೊಗ್ಗ (ಡಿ. 25): ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್! ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತವರಲ್ಲೇ ಪೋಲಿಸರ ಲಂಚಾವತಾರಕ್ಕೆ (Bribe) ಬ್ರೇಕ್ ಬಿದ್ದಿದೆ. ಗೃಹ ಸಚಿವರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ (Thirthahalli) ಹೆಚ್ಚಾದ  ಲಂಚದ ಹಾವಳಿ ಕುರಿತು ಸುವರ್ಣ ನ್ಯೂಸ್ ಸುದ್ದಿ ಬಿತ್ತರಿಸಿತ್ತು. ಸುದ್ದಿ ಪ್ರಸಾರದ ಬೆನ್ನಲ್ಲೇ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಪೋಲಿಸ್ ಠಾಣೆಯ ಎಎಸ್ಐ ದೇವಿದಾಸ್ ಡಿ ನಾಯಕ್ ಸಸ್ಪೆಂಡ್ (Suspend) ಮಾಡಿ ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ಆದೇಶ ಹೊರಡಿಸಿದ್ದಾರೆ. 

ಪೋಲಿಸರ ಬಗ್ಗೆ ಗೃಹಸಚಿವರು ನೀಡಿದ ಹೇಳಿಕೆಗೆ ಪುಷ್ಟಿ ನೀಡಿದ್ದ ಪ್ರಕರಣ ಇದಾಗಿತ್ತು. ಗೃಹ ಸಚಿವರು ಬಹಿರಂಗವಾಗಿ ಕೆಲ ಪೊಲೀಸ್ ಇಲಾಖೆಯಲ್ಲಿ ಕೆಲ ಅಧಿಕಾರಿಗಳು ಎಂಜಲು ಕಾಸಿಗೆ ಅಂದರೆ ಲಂಚದ ಹಣಕ್ಕೆ ಬಾಯ್ಬಿಡುತ್ತಾರೆ ಎಂದು ನೀಡಿದ್ದ ಹೇಳಿಕೆಗೆ ಇಂಬು ನೀಡಿತ್ತು. ಏಷ್ಯಾನೆಟ್ ಸುವರ್ಣ ನ್ಯೂಸ್  ಪೋಲಿಸರ ಲಂಚವತಾರದ ಬಗ್ಗೆ ಸಾಕ್ಷಿ ಸಮೇತ ಪ್ರಸಾರ ಮಾಡಿತ್ತು. ಪೊಲೀಸ್ ಅಧಿಕಾರಿ ಮೊಬೈಲ್ ಕರೆ ಮಾಡಿ ಲಂಚದ ಬೇಡಿಕೆ ಇಟ್ಟಿದ್ದು, ಲಂಚದ ಹಣ ನೀಡಲು ತಡ ಮಾಡಿದ್ದಕ್ಕೆ ಪೋಲಿಸಪ್ಪ ನಿಂದಿಸೋದು ಎಲ್ಲಾ ಬಟಾಬಯಲಾಗಿತ್ತು.

ಆಗುಂಬೆ ಠಾಣೆಯ ASI ದೇವದಾಸ್ ಡಿ ನಾಯಕ್ ಎಂಬಾತನ ಲಂಚಗುಳಿತನ ಬಗ್ಗೆ ಪ್ರಸಾರ ಮಾಡಿತ್ತು. ಸಬ್ ಇನ್ಸ್ ಪೆಕ್ಟರ್ ಕೊರೊನಾ  ರಜೆಯಲ್ಲಿದ್ದಾಗ ಇನ್ಚಾರ್ಚ್ ಎಎಸ್ಐ ನಡೆಸಿದ್ದ ಲಂಚಾವತಾರದ ದರ್ಬಾರ್ ಬಟಾಬಯಲಾಗಿತ್ತು. ಆಗುಂಬೆ ಗ್ರಾಪಂ ಕಳೆದ 3 ವರ್ಷಗಳಿಂದ ನೀರುಗಂಟಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಂಜನ್ ಎಂಬಾತನಿಗೆ ಲಂಚದ ಹಣ ನೀಡಲು ತಡವಾಗಿದ್ದಕ್ಕೆ ಆತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತನ್ನ ಕ್ರೌರ್ಯವನ್ನು ಮೆರೆದಿದ್ದ. ಈ ಹಿಂದೆ ನೀರಗಂಟಿ ಮತ್ತು ಗ್ರಾಪಂ ಉಪಾಧ್ಯಕ್ಷ ರಾಘವೇಂದ್ರ ಎಂಬುವವರ ಜೊತೆಗೆ ಜಗಳವಾಡಿದ್ದ ಪ್ರಕರಣ ಇದಾಗಿತ್ತು.

ಪ್ರಕರಣಕ್ಕೆ ಸಂಬಂಧಪಟ್ಟಂತೆ 5 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟು ಪೋಲಿಸಪ್ಪ ಹಾಕಿದ್ದ ಒತ್ತಡ ಹಾಕಿದ್ದ. ಈ ಬಗ್ಗೆ ಸುವರ್ಣನ್ಯೂಸ್ ವರದಿ ಭಿತ್ತರವಾಗುತ್ತಿದ್ದಂತೆ , ಎಸ್ಪಿ ಸೂಚನೆಯ ಮೇರೆಗೆ ತನಿಖೆ ನಡೆಸಿದ್ದ ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರ ಈ ಪ್ರಕರಣ ದಲ್ಲಿ ಸತ್ಯಾಂಶ ಇದೆ ಎಂದು ಎಸ್ಪಿ ಲಕ್ಷ್ಮೀ ಪ್ರಸಾದ್‌ಗೆ ವರದಿ ನೀಡಿದ್ದರು.  ಡಿವೈಎಸ್ಪಿ ವರದಿ ನೀಡುತ್ತಿದ್ದಂತೆ ಎಎಸ್ಐ ಸಸ್ಪೆಂಡ್ ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more